ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಎಂ.ಸುಂದರ್ ಅವರಿರುವ ದ್ವಿಸದಸ್ಯ ಪೀಠ ಮಧ್ಯಾಹ್ನ 1 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಎಐಎಡಿಎಂಕೆ ನಾಯಕಿ, ಜೈಲು ಶಿಕ್ಷೆ ಅನುಭವಿಸುತ್ತಿರುವ ವಿ.ಕೆ.ಶಶಿಕಲಾ ಮತ್ತು ಅವರ ಸೋದರಳಿಯ ಟಿ.ಟಿ.ವಿ.ದಿನಕರನ್ ಅವರ ಪರವಾಗಿರುವ 18 ಶಾಸಕರು, ಮುಖ್ಯಮಂತ್ರಿಗೆ ನೀಡಿದ್ದ ಬೆಂಬಲವನ್ನು ಆಗಸ್ಟ್ನಲ್ಲಿ ಹಿಂತೆಗೆದುಕೊಂಡಿದ್ದಾರೆ. ನಂತರ ಈ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.