ಭಾರತೀಯ ಲೋಧಿ ಮಹಾಸಭಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನತಾಡಿದ ಅವರು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡರು. ನೆರೆದೇಶವು ಭಾರತಕ್ಕೆ ಭಯೋತ್ಪಾದಕರನ್ನು ಕಳುಹಿಸುತ್ತಿದೆ ಎಂದು ಆರೋಪಿಸಿದರು. ‘ಪಾಕಿಸ್ತಾನವು ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ನಮ್ಮ ಸೈನಿಕರು ಗಡಿಯಲ್ಲಿ ಪ್ರತಿನಿತ್ಯ 2–4 ಉಗ್ರರನ್ನು ಸದೆಬಡಿಯುತ್ತಿದ್ದಾರೆ’ ಎಂದು ಅವರು ಹೇಳಿದರು.