ನವದೆಹಲಿ (ಐಎಎನ್ಎಸ್): ಕಳೆದ 2010ರ ಮೇ ತಿಂಗಳಲ್ಲಿ ಮಂಗಳೂರಿನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ಕುಟುಂಬದ ಸದಸ್ಯರಿಗೆ ಕನಿಷ್ಠ ತಲಾ 75 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಏರ್ ಇಂಡಿಯಾ ವಿಮಾನ ಸಂಸ್ಥೆಗೆ ನೋಟಿಸ್ ನೀಡಿದೆ.