ನವದೆಹಲಿ: ‘ಬಡ್ತಿ ಮೀಸಲಾತಿ ವಿಧಾನ ಅನುಸರಿಸುವ 2002ರ ಕಾಯ್ದೆ ರದ್ದತಿ ಆದೇಶ ಪಾಲಿಸುವ ನಿಟ್ಟಿನಲ್ಲಿ, ಒಂದು ತಿಂಗಳೊಳಗೆ ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಸೋಮವಾರ ಮತ್ತೆ ಸೂಚಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣ ಕುರಿತು ಯಥಾಸ್ಥಿತಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದೆ.