<p><strong>ನವದೆಹಲಿ(ಪಿಟಿಐ): </strong>ಫೆ. 29ರಂದು ಪ್ರಸಕ್ತ 2016–17ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು, ಮುಂದಿನ ಮೂರು ವರ್ಷಗಳಿಗೆ ದಿಕ್ಸೂಚಿಯಾಗಲಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಜಯಂತ್ ಸಿನ್ಹಾ ಹೇಳಿದರು.<br /> <br /> ಭಾರತ- ಕೊರಿಯಾ ಉದ್ಯಮ ಶೃಂಗಸಭೆಯಲ್ಲಿ ಮಾತನಾಡಿದ ಸಿನ್ಹಾ ಅವರು, ಫೆ. 29ರಂದು ಬಜೆಟ್ ಮಂಡನೆಗಾಗಿ ಭರದ ಸಿದ್ಧತೆ ನಡೆದಿದೆ. ಪ್ರಸ್ತುತ ಬಜೆಟ್ ಮುಂದಿನ ಮೂರು ವರ್ಷಗಳಿಗೆ ದಿಕ್ಸೂಚಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿವೆ. ಸುಸ್ಥಿರ ಅಭಿವೃದ್ಧಿ ಮತ್ತು ದೂರದೃಷ್ಟಿಯ ಅಭಿವೃದ್ಧಿ ಗುರಿಯನ್ನು ಬಜೆಟ್ ಒಳಗೊಂಡಿದೆ ಎಂದು ಅವರು ಹೇಳಿದರು.<br /> <br /> ಬಜೆಟ್ ರಚನಾ ಸಮಿತಿಯಲ್ಲಿ ಜಯಂತ್ ಸಿನ್ಹಾ ಹಾಗೂ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಹಾಗೂ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯ ಇದ್ದಾರೆ.<br /> <br /> ಸರ್ಕಾರ ಕೃಷಿ ಉತ್ಪಾದನೆಗೆ ಒತ್ತು ನೀಡುತ್ತಿದೆ. ಸರ್ವರಿಗೂ ಸಾಮಾಜಿಕ ಭದ್ರತೆ ಒದಗಿಸು ನಿಟ್ಟಿನಲ್ಲಿ ವಿನಿಯೋಗಿಸಲಿದೆ. ಆರ್ಥಿಕ ಪುನಶ್ಷೇತನ ಮತ್ತು ಹೂಡಿಕೆ ಹಾಗೂ ಮೂಲಸೌಲಭ್ಯಕ್ಕೆ ಒತ್ತು ನೀಡುವುದು ಪ್ರಸಕ್ತ ಬಜೆಟ್ನ ಪ್ರಮುಖ ಅಂಶಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ): </strong>ಫೆ. 29ರಂದು ಪ್ರಸಕ್ತ 2016–17ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು, ಮುಂದಿನ ಮೂರು ವರ್ಷಗಳಿಗೆ ದಿಕ್ಸೂಚಿಯಾಗಲಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಜಯಂತ್ ಸಿನ್ಹಾ ಹೇಳಿದರು.<br /> <br /> ಭಾರತ- ಕೊರಿಯಾ ಉದ್ಯಮ ಶೃಂಗಸಭೆಯಲ್ಲಿ ಮಾತನಾಡಿದ ಸಿನ್ಹಾ ಅವರು, ಫೆ. 29ರಂದು ಬಜೆಟ್ ಮಂಡನೆಗಾಗಿ ಭರದ ಸಿದ್ಧತೆ ನಡೆದಿದೆ. ಪ್ರಸ್ತುತ ಬಜೆಟ್ ಮುಂದಿನ ಮೂರು ವರ್ಷಗಳಿಗೆ ದಿಕ್ಸೂಚಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿವೆ. ಸುಸ್ಥಿರ ಅಭಿವೃದ್ಧಿ ಮತ್ತು ದೂರದೃಷ್ಟಿಯ ಅಭಿವೃದ್ಧಿ ಗುರಿಯನ್ನು ಬಜೆಟ್ ಒಳಗೊಂಡಿದೆ ಎಂದು ಅವರು ಹೇಳಿದರು.<br /> <br /> ಬಜೆಟ್ ರಚನಾ ಸಮಿತಿಯಲ್ಲಿ ಜಯಂತ್ ಸಿನ್ಹಾ ಹಾಗೂ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಹಾಗೂ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯ ಇದ್ದಾರೆ.<br /> <br /> ಸರ್ಕಾರ ಕೃಷಿ ಉತ್ಪಾದನೆಗೆ ಒತ್ತು ನೀಡುತ್ತಿದೆ. ಸರ್ವರಿಗೂ ಸಾಮಾಜಿಕ ಭದ್ರತೆ ಒದಗಿಸು ನಿಟ್ಟಿನಲ್ಲಿ ವಿನಿಯೋಗಿಸಲಿದೆ. ಆರ್ಥಿಕ ಪುನಶ್ಷೇತನ ಮತ್ತು ಹೂಡಿಕೆ ಹಾಗೂ ಮೂಲಸೌಲಭ್ಯಕ್ಕೆ ಒತ್ತು ನೀಡುವುದು ಪ್ರಸಕ್ತ ಬಜೆಟ್ನ ಪ್ರಮುಖ ಅಂಶಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>