ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿಸದ ಸಹೋದ್ಯೋಗಿಗೆ ಇರಿದು ಕೊಂದ ಟೆಕ್ಕಿ

Last Updated 22 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಚೆನ್ನೈ: ಪ್ರೀತಿಸಲು ನಿರಾಕರಿಸಿದ ಸಹೋ­ದ್ಯೋಗಿ­­ಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರು ಯತ್ನಿಸಿದ ಘಟನೆ ನಡೆದಿದೆ.

ವೆಲಚೆರಿಯ ಟಾಟಾ ಕನ್ಸಲ್ಟೆನ್ಸಿಯಲ್ಲಿ ಉದ್ಯೋಗಿಯಾಗಿದ್ದ ವೆಂಕಟಾ­ಚಲ­ಪತಿ (29) ದುಷ್ಕೃತ್ಯ ಎಸಗಿದ ಆರೋಪಿ. ಜಿ.ವೈಶ್ಯ (24) ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ತಾನು ಬಯಸಿದ್ದ ಯುವತಿ ಮತ್ತೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು  ಆಕ್ರೋಶಗೊಂಡು ಆರೋಪಿ ಈ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

‘ಸಹೋದ್ಯೋಗಿ ಯುವತಿ ಕೆಲವು ದಿನಗಳಿಂದ ಮತ್ತೊಬ್ಬ ಯುವಕನ ಜತೆ ಇದ್ದಳು. ಇದನ್ನು ಅರಿತ ಆರೋಪಿಯು ಆಕೆಗೆ ಕರೆ ಮಾಡಿ ಪೆರುಂಗುಡಿ ರೈಲು ನಿಲ್ದಾಣದಲ್ಲಿ ಭೇಟಿಯಾಗುವಂತೆ ಕೇಳಿಕೊಂಡ. ಅದರಂತೆ ಆಕೆ ಅಲ್ಲಿಗೆ ಬಂದಾಗ ಜಗಳ ಶುರು ಮಾಡಿ ಚಾಕುವಿನಿಂದ ಮನಬಂದಂತೆ ಇರಿದ. ನಂತರ ತಾನೂ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ’ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿರುವ ಆರೋಪಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT