<p><strong>ಅಜ್ಮೇರ್(ರಾಜಸ್ತಾನ): </strong>ರಾಜಸ್ತಾನದ ಆಂಗ್ಲ ಮಾಧ್ಯಮದ ಎಂಟನೇ ತರಗತಿ ಪುಸ್ತಕದಲ್ಲಿ ‘ಲೋಕಮಾನ್ಯ ಬಾಲಗಂಗಾಧರ ತಿಲಕ್ ಭಯೋತ್ಪಾದನೆಯ ಪಿತಾಮಹ’ ಎಂಬ ವಿವಾದಾತ್ಮಕ ವಾಕ್ಯ ಮುದ್ರಣಗೊಂಡಿದೆ. </p>.<p>8ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿನ 18ನೇಮತ್ತು 19ನೇ ಶತಮಾನದ ರಾಷ್ಟ್ರೀಯ ಚಳುವಳಿಯ ಘಟನೆಗಳು ಎಂಬ 22ನೇ ಅಧ್ಯಾಯದಲ್ಲಿ ಮುದ್ರಣವಾಗಿದೆ.</p>.<p>ಮಥುರಾ ಪ್ರಕಾಶನ ಪಠ್ಯಪುಸ್ತಕ ಪ್ರಕಟಿಸಿದ್ದು, ರಾಷ್ಟ್ರೀಯ ಚಳುವಳಿಯನ್ನು ಮುನ್ನಡೆಸುತ್ತಿದ್ದ ತಿಲಕ್ ಅವರನ್ನು ಭಯೋತ್ಪಾದನೆಯ ಪಿತಾಮಹ ಎಂದು ಕರೆಯಲಾಗುತ್ತದೆ ಎಂಬ ವಾಕ್ಯ ಪುಸ್ತಕದ 267ನೇ ಪುಟದಲ್ಲಿದೆ.</p>.<p>ತಿಲಕ್ ಅವರನ್ನು ಭಯೋತ್ಪಾದನೆಯ ಪಿತಾಮಹ ಎಂದು ಕರೆದಿರುವುದು ಖಂಡನೀಯ. ಈ ವಿವಾದಾತ್ಮಕ ವಾಕ್ಯವನ್ನು ಸರಿಪಡಿಸುವ ಮುನ್ನ ಇತಿಹಾಸಕಾರರನ್ನು ಸಂಪರ್ಕಿಸುತ್ತೇವೆ ಎಂದು ನಿರ್ದೇಶಕ ಕೈಲಾಶ್ ಶರ್ಮ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಾಜಸ್ತಾನದ ಮುಖ್ಯಮಂತ್ರಿಗಳೇ, ಪಠ್ಯಪುಸ್ತಕದಲ್ಲಿನ ತಪ್ಪನ್ನು ಸರಿ ಮಾಡುತ್ತಿರೋ ಅಥವಾ ತಪ್ಪಿತಸ್ಥರನ್ನು ಶಿಕ್ಷಸುತ್ತೀರೋ? ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಮೇರ್(ರಾಜಸ್ತಾನ): </strong>ರಾಜಸ್ತಾನದ ಆಂಗ್ಲ ಮಾಧ್ಯಮದ ಎಂಟನೇ ತರಗತಿ ಪುಸ್ತಕದಲ್ಲಿ ‘ಲೋಕಮಾನ್ಯ ಬಾಲಗಂಗಾಧರ ತಿಲಕ್ ಭಯೋತ್ಪಾದನೆಯ ಪಿತಾಮಹ’ ಎಂಬ ವಿವಾದಾತ್ಮಕ ವಾಕ್ಯ ಮುದ್ರಣಗೊಂಡಿದೆ. </p>.<p>8ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿನ 18ನೇಮತ್ತು 19ನೇ ಶತಮಾನದ ರಾಷ್ಟ್ರೀಯ ಚಳುವಳಿಯ ಘಟನೆಗಳು ಎಂಬ 22ನೇ ಅಧ್ಯಾಯದಲ್ಲಿ ಮುದ್ರಣವಾಗಿದೆ.</p>.<p>ಮಥುರಾ ಪ್ರಕಾಶನ ಪಠ್ಯಪುಸ್ತಕ ಪ್ರಕಟಿಸಿದ್ದು, ರಾಷ್ಟ್ರೀಯ ಚಳುವಳಿಯನ್ನು ಮುನ್ನಡೆಸುತ್ತಿದ್ದ ತಿಲಕ್ ಅವರನ್ನು ಭಯೋತ್ಪಾದನೆಯ ಪಿತಾಮಹ ಎಂದು ಕರೆಯಲಾಗುತ್ತದೆ ಎಂಬ ವಾಕ್ಯ ಪುಸ್ತಕದ 267ನೇ ಪುಟದಲ್ಲಿದೆ.</p>.<p>ತಿಲಕ್ ಅವರನ್ನು ಭಯೋತ್ಪಾದನೆಯ ಪಿತಾಮಹ ಎಂದು ಕರೆದಿರುವುದು ಖಂಡನೀಯ. ಈ ವಿವಾದಾತ್ಮಕ ವಾಕ್ಯವನ್ನು ಸರಿಪಡಿಸುವ ಮುನ್ನ ಇತಿಹಾಸಕಾರರನ್ನು ಸಂಪರ್ಕಿಸುತ್ತೇವೆ ಎಂದು ನಿರ್ದೇಶಕ ಕೈಲಾಶ್ ಶರ್ಮ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ರಾಜಸ್ತಾನದ ಮುಖ್ಯಮಂತ್ರಿಗಳೇ, ಪಠ್ಯಪುಸ್ತಕದಲ್ಲಿನ ತಪ್ಪನ್ನು ಸರಿ ಮಾಡುತ್ತಿರೋ ಅಥವಾ ತಪ್ಪಿತಸ್ಥರನ್ನು ಶಿಕ್ಷಸುತ್ತೀರೋ? ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>