ತೆಲಂಗಾಣ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ (ಟಿಡಿಪಿ) ಪಕ್ಷದೊಂದಿಗೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿತ್ತು ಆದರೆ ಸ್ಥಾನ ಹೊಂದಣಿಕೆಯಲ್ಲಿ ಒಮ್ಮತಕ್ಕೆ ಬರಲಾಗದೇ ಮೈತ್ರಿ ಮುರಿದು ಬಿದ್ದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತೆಲಂಗಾಣ ಭಾಗದಲ್ಲಿನ 17 ಲೋಕ ಸಭಾ ಕ್ಷೇತ್ರಗಳ ಪೈಕಿ 11 ಸ್ಥಾನಗಳನ್ನು ಬಿಟ್ಟು ಕೊಡುವಂತೆ ಬಿಜೆಪಿ ಪಟ್ಟು ಹಿಡಿದಿತ್ತು. ಆದರೆ ಟಿಡಿಪಿ ಕೇವಲ 8 ಸ್ಥಾನಗಳನ್ನು ಬಿಟ್ಟು ಕೊಡುವುದಾಗಿ ಹೇಳಿತ್ತು. ಅಂತಿಮವಾಗಿ ಸ್ಥಾನ ಹೊಂದಾಣಿಕೆಯಾಗದೇ ಮೈತ್ರಿ ಮುರಿದು ಬಿದ್ದಿದೆ.
ತೆಲಂಗಾಣ ಭಾಗದಲ್ಲಿನ ಎಲ್ಲಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಪ್ರಕಟಿಸಿದೆ.