<p><span style="font-size: medium"><strong>ಮುಂಬೈ, (ಪಿಟಿಐ):</strong> ಠಾಣೆ ಜಿಲ್ಲೆಯ ನೆರೆಯಲ್ಲಿನ ದೊಂಬಿವಲಿಯಲ್ಲಿನ ಬಟ್ಟೆ ಗಿರಣಿಯೊಂದಕ್ಕೆ ಬೆಂಕಿ ಬಿದ್ದು ನಾಲ್ವರು ಗಿರಣಿ ಕಾರ್ಮಿಕರು ಮೃತರಾದ ದಾರುಣ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.</span></p>.<p><span style="font-size: medium">ದೊಂಬಿವಲಿಯ ಕೈಗಾರಿಕಾ ಪ್ರದೇಶದಲ್ಲಿರುವ ಪೂಜಾ ಫ್ಯಾಬ್ರಿಕ್ಸ್ ಬಟ್ಟೆ ಗಿರಣಿಯಲ್ಲಿ ಗುರುವಾರ ನಸುಕಿನ 3.30 ರಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</span></p>.<p><span style="font-size: medium">ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದ 18 ಜನ ಗಿರಣಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಐದು ಅಗ್ನಿಶಾಮಕ ದಳದ ನೀರಿನ ಟ್ಯಾಂಕರ್ ಗಳು ಬೆಂಕಿಯನ್ನು ನಂದಿಸುವಲ್ಲಿ ಶ್ರಮಿಸುತ್ತಿವೆ.</span></p>.<p><span style="font-size: medium">ತಾಂತ್ರಿಕ ಕಾರಣದಿಂದ ಈ ಬಟ್ಟೆ ಗಿರಣಿಯಲ್ಲಿ ಬೆಂಕಿ ಕಾಣಿಸಿಕೊಂಡಿರಬೇಕೆಂದು ಶಂಕಿಸಲಾಗಿದೆ. ಬೆಂಕಿಯಲ್ಲಿ ಮೃತಪಟ್ಟವರು ಗುರುತು ಇನ್ನೂ ಪತ್ತೆಯಾಗಿಲ್ಲ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: medium"><strong>ಮುಂಬೈ, (ಪಿಟಿಐ):</strong> ಠಾಣೆ ಜಿಲ್ಲೆಯ ನೆರೆಯಲ್ಲಿನ ದೊಂಬಿವಲಿಯಲ್ಲಿನ ಬಟ್ಟೆ ಗಿರಣಿಯೊಂದಕ್ಕೆ ಬೆಂಕಿ ಬಿದ್ದು ನಾಲ್ವರು ಗಿರಣಿ ಕಾರ್ಮಿಕರು ಮೃತರಾದ ದಾರುಣ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.</span></p>.<p><span style="font-size: medium">ದೊಂಬಿವಲಿಯ ಕೈಗಾರಿಕಾ ಪ್ರದೇಶದಲ್ಲಿರುವ ಪೂಜಾ ಫ್ಯಾಬ್ರಿಕ್ಸ್ ಬಟ್ಟೆ ಗಿರಣಿಯಲ್ಲಿ ಗುರುವಾರ ನಸುಕಿನ 3.30 ರಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</span></p>.<p><span style="font-size: medium">ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿಯಲ್ಲಿ ಸಿಲುಕಿಕೊಂಡಿದ್ದ 18 ಜನ ಗಿರಣಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಐದು ಅಗ್ನಿಶಾಮಕ ದಳದ ನೀರಿನ ಟ್ಯಾಂಕರ್ ಗಳು ಬೆಂಕಿಯನ್ನು ನಂದಿಸುವಲ್ಲಿ ಶ್ರಮಿಸುತ್ತಿವೆ.</span></p>.<p><span style="font-size: medium">ತಾಂತ್ರಿಕ ಕಾರಣದಿಂದ ಈ ಬಟ್ಟೆ ಗಿರಣಿಯಲ್ಲಿ ಬೆಂಕಿ ಕಾಣಿಸಿಕೊಂಡಿರಬೇಕೆಂದು ಶಂಕಿಸಲಾಗಿದೆ. ಬೆಂಕಿಯಲ್ಲಿ ಮೃತಪಟ್ಟವರು ಗುರುತು ಇನ್ನೂ ಪತ್ತೆಯಾಗಿಲ್ಲ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>