<p><strong>ನವದೆಹಲಿ (ಪಿಟಿಐ): </strong> `ಪೂರ್ತಿ~ ಸಮೂಹದಲ್ಲಿ ಅನುಮಾನಾಸ್ಪದ ಹೂಡಿಕೆಗೆ ಸಂಬಂಧಿಸಿ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ವಿರುದ್ಧ ಆರೋಪ ಮಾಡುತ್ತಿರುವ ಕೇಂದ್ರದ ಆಡಳಿತಾರೂಢ ಕಾಂಗ್ರೆಸ್ನ ಬಾಯಿ ಮುಚ್ಚಿಸಲು ಬಿಜೆಪಿ ಇದೀಗ ವಾದ್ರಾ ಭೂ ಖರೀದಿ ಹಾಗೂ ಕಲ್ಲಿದ್ದಲು ಹಗರಣವನ್ನು ಅಸ್ತ್ರವನ್ನಾಗಿಸಿಕೊಂಡಿದೆ.<br /> <br /> `ಅಕ್ರಮ ಭೂ ಖರೀದಿ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ? ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹರಗಣದಲ್ಲಿ ಪ್ರಧಾನಿ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದೀರಿ?~ ಎಂದು ಸವಾಲು ಹಾಕಿದೆ.<br /> <br /> `ವಾದ್ರಾ ಭೂ ಖರೀದಿ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ಮೌನ ವಹಿಸಿರುವುದು ಯಾಕೆ~ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. `ಕಲ್ಲಿದ್ದಲು ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರವೇನು? ಯಾಕೆ ಇದನ್ನು ತನಿಖೆ ಮಾಡುತ್ತಿಲ್ಲ~ ಎಂದೂ ಅವರು ತಿರುಗೇಟು ನೀಡಿದ್ದಾರೆ.<br /> <br /> ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿಯ ಸವಾಲಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, `ಗಡ್ಕರಿ ವಿರುದ್ಧದ ಆರೋಪ ಕುರಿತಂತೆ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯು ಹಳೆಯ ಆರೋಪಗಳನ್ನು ಪ್ರಸ್ತಾಪಿಸುತ್ತಿದೆ~ ಎಂದು ವ್ಯಂಗ್ಯವಾಡಿದೆ.<br /> <br /> `ಬಿಜೆಪಿ ಒಡೆದ ಮನೆ. ಪಕ್ಷದ ಸದಸ್ಯರೆಲ್ಲ ಹತಾಶೆಯಿಂದ ಬಳಲುತ್ತಿದ್ದಾರೆ~ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಮನೀಷ್ ತಿವಾರಿ ಟೀಕಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong> `ಪೂರ್ತಿ~ ಸಮೂಹದಲ್ಲಿ ಅನುಮಾನಾಸ್ಪದ ಹೂಡಿಕೆಗೆ ಸಂಬಂಧಿಸಿ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ವಿರುದ್ಧ ಆರೋಪ ಮಾಡುತ್ತಿರುವ ಕೇಂದ್ರದ ಆಡಳಿತಾರೂಢ ಕಾಂಗ್ರೆಸ್ನ ಬಾಯಿ ಮುಚ್ಚಿಸಲು ಬಿಜೆಪಿ ಇದೀಗ ವಾದ್ರಾ ಭೂ ಖರೀದಿ ಹಾಗೂ ಕಲ್ಲಿದ್ದಲು ಹಗರಣವನ್ನು ಅಸ್ತ್ರವನ್ನಾಗಿಸಿಕೊಂಡಿದೆ.<br /> <br /> `ಅಕ್ರಮ ಭೂ ಖರೀದಿ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ? ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹರಗಣದಲ್ಲಿ ಪ್ರಧಾನಿ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದೀರಿ?~ ಎಂದು ಸವಾಲು ಹಾಕಿದೆ.<br /> <br /> `ವಾದ್ರಾ ಭೂ ಖರೀದಿ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ಮೌನ ವಹಿಸಿರುವುದು ಯಾಕೆ~ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. `ಕಲ್ಲಿದ್ದಲು ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರವೇನು? ಯಾಕೆ ಇದನ್ನು ತನಿಖೆ ಮಾಡುತ್ತಿಲ್ಲ~ ಎಂದೂ ಅವರು ತಿರುಗೇಟು ನೀಡಿದ್ದಾರೆ.<br /> <br /> ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿಯ ಸವಾಲಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, `ಗಡ್ಕರಿ ವಿರುದ್ಧದ ಆರೋಪ ಕುರಿತಂತೆ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯು ಹಳೆಯ ಆರೋಪಗಳನ್ನು ಪ್ರಸ್ತಾಪಿಸುತ್ತಿದೆ~ ಎಂದು ವ್ಯಂಗ್ಯವಾಡಿದೆ.<br /> <br /> `ಬಿಜೆಪಿ ಒಡೆದ ಮನೆ. ಪಕ್ಷದ ಸದಸ್ಯರೆಲ್ಲ ಹತಾಶೆಯಿಂದ ಬಳಲುತ್ತಿದ್ದಾರೆ~ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಮನೀಷ್ ತಿವಾರಿ ಟೀಕಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>