ನವದೆಹಲಿ: ಮಧ್ಯಪ್ರದೇಶದ ಮಂಡ್ಸೌರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆಯು ರಾಜ್ಯ ಸರ್ಕಾರವನ್ನು ಕೇಳಿದೆ.
ರೈತರ ಪ್ರತಿಭಟನೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿ 5 ಮಂದಿ ರೈತರು ಗುಂಡೇಟಿಗೆ ಬಲಿಯಾಗಿದ್ದರು. ಈ ಹಿಂಸಾಚಾರ ಬುಧವಾರವೂ ಮುಂದುವರಿದಿದೆ. ಪ್ರತಿಭಟನಾಕಾರರು ಹಲವು ಸರ್ಕಾರಿ ಹಾಗೂ ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕೆಲ ವಾಹನಗಳಿಗೆ ಹಾನಿ ಮಾಡಿದ್ದಾರೆ.
#WATCH: Farmers in MP's Sehore vandalize vehicles & block roads as a part of protest for demanding loan waiver and better procurement prices pic.twitter.com/3ruS44j6fR