<p><strong>ಗೋರಖ್ಪುರ (ಪಿಟಿಐ):</strong> ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ನಲುಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಪ್ರಹಾರ ಮಾಡಿದರು.</p>.<p>ಒಂದೆಡೆ, ಈ ಪಕ್ಷ ರಾಷ್ಟ್ರದ ಉದ್ದಗಲಕ್ಕೂ ಭ್ರಷ್ಟಾಚಾರದ ವಿರುದ್ಧ ಯಾತ್ರೆ ನಡೆಸುತ್ತದೆ. ಮತ್ತೊಂದೆಡೆ, ಭ್ರಷ್ಟಾಚಾರದಲ್ಲಿ ಸಿಲುಕಿ ಬೇರೆ ಪಕ್ಷಗಳಿಂದ ಉಚ್ಛಾಟನೆಗೊಂಡವರನ್ನು ಬರಸೆಳೆದುಕೊಳ್ಳುತ್ತಿದೆ. ಮಾಯಾವತಿ ಅವರಿಂದ ಉಚ್ಛಾಟನೆಗೊಂಡ ಬಾಬು ಸಿಂಗ್ ಕುಶವಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ಇದಕ್ಕೆ ತೀರಾ ಇತ್ತೀಚಿನ ಉದಾಹರಣೆ ಎಂದವರು ಗೇಲಿ ಮಾಡಿದರು.</p>.<p>ಈ ಪಕ್ಷದ ಆಡಳಿತವಿರುವ ಉತ್ತರಾಖಂಡ, ಗುಜರಾತ್, ಜಾರ್ಖಂಡ್ಗಳು ಕೂಡ ಲಂಚದಲ್ಲಿ ಮುಳುಗಿ ಹೋಗಿವೆ ಎಂದರು.</p>.<p>ಬಿಎಸ್ಪಿಯಿಂದ ಉಚ್ಚಾಟನೆಗೊಂಡ ನಂತರ ಕುಶವಾ ಕಾಂಗ್ರೆಸ್ ಸೇರುವುದಕ್ಕಾಗಿ ವರಿಷ್ಠರನ್ನು ಸಂಪರ್ಕಿಸಿದ್ದರು. ಆದರೆ ಕಾಂಗ್ರೆಸ್ ಅವರ ಕೋರಿಕೆಯನ್ನು ತಿರಸ್ಕರಿಸಿತು ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಾಗಿ ಬಿಡುಗಡೆಯಾಗಿದ್ದ ಸಾವಿರಾರು ಕೋಟಿ ರೂಪಾಯಿ ಹಣವನ್ನು ಅಧಿಕಾರ ಗದ್ದುಗೆಯಲ್ಲಿರುವ `ಮಾಯಾ ಆನೆ~ ನುಂಗಿ ನೀರು ಕುಡಿದಿದೆ ಎಂದು ಟೀಕಿಸಿದರು.</p>.<p><strong>ಉ.ಪ್ರ: ಫೆ.4ರ ಬದಲು ಬೇರೆ ದಿನ ಚುನಾವಣೆ </strong></p>.<p><strong>ನವದೆಹಲಿ (ಪಿಟಿಐ):</strong> ಪ್ರವಾದಿ ಮೊಹಮ್ಮದ್ ಜನ್ಮಜಯಂತಿ ಕೂಡ ಫೆ.4ರಂದು ಬರುವ ಸಂಭವವಿರುವುದರಿಂದ ಅಂದು ಉತ್ತರಪ್ರದೇಶದಲ್ಲಿ ನಡೆಯಬೇಕಿದ್ದ ಮೊದಲ ಹಂತದ ವಿಧಾನಸಭಾ ಚುನಾವಣೆ ರದ್ದುಗೊಂಡಿದೆ.