<p><strong>ಲಖನೌ</strong>: ಗೋರಖಪುರ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.</p>.<p>ಆಗಸ್ಟ್ 10ರಿಂದ ಇಲ್ಲಿಯವರೆಗೆ 60ಕ್ಕೂ ಹೆಚ್ಚು ಮಕ್ಕಳು ಆಮ್ಲಜನಕದ ಕೊರತೆಯಿಂದ ಸಾವಿಗೀಡಾಗಿವೆ.<br /> ಈ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 30 ಮಕ್ಕಳು ಸಾವಿಗೀಡಾಗಿದ್ದರು. ಈ ರೀತಿ ಸಾವಿಗೀಡಾದವರು ಜಾಪನೀಸ್ ಇನ್ಸೆಫಲೈಟಿಸ್ (ಜೆಇ) ಮತ್ತು ಅಕ್ಯೂಟ್ ಇನ್ಸೆಫಲೈಟಿಸ್ ಸಿಂಡ್ರೊಮ್ನಿಂದ (ಎಇಎಸ್) ಬಳಲುತ್ತಿದ್ದ ಮಕ್ಕಳಾಗಿದ್ದಾರೆ.</p>.<p>ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ದುರಂತ ಸಂಭವಿಸುವುದಕ್ಕೆ ಆಮ್ಲಜನಕದ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದ್ದರೂ, ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೂ ಕಾರಣ ಎಂಬ ಟೀಕೆಯೂ ಕೇಳಿಬರುತ್ತಿದೆ.</p>.<p>ಆಸ್ಪತ್ರೆಗೆ ಭೇಟಿ ನೀಡಿದ ಆದಿತ್ಯನಾಥ ಅವರು, ಮಕ್ಕಳ ಸಾವಿಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.<br /> ರಾಜ್ಯ ಪ್ರಧಾನ ಕಾರ್ಯದರ್ಶಿಯ ನೇತೃತ್ವದಲ್ಲಿ ಕೇಂದ್ರ ಸರ್ಕಾರ ತನಿಖಾ ತಂಡವೊಂದನ್ನು ರಚಿಸಿದ್ದು, ಈ ತನಿಖಾ ತಂಡ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ತಪ್ಪು ಯಾರೇ ಮಾಡಲಿ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆದಿತ್ಯನಾಥ ಹೇಳಿದ್ದಾರೆ.</p>.<p>ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋರಖಪುರ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರನ್ನು ಉತ್ತರಪ್ರದೇಶ ಸರ್ಕಾರ ಶನಿವಾರ ವಜಾ ಮಾಡಿತ್ತು.</p>.<p>ಆಸ್ಪತ್ರೆಗೆ ಭೇಟಿ ನೀಡಿದ ಆದಿತ್ಯನಾಥ, ಭಾವುಕರಾಗಿ ಬಿಟ್ಟರು. ಜೆಇ ಮತ್ತು ಎಇಎಸ್ ನಿಂದ ಬಳಲುತ್ತಿದ್ದ ಮಕ್ಕಳು ಸಾಯುತ್ತಿರುವುದನ್ನು ನಾನು ನೋಡಿದ್ದೇನೆ. ಇದರ ವಿರುದ್ಧ ನಾನು ಚಳವಳಿಯನ್ನು ಆರಂಭಿಸಿದ್ದೇನೆ. ನಾನು ಲೋಕಸಭೆಯಲ್ಲಿ ಈ ವಿಷಯವನ್ನು ಎತ್ತಿದ ನಂತರವೇ ಕೇಂದ್ರ ಸರ್ಕಾರ ವೈದ್ಯಕೀಯ ಕಾಲೇಜುಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಿತ್ತು ಎಂದಿದ್ದಾರೆ.</p>.<p>ಇದೀಗ ಮಕ್ಕಳ ಸಾವಿಗೂ ವಿಪಕ್ಷ ರಾಜಕೀಯ ಬಣ್ಣ ನೀಡುತ್ತಿದೆ. ಕಾಂಗ್ರೆಸ್ ನಾಯಕರು ಮಕ್ಕಳ ಸಾವಿನಲ್ಲಿಯೂ ಈ ರೀತಿಯ ವರ್ತನೆ ತೋರುವುದು ಸರಿಯಲ್ಲ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಗೋರಖಪುರ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.