<p><strong>ತಿರುನಲ್ವೇಲಿ (ಪಿಟಿಐ):</strong> ನದಿಯಿಂದ ಅಕ್ರಮವಾಗಿ ತೆಗೆದಿದ್ದ ಮರಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆಯಲು ಯತ್ನಿಸಿದ ಯುವಕನ ಮೇಲೆ ಲಾರಿಯನ್ನು ಚಲಾಯಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ.<br /> <br /> ಮಧ್ಯಪ್ರದೇಶದಲ್ಲಿ ಗಣಿ ಮಾಫಿಯಾಕ್ಕೆ ತಡೆಯೊಡ್ಡಲು ಯತ್ನಿಸಿ ಯುವ ಐಪಿಎಸ್ ಅಧಿಕಾರಿ ನರೇಂದ್ರ ಕುಮಾರ್ ಸಿಂಗ್ ನಾಲ್ಕು ದಿನಗಳ ಹಿಂದೆ ಇದೇ ರೀತಿ ದುರ್ಮರಣಕ್ಕೀಡಾಗಿದ್ದರು.<br /> <br /> 21 ವರ್ಷದ ಸತೀಶ್ ಕುಮಾರ್ ತಿರುನಲ್ವೇಲಿಯಲ್ಲಿ ಅಕ್ರಮ ಗಣಿ ಕ್ರೌರ್ಯಕ್ಕೆ ಬಲಿಯಾದ ಯುವಕ. 20 ಜನ ಗ್ರಾಮಸ್ಥರೊಂದಿಗೆ ಸೇರಿಕೊಂಡು ನಿಯಮಬಾಹಿರ ಮರಳು ಸಾಗಣೆ ವಿರುದ್ಧ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಸತೀಶ್ ಮೇಲೆ ಲಾರಿಯನ್ನು ಚಲಾಯಿಸಲಾಯಿತು.<br /> <br /> ಘಟನೆಯ ನಂತರ ಭಯಗೊಂಡ ಗ್ರಾಮಸ್ಥರು ಸ್ಥಳದಿಂದ ಪಲಾಯನ ಮಾಡಿದರು ಎನ್ನಲಾಗಿದೆ.<br /> ಲಾರಿ ಚಾಲಕನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುನಲ್ವೇಲಿ (ಪಿಟಿಐ):</strong> ನದಿಯಿಂದ ಅಕ್ರಮವಾಗಿ ತೆಗೆದಿದ್ದ ಮರಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆಯಲು ಯತ್ನಿಸಿದ ಯುವಕನ ಮೇಲೆ ಲಾರಿಯನ್ನು ಚಲಾಯಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ.<br /> <br /> ಮಧ್ಯಪ್ರದೇಶದಲ್ಲಿ ಗಣಿ ಮಾಫಿಯಾಕ್ಕೆ ತಡೆಯೊಡ್ಡಲು ಯತ್ನಿಸಿ ಯುವ ಐಪಿಎಸ್ ಅಧಿಕಾರಿ ನರೇಂದ್ರ ಕುಮಾರ್ ಸಿಂಗ್ ನಾಲ್ಕು ದಿನಗಳ ಹಿಂದೆ ಇದೇ ರೀತಿ ದುರ್ಮರಣಕ್ಕೀಡಾಗಿದ್ದರು.<br /> <br /> 21 ವರ್ಷದ ಸತೀಶ್ ಕುಮಾರ್ ತಿರುನಲ್ವೇಲಿಯಲ್ಲಿ ಅಕ್ರಮ ಗಣಿ ಕ್ರೌರ್ಯಕ್ಕೆ ಬಲಿಯಾದ ಯುವಕ. 20 ಜನ ಗ್ರಾಮಸ್ಥರೊಂದಿಗೆ ಸೇರಿಕೊಂಡು ನಿಯಮಬಾಹಿರ ಮರಳು ಸಾಗಣೆ ವಿರುದ್ಧ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಸತೀಶ್ ಮೇಲೆ ಲಾರಿಯನ್ನು ಚಲಾಯಿಸಲಾಯಿತು.<br /> <br /> ಘಟನೆಯ ನಂತರ ಭಯಗೊಂಡ ಗ್ರಾಮಸ್ಥರು ಸ್ಥಳದಿಂದ ಪಲಾಯನ ಮಾಡಿದರು ಎನ್ನಲಾಗಿದೆ.<br /> ಲಾರಿ ಚಾಲಕನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>