<p><strong>ನವದೆಹಲಿ: </strong>ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಪಠ್ಯಗಳಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುವ ಪ್ರಸ್ತಾವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ.<br /> <br /> ಭಗವದ್ಗೀತೆ ಮಾತ್ರವಲ್ಲದೆ ಕುರಾನ್ ಮತ್ತು ಬೈಬಲ್ನಲ್ಲಿ ಇರುವ ಒಳ್ಳೆಯ ಅಂಶಗಳನ್ನು ಪಠ್ಯಗಳಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಧರ್ಮ ಗ್ರಂಥಗಳಲ್ಲಿರುವ ಒಳ್ಳೆಯ ಅಂಶಗಳನ್ನು ತಜ್ಞರ ಸಮಿತಿ ಶಿಫಾರಸು ಮಾಡಲಿದೆ. ಮಕ್ಕಳಿಗೆ ಸುಲಭವಾಗಿ ಅರ್ಥವಾಗುವ ಅಂಶಗಳನ್ನು ಪಠ್ಯಗಳಲ್ಲಿ ಸೇರಿಸಲಾಗುವುದು. ಮಧ್ಯಪ್ರದೇಶದಲ್ಲಿ ಈಗಾಗಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲಾಗುತ್ತಿದೆ. ಅಲ್ಲಿಂದಲೂ ವಿವರ ಪಡೆಯಲಾಗುವುದು. ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಮೊದಲು ಜನಾಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಮಕ್ಕಳಿಗೆ ಭಗವದ್ಗೀತೆ ಬೋಧಿಸುವ ತಮ್ಮ ಸರ್ಕಾರದ ನಿಲುವನ್ನು ಈಗಾಗಲೇ ಪ್ರಕಟಿಸಿದ್ದಾರೆ.<br /> <br /> ಇದಕ್ಕೂ ಮೊದಲು ಕಾಗೇರಿ, ಶಾಲೆಗಳಲ್ಲಿ ನಡೆಯುತ್ತಿರುವ ನಿಯಮಬಾಹಿರ ಚಟುವಟಿಕೆ ಕುರಿತು ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಕುರಿತು ಸಲಹೆ ಮಾಡಲು ರಚಿಸಲಾಗಿರುವ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.<br /> <br /> ಡೊನೇಷನ್ ಹಾವಳಿ ತಡೆಯಲು ಎಲ್ಲ ವಿಧದ ನೆರವನ್ನು ಚೆಕ್, ಡಿಡಿ ಮೂಲಕ ಪಡೆಯುವಂತಾಗಬೇಕು. ತರಬೇತಿ ಪಡೆದ ಶಿಕ್ಷಕರನ್ನೇ ನೇಮಕ ಮಾಡಬೇಕು. ಮಕ್ಕಳಿಗೆ ಖಾಸಗಿ ಪಾಠ ಹೇಳುವುದನ್ನು ನಿಷೇಧ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಪಠ್ಯಗಳಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುವ ಪ್ರಸ್ತಾವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ.<br /> <br /> ಭಗವದ್ಗೀತೆ ಮಾತ್ರವಲ್ಲದೆ ಕುರಾನ್ ಮತ್ತು ಬೈಬಲ್ನಲ್ಲಿ ಇರುವ ಒಳ್ಳೆಯ ಅಂಶಗಳನ್ನು ಪಠ್ಯಗಳಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಧರ್ಮ ಗ್ರಂಥಗಳಲ್ಲಿರುವ ಒಳ್ಳೆಯ ಅಂಶಗಳನ್ನು ತಜ್ಞರ ಸಮಿತಿ ಶಿಫಾರಸು ಮಾಡಲಿದೆ. ಮಕ್ಕಳಿಗೆ ಸುಲಭವಾಗಿ ಅರ್ಥವಾಗುವ ಅಂಶಗಳನ್ನು ಪಠ್ಯಗಳಲ್ಲಿ ಸೇರಿಸಲಾಗುವುದು. ಮಧ್ಯಪ್ರದೇಶದಲ್ಲಿ ಈಗಾಗಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲಾಗುತ್ತಿದೆ. ಅಲ್ಲಿಂದಲೂ ವಿವರ ಪಡೆಯಲಾಗುವುದು. ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಮೊದಲು ಜನಾಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಮಕ್ಕಳಿಗೆ ಭಗವದ್ಗೀತೆ ಬೋಧಿಸುವ ತಮ್ಮ ಸರ್ಕಾರದ ನಿಲುವನ್ನು ಈಗಾಗಲೇ ಪ್ರಕಟಿಸಿದ್ದಾರೆ.<br /> <br /> ಇದಕ್ಕೂ ಮೊದಲು ಕಾಗೇರಿ, ಶಾಲೆಗಳಲ್ಲಿ ನಡೆಯುತ್ತಿರುವ ನಿಯಮಬಾಹಿರ ಚಟುವಟಿಕೆ ಕುರಿತು ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಕುರಿತು ಸಲಹೆ ಮಾಡಲು ರಚಿಸಲಾಗಿರುವ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.<br /> <br /> ಡೊನೇಷನ್ ಹಾವಳಿ ತಡೆಯಲು ಎಲ್ಲ ವಿಧದ ನೆರವನ್ನು ಚೆಕ್, ಡಿಡಿ ಮೂಲಕ ಪಡೆಯುವಂತಾಗಬೇಕು. ತರಬೇತಿ ಪಡೆದ ಶಿಕ್ಷಕರನ್ನೇ ನೇಮಕ ಮಾಡಬೇಕು. ಮಕ್ಕಳಿಗೆ ಖಾಸಗಿ ಪಾಠ ಹೇಳುವುದನ್ನು ನಿಷೇಧ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>