<p><strong>ನವದೆಹಲಿ (ಐಎಎನ್ಎಸ್):</strong> ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಬಂಡೆದ್ದು, ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದ ರಾಂಕೃಪಾಲ್ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.<br /> <br /> ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಉಪಸ್ಥಿತಿಯಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಯಾದವ್ ಅವರು `ನಾನು 35 ವರ್ಷಗಳ ಕಾಲ ಆರ್ಜೆಡಿಯ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿರುವೆ. ಆದರೆ, ಕೆಲ ಒತ್ತಡಗಳು ನಾನು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾದವು' ಎಂದು ಹೇಳಿದರು.</p>.<p>ಇದೇ ವೇಳೆ ಲಾಲು ಅವರ ವಿರುದ್ಧ ವಾಗ್ಧಾಳಿ ನಡೆಸಿದ ರಾಂಕೃಪಾಲ್ ಅವರು `ಆರ್ಜೆಡಿಯಲ್ಲಿ ಹೊರಗಿನವರಿಗಿಂತ ಕುಟುಂಬದೊಳಗಿನವರು ಪ್ರಾಮುಖ್ಯತೆ ಪಡೆಯುತ್ತಿದ್ದಾರೆ. ಇದರಿಂದ ನನ್ನಂತಹ ಸಾಮಾನ್ಯ ಕಾರ್ಯಕರ್ತರು ನೊಂದುಕೊಂಡಿದ್ದಾರೆ. ನಾವು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕೆ ವಿನಹ ಒಂದು ಕುಟುಂಬಕ್ಕಾಗಿ ಅಲ್ಲ' ಎಂದು ಹೇಳಿದರು.<br /> <br /> ಲಾಲು ಅವರ ಪುತ್ರಿ ಮೀಸಾ ಅವರನ್ನು ಬಿಹಾರದ ಪಾಟಲೀಪುತ್ರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ರಾಂಕೃಪಾಲ್ ಅವರು ಮುನಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಬಂಡೆದ್ದು, ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದ ರಾಂಕೃಪಾಲ್ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.<br /> <br /> ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಉಪಸ್ಥಿತಿಯಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಯಾದವ್ ಅವರು `ನಾನು 35 ವರ್ಷಗಳ ಕಾಲ ಆರ್ಜೆಡಿಯ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿರುವೆ. ಆದರೆ, ಕೆಲ ಒತ್ತಡಗಳು ನಾನು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾದವು' ಎಂದು ಹೇಳಿದರು.</p>.<p>ಇದೇ ವೇಳೆ ಲಾಲು ಅವರ ವಿರುದ್ಧ ವಾಗ್ಧಾಳಿ ನಡೆಸಿದ ರಾಂಕೃಪಾಲ್ ಅವರು `ಆರ್ಜೆಡಿಯಲ್ಲಿ ಹೊರಗಿನವರಿಗಿಂತ ಕುಟುಂಬದೊಳಗಿನವರು ಪ್ರಾಮುಖ್ಯತೆ ಪಡೆಯುತ್ತಿದ್ದಾರೆ. ಇದರಿಂದ ನನ್ನಂತಹ ಸಾಮಾನ್ಯ ಕಾರ್ಯಕರ್ತರು ನೊಂದುಕೊಂಡಿದ್ದಾರೆ. ನಾವು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕೆ ವಿನಹ ಒಂದು ಕುಟುಂಬಕ್ಕಾಗಿ ಅಲ್ಲ' ಎಂದು ಹೇಳಿದರು.<br /> <br /> ಲಾಲು ಅವರ ಪುತ್ರಿ ಮೀಸಾ ಅವರನ್ನು ಬಿಹಾರದ ಪಾಟಲೀಪುತ್ರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ರಾಂಕೃಪಾಲ್ ಅವರು ಮುನಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>