</p>.<p>ಆಗಸ್ಟ್ 10ರಿಂದ ಇಲ್ಲಿಯವರೆಗೆ 60ಕ್ಕೂ ಹೆಚ್ಚು ಮಕ್ಕಳು ಆಮ್ಲಜನಕದ ಕೊರತೆಯಿಂದ ಸಾವಿಗೀಡಾಗಿವೆ.<br /> ಈ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 30 ಮಕ್ಕಳು ಸಾವಿಗೀಡಾಗಿದ್ದರು. ಈ ರೀತಿ ಸಾವಿಗೀಡಾದವರು ಜಾಪನೀಸ್ ಇನ್ಸೆಫಲೈಟಿಸ್ (ಜೆಇ) ಮತ್ತು ಅಕ್ಯೂಟ್ ಇನ್ಸೆಫಲೈಟಿಸ್ ಸಿಂಡ್ರೊಮ್ನಿಂದ (ಎಇಎಸ್) ಬಳಲುತ್ತಿದ್ದ ಮಕ್ಕಳಾಗಿದ್ದಾರೆ.</p>.<p>ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ದುರಂತ ಸಂಭವಿಸುವುದಕ್ಕೆ ಆಮ್ಲಜನಕದ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದ್ದರೂ, ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯವೂ ಕಾರಣ ಎಂಬ ಟೀಕೆಯೂ ಕೇಳಿಬರುತ್ತಿದೆ.</p>.<p>ಆಸ್ಪತ್ರೆಗೆ ಭೇಟಿ ನೀಡಿದ ಆದಿತ್ಯನಾಥ ಅವರು, ಮಕ್ಕಳ ಸಾವಿಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.<br /> ರಾಜ್ಯ ಪ್ರಧಾನ ಕಾರ್ಯದರ್ಶಿಯ ನೇತೃತ್ವದಲ್ಲಿ ಕೇಂದ್ರ ಸರ್ಕಾರ ತನಿಖಾ ತಂಡವೊಂದನ್ನು ರಚಿಸಿದ್ದು, ಈ ತನಿಖಾ ತಂಡ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ತಪ್ಪು ಯಾರೇ ಮಾಡಲಿ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆದಿತ್ಯನಾಥ ಹೇಳಿದ್ದಾರೆ.</p>.<p>ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋರಖಪುರ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರನ್ನು ಉತ್ತರಪ್ರದೇಶ ಸರ್ಕಾರ ಶನಿವಾರ ವಜಾ ಮಾಡಿತ್ತು.</p>.<p>ಆಸ್ಪತ್ರೆಗೆ ಭೇಟಿ ನೀಡಿದ ಆದಿತ್ಯನಾಥ, ಭಾವುಕರಾಗಿ ಬಿಟ್ಟರು. ಜೆಇ ಮತ್ತು ಎಇಎಸ್ ನಿಂದ ಬಳಲುತ್ತಿದ್ದ ಮಕ್ಕಳು ಸಾಯುತ್ತಿರುವುದನ್ನು ನಾನು ನೋಡಿದ್ದೇನೆ. ಇದರ ವಿರುದ್ಧ ನಾನು ಚಳವಳಿಯನ್ನು ಆರಂಭಿಸಿದ್ದೇನೆ. ನಾನು ಲೋಕಸಭೆಯಲ್ಲಿ ಈ ವಿಷಯವನ್ನು ಎತ್ತಿದ ನಂತರವೇ ಕೇಂದ್ರ ಸರ್ಕಾರ ವೈದ್ಯಕೀಯ ಕಾಲೇಜುಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಿತ್ತು ಎಂದಿದ್ದಾರೆ.</p>.<p>ಇದೀಗ ಮಕ್ಕಳ ಸಾವಿಗೂ ವಿಪಕ್ಷ ರಾಜಕೀಯ ಬಣ್ಣ ನೀಡುತ್ತಿದೆ. ಕಾಂಗ್ರೆಸ್ ನಾಯಕರು ಮಕ್ಕಳ ಸಾವಿನಲ್ಲಿಯೂ ಈ ರೀತಿಯ ವರ್ತನೆ ತೋರುವುದು ಸರಿಯಲ್ಲ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>