<p><strong>ಲಖನೌ:</strong> ಮಗಳು ಬೆಳೆದು ದೊಡ್ಡ ವಳಾದ ನಂತರ ಮದುವೆಗೆ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ ಎಂಬ ಕಾರಣದಿಂದ ತಂದೆಯೊಬ್ಬ ಮೂರು ವರ್ಷದ ಮಗಳನ್ನೇ ಕೊಂದಿದ್ದಾನೆ. ಬಡತನದ ಕಾರಣದಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.</p>.<p>ಉತ್ತರ ಪ್ರದೇಶ ಸುಲ್ತಾನಪುರ ಜಿಲ್ಲೆಯ ಸೆವ್ರಾ ಗ್ರಾಮದ ಸುನೀಲ್ ಕುಮಾರ್ ಈ ಅಮಾನವೀಯ ಕೃತ್ಯ ಎಸಗಿರುವ ತಂದೆ.</p>.<p>ಅನನ್ಯಾ ಎಂಬ ಬಾಲಕಿ ಕೆಲವು ದಿನಗಳಿಂದ ಕಾಣೆಯಾಗಿರುವ ಬಗ್ಗೆ ಕುರೇಭರ್ ಠಾಣೆಯಲ್ಲಿ ದೂರು ದಾಖಲಾಗಿತ್ತು.</p>.<p>ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗಾಗಿ ಶ್ವಾನದಳದ ಸಹಾಯ ಪಡೆದಿದ್ದರು. ಗ್ರಾಮದಿಂದ ಕೆಲವು ಮೀಟರ್ಗಳ ದೂರದಲ್ಲಿರುವ ಬಾವಿಯಲ್ಲಿದ್ದ ಬಾಲಕಿಯ ಶವವನ್ನು ಶ್ವಾನಗಳು ಪತ್ತೆ ಹಚ್ಚಿದ್ದವು.</p>.<p>ಮರಣೋತ್ತರ ಪರೀಕ್ಷೆ ನಡೆಸಿದಾಗ, ಬಾಲಕಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ವರದಿ ಬಂದಿತ್ತು.</p>.<p>ಶವದ ಪಕ್ಕದಲ್ಲಿ ಸಿಕ್ಕ ಟವೆಲ್ನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ‘ಭವಿಷ್ಯದಲ್ಲಿ ಮಗಳ ಮದುವೆಗೆ ಹೆಚ್ಚು ಹಣ ಬೇಕಾಗುತ್ತದೆ. ನಾನು ಬಡವನಾಗಿರುವುದರಿಂದ ಆ ಮೊತ್ತ ವನ್ನು ಭರಿಸಲು ಸಾಧ್ಯವಿಲ್ಲ. ಈ ಕಾರಣ ದಿಂದ, ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದೇನೆ’ ಎಂದು ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳ ವಾರ ತಿಳಿಸಿದ್ದಾರೆ.</p>.<p>ಸುನೀಲ್ಕುಮಾರ್ ಈ ಹಿಂದೆಯೂ ಮಗಳನ್ನು ಕೊಲೆ ಮಾಡಲು ಪ್ರಯತ್ನಿಸಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮಗಳು ಬೆಳೆದು ದೊಡ್ಡ ವಳಾದ ನಂತರ ಮದುವೆಗೆ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ ಎಂಬ ಕಾರಣದಿಂದ ತಂದೆಯೊಬ್ಬ ಮೂರು ವರ್ಷದ ಮಗಳನ್ನೇ ಕೊಂದಿದ್ದಾನೆ. ಬಡತನದ ಕಾರಣದಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.</p>.<p>ಉತ್ತರ ಪ್ರದೇಶ ಸುಲ್ತಾನಪುರ ಜಿಲ್ಲೆಯ ಸೆವ್ರಾ ಗ್ರಾಮದ ಸುನೀಲ್ ಕುಮಾರ್ ಈ ಅಮಾನವೀಯ ಕೃತ್ಯ ಎಸಗಿರುವ ತಂದೆ.</p>.<p>ಅನನ್ಯಾ ಎಂಬ ಬಾಲಕಿ ಕೆಲವು ದಿನಗಳಿಂದ ಕಾಣೆಯಾಗಿರುವ ಬಗ್ಗೆ ಕುರೇಭರ್ ಠಾಣೆಯಲ್ಲಿ ದೂರು ದಾಖಲಾಗಿತ್ತು.</p>.<p>ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗಾಗಿ ಶ್ವಾನದಳದ ಸಹಾಯ ಪಡೆದಿದ್ದರು. ಗ್ರಾಮದಿಂದ ಕೆಲವು ಮೀಟರ್ಗಳ ದೂರದಲ್ಲಿರುವ ಬಾವಿಯಲ್ಲಿದ್ದ ಬಾಲಕಿಯ ಶವವನ್ನು ಶ್ವಾನಗಳು ಪತ್ತೆ ಹಚ್ಚಿದ್ದವು.</p>.<p>ಮರಣೋತ್ತರ ಪರೀಕ್ಷೆ ನಡೆಸಿದಾಗ, ಬಾಲಕಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ವರದಿ ಬಂದಿತ್ತು.</p>.<p>ಶವದ ಪಕ್ಕದಲ್ಲಿ ಸಿಕ್ಕ ಟವೆಲ್ನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ‘ಭವಿಷ್ಯದಲ್ಲಿ ಮಗಳ ಮದುವೆಗೆ ಹೆಚ್ಚು ಹಣ ಬೇಕಾಗುತ್ತದೆ. ನಾನು ಬಡವನಾಗಿರುವುದರಿಂದ ಆ ಮೊತ್ತ ವನ್ನು ಭರಿಸಲು ಸಾಧ್ಯವಿಲ್ಲ. ಈ ಕಾರಣ ದಿಂದ, ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದೇನೆ’ ಎಂದು ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳ ವಾರ ತಿಳಿಸಿದ್ದಾರೆ.</p>.<p>ಸುನೀಲ್ಕುಮಾರ್ ಈ ಹಿಂದೆಯೂ ಮಗಳನ್ನು ಕೊಲೆ ಮಾಡಲು ಪ್ರಯತ್ನಿಸಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>