<p><span style="font-size: 26px;"><strong>ಲಖನೌ</strong>: ಆನಂದ್ ಕುಮಾರ್ ಎಂಬುವವರು ತಮ್ಮ ಸಂಬಂಧಿಕರಿಗೆ ದೂರವಾಣಿ ಕರೆ ಮಾಡಿದ್ದು, ತಾವು ಕಳೆದ ಮೂರು ದಿನಗಳಿಂದ ಗಂಗೋತ್ರಿ ಹಾಗೂ ಉತ್ತರಕಾಶಿಯ ನಡುವೆ ಸಿಲುಕಿಕೊಂಡಿದ್ದು, ಆಹಾರದ ಪೊಟ್ಟಣಗಳಿಗಾಗಿ ಅಲೆದಾಡಬೇಕಾಗಿದೆ ಎಂದು ತಮ್ಮ ದುಃಖ ತೋಡಿಕೊಂಡಿದ್ದು, ತಮ್ಮನ್ನು ಅಲ್ಲಿಂದ ರಕ್ಷಿಸುವಂತೆ ಕೇಳಿಕೊಂಡಿದ್ದಾರೆ.</span><br /> <br /> ಹೀಗೆ ಉತ್ತರಾಖಂಡ ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಬದುಕುಳಿದಿರುವ ಅನೇಕರು ತಮ್ಮ ಹತ್ತಿರದ ಆತ್ಮೀಯರು ಹಾಗೂ ಸಂಬಂಧಿಗಳೊಂದಿಗೆ ಮಾತನಾಡುವಾಗ ತಮಗಾದ ಘೋರ ಅನುಭವಗಳ ಕುರಿತು ವಿವರಣೆ ನೀಡಿದ್ದಾರೆ.<br /> <br /> 70 ಮಂದಿ ಬದುಕುಳಿದಿದ್ದು, ನೂರಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕ ಬದುಕುಳಿದವರು ಯಾತ್ರಿಗಳು ಸಾಯುವುದನ್ನು ಕಣ್ಣಾರೆ ಕಂಡಿದ್ದಾರೆ. ಆಕಾಶ್ ಕುಮಾರ್ ಎಂಬುವವರು ಗೌರಿಕುಂಡದ ಬಳಿ ಕಂದಕಕ್ಕೆ ಬಾಲಕಿಯೊಬ್ಬಳು ಜಾರಿ ಬೀಳುತ್ತಿರುವುದನ್ನು ಕಣ್ಣಾರೆ ನೋಡಿದೆ ಎಂದು ಹೇಳಿಕೊಂಡಿದ್ದಾರೆ.<br /> <br /> ಅನೇಕರು ಬೇರೆ ಬೇರೆ ಬೆಟ್ಟಗಳ ಮಧ್ಯದಲ್ಲಿ ಸಿಲುಕಿಕೊಂಡಿದ್ದು, ತಮ್ಮ ಮನೆಗಳಿಗೆ ತಲುಪುವ ಆಸೆಯನ್ನೇ ಬಿಟ್ಟಿದ್ದಾರೆ. ಅವರೆಲ್ಲರೂ ಪ್ರಕೃತಿಯ ಕರುಣೆಗಾಗಿ ಕಾಯುತ್ತಿದ್ದಾರೆ. ಹವಾಮಾನ ಸಹಜ ಸ್ಥಿತಿಗೆ ಮರಳಿದರೆ ತಮ್ಮ `ಛಾತ್ರಧಾಮ ಯಾತ್ರೆ'ಯನ್ನು (ಬದರೀನಾಥ, ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ)ಪೂರ್ಣಗೊಳಿಸಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಲಖನೌ</strong>: ಆನಂದ್ ಕುಮಾರ್ ಎಂಬುವವರು ತಮ್ಮ ಸಂಬಂಧಿಕರಿಗೆ ದೂರವಾಣಿ ಕರೆ ಮಾಡಿದ್ದು, ತಾವು ಕಳೆದ ಮೂರು ದಿನಗಳಿಂದ ಗಂಗೋತ್ರಿ ಹಾಗೂ ಉತ್ತರಕಾಶಿಯ ನಡುವೆ ಸಿಲುಕಿಕೊಂಡಿದ್ದು, ಆಹಾರದ ಪೊಟ್ಟಣಗಳಿಗಾಗಿ ಅಲೆದಾಡಬೇಕಾಗಿದೆ ಎಂದು ತಮ್ಮ ದುಃಖ ತೋಡಿಕೊಂಡಿದ್ದು, ತಮ್ಮನ್ನು ಅಲ್ಲಿಂದ ರಕ್ಷಿಸುವಂತೆ ಕೇಳಿಕೊಂಡಿದ್ದಾರೆ.</span><br /> <br /> ಹೀಗೆ ಉತ್ತರಾಖಂಡ ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಬದುಕುಳಿದಿರುವ ಅನೇಕರು ತಮ್ಮ ಹತ್ತಿರದ ಆತ್ಮೀಯರು ಹಾಗೂ ಸಂಬಂಧಿಗಳೊಂದಿಗೆ ಮಾತನಾಡುವಾಗ ತಮಗಾದ ಘೋರ ಅನುಭವಗಳ ಕುರಿತು ವಿವರಣೆ ನೀಡಿದ್ದಾರೆ.<br /> <br /> 70 ಮಂದಿ ಬದುಕುಳಿದಿದ್ದು, ನೂರಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕ ಬದುಕುಳಿದವರು ಯಾತ್ರಿಗಳು ಸಾಯುವುದನ್ನು ಕಣ್ಣಾರೆ ಕಂಡಿದ್ದಾರೆ. ಆಕಾಶ್ ಕುಮಾರ್ ಎಂಬುವವರು ಗೌರಿಕುಂಡದ ಬಳಿ ಕಂದಕಕ್ಕೆ ಬಾಲಕಿಯೊಬ್ಬಳು ಜಾರಿ ಬೀಳುತ್ತಿರುವುದನ್ನು ಕಣ್ಣಾರೆ ನೋಡಿದೆ ಎಂದು ಹೇಳಿಕೊಂಡಿದ್ದಾರೆ.<br /> <br /> ಅನೇಕರು ಬೇರೆ ಬೇರೆ ಬೆಟ್ಟಗಳ ಮಧ್ಯದಲ್ಲಿ ಸಿಲುಕಿಕೊಂಡಿದ್ದು, ತಮ್ಮ ಮನೆಗಳಿಗೆ ತಲುಪುವ ಆಸೆಯನ್ನೇ ಬಿಟ್ಟಿದ್ದಾರೆ. ಅವರೆಲ್ಲರೂ ಪ್ರಕೃತಿಯ ಕರುಣೆಗಾಗಿ ಕಾಯುತ್ತಿದ್ದಾರೆ. ಹವಾಮಾನ ಸಹಜ ಸ್ಥಿತಿಗೆ ಮರಳಿದರೆ ತಮ್ಮ `ಛಾತ್ರಧಾಮ ಯಾತ್ರೆ'ಯನ್ನು (ಬದರೀನಾಥ, ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ)ಪೂರ್ಣಗೊಳಿಸಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>