<p><strong>ಶ್ರೀಹರಿಕೋಟಾ (ಐಎಎನ್ಎಸ್/ಪಿಟಿಐ)</strong>: ಬಹು ನಿರೀಕ್ಷೆಯ `ಮಂಗಳ ನೌಕೆ'ಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಇಲ್ಲಿನ ಸತೀಶ್ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಂಗಳವಾರ ಯಶಸ್ವಿಯಾಗಿ ಉಡಾವಣೆ ಮಾಡಿತು.</p>.<p>ಪೂರ್ವನಿರ್ಧರಿತ ಕಾರ್ಯಕ್ರಮದಂತೆ ಇಂದು ಮಧ್ಯಾಹ್ನ 2.38ಕ್ಕೆ ಪಿಎಸ್ಎಲ್ವಿ ಸಿ-25 ಉಡಾವಣ ವಾಹನದ ಮೂಲಕ ಮಂಗಳ ನೌಕೆಯನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿಬಿಡಲಾಯಿತು. ಉಡಾವಣೆಗೊಂಡ 40 ನಿಮಿಷದ ಬಳಿಕ ಮಂಗಳ ನೌಕೆ ಯಶಸ್ವಿಯಾಗಿ ಭೂಸ್ಥಿರ ಕಕ್ಷೆಯನ್ನು ಸೇರಿತು ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಮೇಲ್ಮೈಲಕ್ಷಣ, ವಾತಾವರಣ, ರಾಸಾಯನಿಕ ಸಂಯೋಜನೆಗಳಲ್ಲಿ ಬಹುಮಟ್ಟಿಗೆ ಭೂಮಿಯನ್ನು ಹೋಲುವ ‘ಅಂಗಾರಕ’ನಲ್ಲಿ (ಮಂಗಳ) ಮಿಥೇನ್ ಅನಿಲ ಇದ್ದಿರುವ ಸಾಧ್ಯತೆಯನ್ನು ಅನ್ವೇಷಿಸುವುದು ಯಾನದ ಪ್ರಮುಖ ಉದ್ದೇಶ.</p>.<p>ಮಿಥೇನ್ ಅನಿಲ ಕಂಡುಬಂದಲ್ಲಿ ಕೋಟ್ಯಂತರ ವರ್ಷಗಳ ಹಿಂದೆ ಮಂಗಳನಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದಿರಬಹುದಾದ ಸಾಧ್ಯತೆಯನ್ನು ಅದು ಸೂಚಿಸುತ್ತದೆ. ಆ ಸಂಶೋಧನೆ ಭೂಮಿಯಲ್ಲಿ ಜೀವಿಗಳ ಉಗಮ, ಸೃಷ್ಟಿಕ್ರಿಯೆಯ ರಹಸ್ಯ ಪತ್ತೆಹಚ್ಚಲು ನೆರವಾಗಲಿದೆ.</p>.<p> ಭೂಸ್ಥಿರ ಕಕ್ಷೆ ಸೇರಿದ ನಂತರ ಭೂಮಿಯನ್ನು ಪರಿಭ್ರಮಿಸಿ ಡಿಸೆಂಬರ್ 1ರಂದು ಕೆಂಪು ಗ್ರಹದತ್ತ ನಿರ್ಗಮಿಸಲಿದೆ. 2014ರ ಸೆಪ್ಟೆಂಬರ್ 24ರಂದು 324 ದಿನಗಳ ನಂತರ ಮಂಗಳ ಕಕ್ಷೆ ಸೇರುತ್ತದೆ. ₨450 ಕೋಟಿ ವೆಚ್ಚದ ‘ಮಂಗಳಯಾನ’ ಯಶಸ್ವಿಯಾಗಿ ನಡೆದಲ್ಲಿ ಮಂಗಳಕ್ಕೆ ಉಪಗ್ರಹ ಕಳುಹಿಸಿದ ಜಗತ್ತಿನ ನಾಲ್ಕನೇ ಬಾಹ್ಯಾಕಾಶ ಸಂಸ್ಥೆ ಮತ್ತು ವಿಶ್ವದ ಆರನೇ ರಾಷ್ಟ್ರ ಎಂಬ ಕೀರ್ತಿಗೆ ಭಾರತ ಪಾತ್ರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀಹರಿಕೋಟಾ (ಐಎಎನ್ಎಸ್/ಪಿಟಿಐ)</strong>: ಬಹು ನಿರೀಕ್ಷೆಯ `ಮಂಗಳ ನೌಕೆ'ಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಇಲ್ಲಿನ ಸತೀಶ್ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಂಗಳವಾರ ಯಶಸ್ವಿಯಾಗಿ ಉಡಾವಣೆ ಮಾಡಿತು.</p>.<p>ಪೂರ್ವನಿರ್ಧರಿತ ಕಾರ್ಯಕ್ರಮದಂತೆ ಇಂದು ಮಧ್ಯಾಹ್ನ 2.38ಕ್ಕೆ ಪಿಎಸ್ಎಲ್ವಿ ಸಿ-25 ಉಡಾವಣ ವಾಹನದ ಮೂಲಕ ಮಂಗಳ ನೌಕೆಯನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿಬಿಡಲಾಯಿತು. ಉಡಾವಣೆಗೊಂಡ 40 ನಿಮಿಷದ ಬಳಿಕ ಮಂಗಳ ನೌಕೆ ಯಶಸ್ವಿಯಾಗಿ ಭೂಸ್ಥಿರ ಕಕ್ಷೆಯನ್ನು ಸೇರಿತು ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಮೇಲ್ಮೈಲಕ್ಷಣ, ವಾತಾವರಣ, ರಾಸಾಯನಿಕ ಸಂಯೋಜನೆಗಳಲ್ಲಿ ಬಹುಮಟ್ಟಿಗೆ ಭೂಮಿಯನ್ನು ಹೋಲುವ ‘ಅಂಗಾರಕ’ನಲ್ಲಿ (ಮಂಗಳ) ಮಿಥೇನ್ ಅನಿಲ ಇದ್ದಿರುವ ಸಾಧ್ಯತೆಯನ್ನು ಅನ್ವೇಷಿಸುವುದು ಯಾನದ ಪ್ರಮುಖ ಉದ್ದೇಶ.</p>.<p>ಮಿಥೇನ್ ಅನಿಲ ಕಂಡುಬಂದಲ್ಲಿ ಕೋಟ್ಯಂತರ ವರ್ಷಗಳ ಹಿಂದೆ ಮಂಗಳನಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದಿರಬಹುದಾದ ಸಾಧ್ಯತೆಯನ್ನು ಅದು ಸೂಚಿಸುತ್ತದೆ. ಆ ಸಂಶೋಧನೆ ಭೂಮಿಯಲ್ಲಿ ಜೀವಿಗಳ ಉಗಮ, ಸೃಷ್ಟಿಕ್ರಿಯೆಯ ರಹಸ್ಯ ಪತ್ತೆಹಚ್ಚಲು ನೆರವಾಗಲಿದೆ.</p>.<p> ಭೂಸ್ಥಿರ ಕಕ್ಷೆ ಸೇರಿದ ನಂತರ ಭೂಮಿಯನ್ನು ಪರಿಭ್ರಮಿಸಿ ಡಿಸೆಂಬರ್ 1ರಂದು ಕೆಂಪು ಗ್ರಹದತ್ತ ನಿರ್ಗಮಿಸಲಿದೆ. 2014ರ ಸೆಪ್ಟೆಂಬರ್ 24ರಂದು 324 ದಿನಗಳ ನಂತರ ಮಂಗಳ ಕಕ್ಷೆ ಸೇರುತ್ತದೆ. ₨450 ಕೋಟಿ ವೆಚ್ಚದ ‘ಮಂಗಳಯಾನ’ ಯಶಸ್ವಿಯಾಗಿ ನಡೆದಲ್ಲಿ ಮಂಗಳಕ್ಕೆ ಉಪಗ್ರಹ ಕಳುಹಿಸಿದ ಜಗತ್ತಿನ ನಾಲ್ಕನೇ ಬಾಹ್ಯಾಕಾಶ ಸಂಸ್ಥೆ ಮತ್ತು ವಿಶ್ವದ ಆರನೇ ರಾಷ್ಟ್ರ ಎಂಬ ಕೀರ್ತಿಗೆ ಭಾರತ ಪಾತ್ರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>