<p><strong>ಆಗ್ರಾ (ಐಎಎನ್ಎಸ್):</strong> `ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಲೋಕಪಾಲ ಮಸೂದೆಯನ್ನು ಅಂಗೀಕರಿಸದಿದ್ದರೆ ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ~ ಎಂದು ಅಣ್ಣಾ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಶನಿವಾರ ಎಚ್ಚರಿಸಿದ್ದಾರೆ.</p>.<p>`ಕೆಲವು ದಿನಗಳ ಹಿಂದೆ ಅಣ್ಣಾ ಅವರನ್ನು ಭೇಟಿಯಾಗಿದ್ದು, ಒಂದು ವೇಳೆ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ, ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ~ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಅಣ್ಣಾ ಮುನ್ನಡೆಸಿರುವ ಚಳವಳಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. `ಮಸೂದೆಯನ್ನು ಜಾರಿಗೊಳಿಸಲು ಯಾವ ಪಕ್ಷವು ಹಿಂಜರಿಯುತ್ತದೆಯೋ ಆ ಪಕ್ಷದ ವಿರುದ್ಧವೂ ಚಳವಳಿ ನಡೆಯುತ್ತದೆ~ ಎಂದರು.</p>.<p>ಹೊಸ ವಿವಾದಕ್ಕೆ ಸಿಲುಕಿರುವ ಅಣ್ಣಾ ತಂಡದ ಸದಸ್ಯೆ ಕಿರಣ್ ಬೇಡಿ ಬಗ್ಗೆಯೂ ಕೇಜ್ರಿವಾಲ್ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು. ಸತ್ಯಾಂಶಗಳನ್ನು ಮುಚ್ಚಿಡುವ ಯಾವುದೇ ಉದ್ದೇಶ ಅವರಿಗಿರಲಿಲ್ಲ ಎಂದು ಹೇಳಿದ ಕೇಜ್ರಿವಾಲ್, ` ವಿಮಾನ ಪ್ರಯಾಣದಲ್ಲಿ ಉಳಿಸಿದ ಹಣವನ್ನು ಅವರು ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ (ಐಎಎನ್ಎಸ್):</strong> `ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಲೋಕಪಾಲ ಮಸೂದೆಯನ್ನು ಅಂಗೀಕರಿಸದಿದ್ದರೆ ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ~ ಎಂದು ಅಣ್ಣಾ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಶನಿವಾರ ಎಚ್ಚರಿಸಿದ್ದಾರೆ.</p>.<p>`ಕೆಲವು ದಿನಗಳ ಹಿಂದೆ ಅಣ್ಣಾ ಅವರನ್ನು ಭೇಟಿಯಾಗಿದ್ದು, ಒಂದು ವೇಳೆ ನೀಡಿದ ಭರವಸೆಯನ್ನು ಈಡೇರಿಸದಿದ್ದರೆ, ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ~ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಅಣ್ಣಾ ಮುನ್ನಡೆಸಿರುವ ಚಳವಳಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. `ಮಸೂದೆಯನ್ನು ಜಾರಿಗೊಳಿಸಲು ಯಾವ ಪಕ್ಷವು ಹಿಂಜರಿಯುತ್ತದೆಯೋ ಆ ಪಕ್ಷದ ವಿರುದ್ಧವೂ ಚಳವಳಿ ನಡೆಯುತ್ತದೆ~ ಎಂದರು.</p>.<p>ಹೊಸ ವಿವಾದಕ್ಕೆ ಸಿಲುಕಿರುವ ಅಣ್ಣಾ ತಂಡದ ಸದಸ್ಯೆ ಕಿರಣ್ ಬೇಡಿ ಬಗ್ಗೆಯೂ ಕೇಜ್ರಿವಾಲ್ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು. ಸತ್ಯಾಂಶಗಳನ್ನು ಮುಚ್ಚಿಡುವ ಯಾವುದೇ ಉದ್ದೇಶ ಅವರಿಗಿರಲಿಲ್ಲ ಎಂದು ಹೇಳಿದ ಕೇಜ್ರಿವಾಲ್, ` ವಿಮಾನ ಪ್ರಯಾಣದಲ್ಲಿ ಉಳಿಸಿದ ಹಣವನ್ನು ಅವರು ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>