<br /> ಇದನ್ನು ಭಾನುವಾರ ತಿಳಿಸಿರುವ ಕೇಂದ್ರ ಚುನಾವಣಾ ಆಯೋಗ, ಚುನಾವಣೆ ನಡೆಯುವ ಬದಲಾದ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖ್ಪುರ (ಪಿಟಿಐ):</strong> ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ನಲುಗಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಪ್ರಹಾರ ಮಾಡಿದರು.</p>.<p>ಒಂದೆಡೆ, ಈ ಪಕ್ಷ ರಾಷ್ಟ್ರದ ಉದ್ದಗಲಕ್ಕೂ ಭ್ರಷ್ಟಾಚಾರದ ವಿರುದ್ಧ ಯಾತ್ರೆ ನಡೆಸುತ್ತದೆ. ಮತ್ತೊಂದೆಡೆ, ಭ್ರಷ್ಟಾಚಾರದಲ್ಲಿ ಸಿಲುಕಿ ಬೇರೆ ಪಕ್ಷಗಳಿಂದ ಉಚ್ಛಾಟನೆಗೊಂಡವರನ್ನು ಬರಸೆಳೆದುಕೊಳ್ಳುತ್ತಿದೆ. ಮಾಯಾವತಿ ಅವರಿಂದ ಉಚ್ಛಾಟನೆಗೊಂಡ ಬಾಬು ಸಿಂಗ್ ಕುಶವಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ಇದಕ್ಕೆ ತೀರಾ ಇತ್ತೀಚಿನ ಉದಾಹರಣೆ ಎಂದವರು ಗೇಲಿ ಮಾಡಿದರು.</p>.<p>ಈ ಪಕ್ಷದ ಆಡಳಿತವಿರುವ ಉತ್ತರಾಖಂಡ, ಗುಜರಾತ್, ಜಾರ್ಖಂಡ್ಗಳು ಕೂಡ ಲಂಚದಲ್ಲಿ ಮುಳುಗಿ ಹೋಗಿವೆ ಎಂದರು.</p>.<p>ಬಿಎಸ್ಪಿಯಿಂದ ಉಚ್ಚಾಟನೆಗೊಂಡ ನಂತರ ಕುಶವಾ ಕಾಂಗ್ರೆಸ್ ಸೇರುವುದಕ್ಕಾಗಿ ವರಿಷ್ಠರನ್ನು ಸಂಪರ್ಕಿಸಿದ್ದರು. ಆದರೆ ಕಾಂಗ್ರೆಸ್ ಅವರ ಕೋರಿಕೆಯನ್ನು ತಿರಸ್ಕರಿಸಿತು ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಾಗಿ ಬಿಡುಗಡೆಯಾಗಿದ್ದ ಸಾವಿರಾರು ಕೋಟಿ ರೂಪಾಯಿ ಹಣವನ್ನು ಅಧಿಕಾರ ಗದ್ದುಗೆಯಲ್ಲಿರುವ `ಮಾಯಾ ಆನೆ~ ನುಂಗಿ ನೀರು ಕುಡಿದಿದೆ ಎಂದು ಟೀಕಿಸಿದರು.</p>.<p><strong>ಉ.ಪ್ರ: ಫೆ.4ರ ಬದಲು ಬೇರೆ ದಿನ ಚುನಾವಣೆ </strong></p>.<p><strong>ನವದೆಹಲಿ (ಪಿಟಿಐ):</strong> ಪ್ರವಾದಿ ಮೊಹಮ್ಮದ್ ಜನ್ಮಜಯಂತಿ ಕೂಡ ಫೆ.4ರಂದು ಬರುವ ಸಂಭವವಿರುವುದರಿಂದ ಅಂದು ಉತ್ತರಪ್ರದೇಶದಲ್ಲಿ ನಡೆಯಬೇಕಿದ್ದ ಮೊದಲ ಹಂತದ ವಿಧಾನಸಭಾ ಚುನಾವಣೆ ರದ್ದುಗೊಂಡಿದೆ.<br /> ಇದನ್ನು ಭಾನುವಾರ ತಿಳಿಸಿರುವ ಕೇಂದ್ರ ಚುನಾವಣಾ ಆಯೋಗ, ಚುನಾವಣೆ ನಡೆಯುವ ಬದಲಾದ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>