<p><strong>ನವದೆಹಲಿ (ಪಿಟಿಐ):</strong> ಪ್ರಸಾರ ಮಾಧ್ಯಮಗಳ (ಟಿವಿ) ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ದಿಸೆಯಲ್ಲಿ ಭಾರತೀಯ ಪತ್ರಿಕಾ ಮಂಡಳಿ ಹಾಗೂ ಟಿವಿ ಚಾನೆಲ್ಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚನೆಗೆ ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾ. ಮಾರ್ಕಂಡೇಯ ಖಟ್ಜು ಪ್ರಸ್ತಾಪ ಮುಂದಿಟ್ಟಿದಾರೆ.<br /> <br /> ಈ ಸಂಬಂಧ ಟಿವಿ ಚಾನೆಲ್ಗಳ ಸಂಪಾದಕರುಗಳಿಗೆ ಅವರು ಪತ್ರ ಬರೆದಿದ್ದಾರೆ. ಬ್ರಾಡ್ಕಾಸ್ಟ್ ಎಡಿಟರ್ಸ್ ಅಸೋಸಿಯೇಷನ್ (ಬಿಇಎ) ಅಧ್ಯಕ್ಷ ಶಾಜಿ ಜಮಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸಿಂಗ್ ಅವರಿಗೆ ಪತ್ರ ಬರೆದಿರುವ ಖಟ್ಜು, ಈ ಸಮಿತಿಯಲ್ಲಿ ಪತ್ರಿಕಾ ಮಂಡಳಿ ಹಾಗೂ `ಬಿಇಎ~ ಸಮಾನ ಸಂಖ್ಯೆಯ ಸದಸ್ಯರನ್ನು ಹೊಂದಬಹುದು ಎಂಬ ಸಲಹೆ ನೀಡಿದ್ದಾರೆ. <br /> <br /> ದೇಶದ ಹಲವು ಭಾಗಗಳಲ್ಲಿ ಪ್ರಸಾರ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಂಟಿ ಸಮಿತಿ ರಚನೆ ಅನಿವಾರ್ಯ ಹಾಗೂ ಅಗತ್ಯವಾಗಿದೆ ಎಂದು ಖಟ್ಜು ಈ ಪತ್ರದಲ್ಲಿ ವಿವರಿಸಿದ್ದಾರೆ.<br /> <br /> `ಮಾಧ್ಯಮ ಪ್ರತಿನಿಧಿಗಳ ವಿರುದ್ಧ ದೈಹಿಕ ಹಲ್ಲೆಯ ಘಟನೆಗಳು, ತಮ್ಮ ವಿರುದ್ಧ ಬರೆಯುವ ಪತ್ರಕರ್ತರನ್ನು ವಜಾಗೊಳಿಸುವಂತೆ ಸರ್ಕಾರಗಳು ಪತ್ರಿಕಾ ಸಂಸ್ಥೆಗಳ ಮೇಲೆ ಒತ್ತಡ ತರುವ ವಿದ್ಯಮಾನಗಳು ಮೇಲಿಂದ ಮೇಲೆ ಬೆಳಕಿಗೆ ಬರುತ್ತಿವೆ.~<br /> <br /> `ಪತ್ರಿಕಾ ಮಂಡಳಿ ಕೇವಲ ಪತ್ರಿಕಾ ಮಾಧ್ಯಮದ ಆಗುಹೋಗುಗಳ ಬಗ್ಗೆ ನಿಗಾ ವಹಿಸುತ್ತಿದ್ದರೂ ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ ಹಾಗೂ ಮಹಾರಾಷ್ಟ್ರದಲ್ಲಿ ವಿದ್ಯುನ್ಮಾನ ಮಾಧ್ಯಮದ ಸ್ವಾತಂತ್ರ್ಯಕ್ಕಾಗಿಯೂ ನಾನು ಹೋರಾಡುತ್ತಿದ್ದೇನೆ~ ಎಂದು ಅವರು ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರಸಾರ ಮಾಧ್ಯಮಗಳ (ಟಿವಿ) ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ದಿಸೆಯಲ್ಲಿ ಭಾರತೀಯ ಪತ್ರಿಕಾ ಮಂಡಳಿ ಹಾಗೂ ಟಿವಿ ಚಾನೆಲ್ಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚನೆಗೆ ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾ. ಮಾರ್ಕಂಡೇಯ ಖಟ್ಜು ಪ್ರಸ್ತಾಪ ಮುಂದಿಟ್ಟಿದಾರೆ.<br /> <br /> ಈ ಸಂಬಂಧ ಟಿವಿ ಚಾನೆಲ್ಗಳ ಸಂಪಾದಕರುಗಳಿಗೆ ಅವರು ಪತ್ರ ಬರೆದಿದ್ದಾರೆ. ಬ್ರಾಡ್ಕಾಸ್ಟ್ ಎಡಿಟರ್ಸ್ ಅಸೋಸಿಯೇಷನ್ (ಬಿಇಎ) ಅಧ್ಯಕ್ಷ ಶಾಜಿ ಜಮಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸಿಂಗ್ ಅವರಿಗೆ ಪತ್ರ ಬರೆದಿರುವ ಖಟ್ಜು, ಈ ಸಮಿತಿಯಲ್ಲಿ ಪತ್ರಿಕಾ ಮಂಡಳಿ ಹಾಗೂ `ಬಿಇಎ~ ಸಮಾನ ಸಂಖ್ಯೆಯ ಸದಸ್ಯರನ್ನು ಹೊಂದಬಹುದು ಎಂಬ ಸಲಹೆ ನೀಡಿದ್ದಾರೆ. <br /> <br /> ದೇಶದ ಹಲವು ಭಾಗಗಳಲ್ಲಿ ಪ್ರಸಾರ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಂಟಿ ಸಮಿತಿ ರಚನೆ ಅನಿವಾರ್ಯ ಹಾಗೂ ಅಗತ್ಯವಾಗಿದೆ ಎಂದು ಖಟ್ಜು ಈ ಪತ್ರದಲ್ಲಿ ವಿವರಿಸಿದ್ದಾರೆ.<br /> <br /> `ಮಾಧ್ಯಮ ಪ್ರತಿನಿಧಿಗಳ ವಿರುದ್ಧ ದೈಹಿಕ ಹಲ್ಲೆಯ ಘಟನೆಗಳು, ತಮ್ಮ ವಿರುದ್ಧ ಬರೆಯುವ ಪತ್ರಕರ್ತರನ್ನು ವಜಾಗೊಳಿಸುವಂತೆ ಸರ್ಕಾರಗಳು ಪತ್ರಿಕಾ ಸಂಸ್ಥೆಗಳ ಮೇಲೆ ಒತ್ತಡ ತರುವ ವಿದ್ಯಮಾನಗಳು ಮೇಲಿಂದ ಮೇಲೆ ಬೆಳಕಿಗೆ ಬರುತ್ತಿವೆ.~<br /> <br /> `ಪತ್ರಿಕಾ ಮಂಡಳಿ ಕೇವಲ ಪತ್ರಿಕಾ ಮಾಧ್ಯಮದ ಆಗುಹೋಗುಗಳ ಬಗ್ಗೆ ನಿಗಾ ವಹಿಸುತ್ತಿದ್ದರೂ ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ ಹಾಗೂ ಮಹಾರಾಷ್ಟ್ರದಲ್ಲಿ ವಿದ್ಯುನ್ಮಾನ ಮಾಧ್ಯಮದ ಸ್ವಾತಂತ್ರ್ಯಕ್ಕಾಗಿಯೂ ನಾನು ಹೋರಾಡುತ್ತಿದ್ದೇನೆ~ ಎಂದು ಅವರು ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>