<p><span style="font-size: medium"><strong>ನವದೆಹಲಿ, (ಪಿಟಿಐ):</strong> ಆಂಧ್ರ ಪ್ರದೇಶದ ಓಬಳಾಪುರಂ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ನಡುವಿನ ಸಂಬಂಧಗಳ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ನಿರ್ದೇಶನ ನೀಡಿದೆ.</span></p>.<p><span style="font-size: medium">ಜೊತೆಗೆ ಬಂಧಿತ ರೆಡ್ಡಿ ಸಹೋದರರ ಮಾಲಿಕತ್ವದ ಓಬಳಾಪುರಂ ಗಣಿ ಸಂಸ್ಥೆಯ ಕುರಿತಂತೆ ಸಿಬಿಐ ಇದುವರೆಗೆ ಕೈಗೊಂಡಿರುವ ತನಿಖೆಯ ಸದ್ಯದ ಮಾಹಿತಿಯ ವರದಿ ನೀಡುವಂತೆಯೂ ಸೂಚಿಸಿದೆ.</span></p>.<p><span style="font-size: medium"><strong>ಐಎಎನ್ಎಸ್ ವರದಿ:</strong> ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಸುಪ್ರೀಂ ಕೋರ್ಟಿನ ಅರಣ್ಯ ಪೀಠ, ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಹೊಂದಿರುವ ಕರ್ನಾಟಕದ ಎರಡು ಗಣಿ ಸಂಸ್ಥೆಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಶುಕ್ರವಾರ ಆದೇಶ ನೀಡಿದೆ.</span></p>.<p><span style="font-size: medium">ಕರ್ನಾಟಕದ ಮಾಜಿ ಸಚಿವ ಜಿ, ಜನಾರ್ದನ ರೆಡ್ಡಿ ಅವರ ಮಾಲಿಕತ್ವದ ಅಸೋಸಿಯೇಟೆಡ್ ಮೈನಿಂಗ ಕಂಪೆನಿ ಮತ್ತು ಎಸ್.ಎಂ ಜೈನ್ ಮಾಲಿಕತ್ವದ ಡೆಕ್ಕನ್ ಮೈನಿಂಗ್ ಸಿಂಡಿಕೇಟ್ ಸಂಸ್ಥೆಗಳು ನಡೆಸಿರಬಹುದಾದ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಲು ಸೂಚಿಸಲಾಗಿದೆ.</span></p>.<p><span style="font-size: medium">ಆಂಧ್ರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಆರೋಪದ ಮೇಲೆ ಕರ್ನಾಟಕದ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಮತ್ತು ಭಾವ ಶ್ರೀನಿವಾಸ ರೆಡ್ಡಿ ಅವರನ್ನು ಈಗಾಗಲೇ ಬಂಧಿಸಿ ಜೈಲಿನಲ್ಲಿರಿಸಲಾಗಿದೆ.</span></p>.<p><span style="font-size: medium">ಬುಧವಾರ ಸುಪ್ರೀಂ ಕೋರ್ಟ್ ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ)ಯು ರೆಡ್ಡಿಗಳು ಕರ್ನಾಟಕದಲ್ಲಿ ಹೊಂದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆಯೂ ಸಿಬಿಐ ತನಿಖೆ ನಡೆಸುವಂತೆ ಸಲಹೆ ನೀಡಿತ್ತು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: medium"><strong>ನವದೆಹಲಿ, (ಪಿಟಿಐ):</strong> ಆಂಧ್ರ ಪ್ರದೇಶದ ಓಬಳಾಪುರಂ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ನಡುವಿನ ಸಂಬಂಧಗಳ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ನಿರ್ದೇಶನ ನೀಡಿದೆ.</span></p>.<p><span style="font-size: medium">ಜೊತೆಗೆ ಬಂಧಿತ ರೆಡ್ಡಿ ಸಹೋದರರ ಮಾಲಿಕತ್ವದ ಓಬಳಾಪುರಂ ಗಣಿ ಸಂಸ್ಥೆಯ ಕುರಿತಂತೆ ಸಿಬಿಐ ಇದುವರೆಗೆ ಕೈಗೊಂಡಿರುವ ತನಿಖೆಯ ಸದ್ಯದ ಮಾಹಿತಿಯ ವರದಿ ನೀಡುವಂತೆಯೂ ಸೂಚಿಸಿದೆ.</span></p>.<p><span style="font-size: medium"><strong>ಐಎಎನ್ಎಸ್ ವರದಿ:</strong> ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಸುಪ್ರೀಂ ಕೋರ್ಟಿನ ಅರಣ್ಯ ಪೀಠ, ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಹೊಂದಿರುವ ಕರ್ನಾಟಕದ ಎರಡು ಗಣಿ ಸಂಸ್ಥೆಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಶುಕ್ರವಾರ ಆದೇಶ ನೀಡಿದೆ.</span></p>.<p><span style="font-size: medium">ಕರ್ನಾಟಕದ ಮಾಜಿ ಸಚಿವ ಜಿ, ಜನಾರ್ದನ ರೆಡ್ಡಿ ಅವರ ಮಾಲಿಕತ್ವದ ಅಸೋಸಿಯೇಟೆಡ್ ಮೈನಿಂಗ ಕಂಪೆನಿ ಮತ್ತು ಎಸ್.ಎಂ ಜೈನ್ ಮಾಲಿಕತ್ವದ ಡೆಕ್ಕನ್ ಮೈನಿಂಗ್ ಸಿಂಡಿಕೇಟ್ ಸಂಸ್ಥೆಗಳು ನಡೆಸಿರಬಹುದಾದ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಲು ಸೂಚಿಸಲಾಗಿದೆ.</span></p>.<p><span style="font-size: medium">ಆಂಧ್ರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಆರೋಪದ ಮೇಲೆ ಕರ್ನಾಟಕದ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಮತ್ತು ಭಾವ ಶ್ರೀನಿವಾಸ ರೆಡ್ಡಿ ಅವರನ್ನು ಈಗಾಗಲೇ ಬಂಧಿಸಿ ಜೈಲಿನಲ್ಲಿರಿಸಲಾಗಿದೆ.</span></p>.<p><span style="font-size: medium">ಬುಧವಾರ ಸುಪ್ರೀಂ ಕೋರ್ಟ್ ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ)ಯು ರೆಡ್ಡಿಗಳು ಕರ್ನಾಟಕದಲ್ಲಿ ಹೊಂದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆಯೂ ಸಿಬಿಐ ತನಿಖೆ ನಡೆಸುವಂತೆ ಸಲಹೆ ನೀಡಿತ್ತು.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>