<p><strong>ಪಟ್ನಾ </strong>: ಅಗತ್ಯ ಸಂಖ್ಯಾಬಲವಿಲ್ಲದಿದ್ದರೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದನ್ನು ಪಕ್ಷದ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ. ಜನಶಕ್ತಿಯ ಬದಲಾಗಿ ಧನಶಕ್ತಿ ವಿಜೃಂಭಿಸಿರುವುದನ್ನು ಒಪ್ಪಲಾಗದು ಎಂದಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಪಕ್ಷದ ಪ್ರಮುಖ ಟೀಕಾಕಾರ ಎನಿಸಿರುವ ಶತ್ರುಘ್ನ, ಕರ್ನಾಟಕದಲ್ಲಿ ಕಾಂಗ್ರೆಸ್–ಜೆಡಿಎಸ್ ಮಾಡಿಕೊಂಡಿರುವ ಚುನಾವಣೋತ್ತರ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಂಬಿಕೆ ಇಲ್ಲದವರು ರಾಜಕೀಯವನ್ನು ಹಾಳುಮಾಡುತ್ತಾರೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.</p>.<p>ಗೋವಾ, ಮೇಘಾಲಯ ಹಾಗೂ ಮಣಿಪುರದಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ, ಇತರ ಪಕ್ಷಗಳ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದನ್ನೂ ಅವರು ಪ್ರಶ್ನಿಸಿದ್ದಾರೆ.</p>.<p>‘ಜನರಿಗೆ ಎಲ್ಲ ಸಮಯದಲ್ಲಿಯೂ, ಎಲ್ಲ ಕಡೆಗಳಲ್ಲಿಯೂ ಮೋಸ ಮಾಡಲಾಗದು. ಇದು ನಾಚಿಕೆಗೇಡಿನ ರಾಜಕೀಯ. ಸಾಕ್ಷಿಪ್ರಜ್ಞೆ, ಪಕ್ವತೆ ಮೂಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.<br /> *<br /> <strong>ಅಲ್ಲೊಂದು, ಇಲ್ಲೊಂದು ಏಕೆ?</strong><br /> ‘ಪೀಟರ್ಗೆ ಸರಿ ಎಂದ ಮೇಲೆ ಪೌಲ್ಗೂ ಅದೇ ಸರಿ ಅಲ್ಲವೇ? ಮೇಘಾಲಯ, ಮಣಿಪುರ, ಗೋವಾದಲ್ಲಿ ಮಾಡಿದ್ದು ಸರಿ ಎಂದಾದರೆ ಕರ್ನಾಟಕದಲ್ಲೂ ಅದೇ ಅನ್ವಯವಾಗಬೇಕಲ್ಲವೇ. ದೇವರು ಕರ್ನಾಟಕ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಿದ್ದಾನೆ. ಜೈ ಹಿಂದ್’<br /> <strong>–ಶತ್ರುಘ್ನ ಸಿನ್ಹಾ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ </strong>: ಅಗತ್ಯ ಸಂಖ್ಯಾಬಲವಿಲ್ಲದಿದ್ದರೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರುವುದನ್ನು ಪಕ್ಷದ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ. ಜನಶಕ್ತಿಯ ಬದಲಾಗಿ ಧನಶಕ್ತಿ ವಿಜೃಂಭಿಸಿರುವುದನ್ನು ಒಪ್ಪಲಾಗದು ಎಂದಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಪಕ್ಷದ ಪ್ರಮುಖ ಟೀಕಾಕಾರ ಎನಿಸಿರುವ ಶತ್ರುಘ್ನ, ಕರ್ನಾಟಕದಲ್ಲಿ ಕಾಂಗ್ರೆಸ್–ಜೆಡಿಎಸ್ ಮಾಡಿಕೊಂಡಿರುವ ಚುನಾವಣೋತ್ತರ ಮೈತ್ರಿಗೆ ಬೆಂಬಲ ಸೂಚಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಂಬಿಕೆ ಇಲ್ಲದವರು ರಾಜಕೀಯವನ್ನು ಹಾಳುಮಾಡುತ್ತಾರೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.</p>.<p>ಗೋವಾ, ಮೇಘಾಲಯ ಹಾಗೂ ಮಣಿಪುರದಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ, ಇತರ ಪಕ್ಷಗಳ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದನ್ನೂ ಅವರು ಪ್ರಶ್ನಿಸಿದ್ದಾರೆ.</p>.<p>‘ಜನರಿಗೆ ಎಲ್ಲ ಸಮಯದಲ್ಲಿಯೂ, ಎಲ್ಲ ಕಡೆಗಳಲ್ಲಿಯೂ ಮೋಸ ಮಾಡಲಾಗದು. ಇದು ನಾಚಿಕೆಗೇಡಿನ ರಾಜಕೀಯ. ಸಾಕ್ಷಿಪ್ರಜ್ಞೆ, ಪಕ್ವತೆ ಮೂಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.<br /> *<br /> <strong>ಅಲ್ಲೊಂದು, ಇಲ್ಲೊಂದು ಏಕೆ?</strong><br /> ‘ಪೀಟರ್ಗೆ ಸರಿ ಎಂದ ಮೇಲೆ ಪೌಲ್ಗೂ ಅದೇ ಸರಿ ಅಲ್ಲವೇ? ಮೇಘಾಲಯ, ಮಣಿಪುರ, ಗೋವಾದಲ್ಲಿ ಮಾಡಿದ್ದು ಸರಿ ಎಂದಾದರೆ ಕರ್ನಾಟಕದಲ್ಲೂ ಅದೇ ಅನ್ವಯವಾಗಬೇಕಲ್ಲವೇ. ದೇವರು ಕರ್ನಾಟಕ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಿದ್ದಾನೆ. ಜೈ ಹಿಂದ್’<br /> <strong>–ಶತ್ರುಘ್ನ ಸಿನ್ಹಾ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>