ಕಮಲ್ ಹಾಸನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ಇದು ನಮ್ಮ ಕಾರ್ಯವ್ಯಾಪ್ತಿಗೆ ಬರುವುದಿಲ್ಲ’ ಎಂದು ಅದನ್ನು ವಿಚಾರಣೆಗೆ ಎತ್ತಿಕೊಳ್ಳಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಜಿ.ಎಸ್. ಸಿಸ್ತಾನಿ ಹಾಗೂ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠವು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಿದೆ.