<p><strong>ಡೆಹ್ರಾಡೂನ್ (ಪಿಟಿಐ): </strong>ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಉತ್ತರಾಖಂಡದ ಮೇಘಸ್ಫೋಟಕ್ಕೆ ತತ್ತರಿಸಿದ ಪ್ರದೇಶಗಳಲ್ಲಿ ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗಿದೆ.<br /> <br /> ಪ್ರವಾಹಕ್ಕೆ ನಲುಗಿರುವ ರುದ್ರಪ್ರಯಾಗ್, ಉತ್ತರಕಾಶಿ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಆಹಾರ ಸಾಮಗ್ರಿಗಳನ್ನು ಪೂರೈಸಲು ರಾಜ್ಯ ಸರ್ಕಾರ ಭಾನುವಾರ ಹೆಲಿಕಾಪ್ಟರ್ಗಳನ್ನು ಸಜ್ಜುಗೊಳಿಸಿ ನಿಲ್ಲಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ಗಳು ಹಾರಾಟ ನಡೆಸಲು ಸಾಧ್ಯವಾಗಿಲ್ಲ.<br /> <br /> ಈ ಮೂರು ಜಿಲ್ಲೆಗಳಲ್ಲಿ ಪ್ರವಾಹದ ಹೊಡೆತಕ್ಕೆ ಬಲಿಯಾಗಿರುವ ಹಳ್ಳಿಗಳ ಪ್ರಮುಖ ಸಂಚಾರ ಮಾರ್ಗಗಳೆಲ್ಲವೂ ಕೊಚ್ಚಿಕೊಂಡು ಹೋಗಿ ಹಾಳಾಗಿರುವುದರಿಂದ ಲಾರಿಗಳ ಮೂಲಕ ಹಳ್ಳಿಗಳಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವುದು ಜಿಲ್ಲಾಡಳಿತಕ್ಕೆ ಅಸಾಧ್ಯವಾಗಿದೆ.<br /> <br /> ಸಧ್ಯ ಆಧಾರಧಾನ್ಯಗಳ ಕೊರತೆ ಎದುರಿಸುತ್ತಿರುವ ಹಳ್ಳಿಗಳಿಗೆ ಆಹಾರ ಸಾಮಗ್ರಿಗಳನ್ನು ಪೂರೈಸಲು ಹವಾಮಾನ ವೈಪರಿತ್ಯದಲ್ಲೂ ಕಾರ್ಯನಿರ್ವಹಿಸುವ ಹೆಲಿಕಾಪ್ಟರ್ಗಳನ್ನು ಬಳಕೆಮಾಡುವುದೊಂದೆ ಇದೀಗ ಉಳಿದಿರುವ ಆಯ್ಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್ (ಪಿಟಿಐ): </strong>ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದಾಗಿ ಉತ್ತರಾಖಂಡದ ಮೇಘಸ್ಫೋಟಕ್ಕೆ ತತ್ತರಿಸಿದ ಪ್ರದೇಶಗಳಲ್ಲಿ ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗಿದೆ.<br /> <br /> ಪ್ರವಾಹಕ್ಕೆ ನಲುಗಿರುವ ರುದ್ರಪ್ರಯಾಗ್, ಉತ್ತರಕಾಶಿ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಆಹಾರ ಸಾಮಗ್ರಿಗಳನ್ನು ಪೂರೈಸಲು ರಾಜ್ಯ ಸರ್ಕಾರ ಭಾನುವಾರ ಹೆಲಿಕಾಪ್ಟರ್ಗಳನ್ನು ಸಜ್ಜುಗೊಳಿಸಿ ನಿಲ್ಲಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ಗಳು ಹಾರಾಟ ನಡೆಸಲು ಸಾಧ್ಯವಾಗಿಲ್ಲ.<br /> <br /> ಈ ಮೂರು ಜಿಲ್ಲೆಗಳಲ್ಲಿ ಪ್ರವಾಹದ ಹೊಡೆತಕ್ಕೆ ಬಲಿಯಾಗಿರುವ ಹಳ್ಳಿಗಳ ಪ್ರಮುಖ ಸಂಚಾರ ಮಾರ್ಗಗಳೆಲ್ಲವೂ ಕೊಚ್ಚಿಕೊಂಡು ಹೋಗಿ ಹಾಳಾಗಿರುವುದರಿಂದ ಲಾರಿಗಳ ಮೂಲಕ ಹಳ್ಳಿಗಳಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವುದು ಜಿಲ್ಲಾಡಳಿತಕ್ಕೆ ಅಸಾಧ್ಯವಾಗಿದೆ.<br /> <br /> ಸಧ್ಯ ಆಧಾರಧಾನ್ಯಗಳ ಕೊರತೆ ಎದುರಿಸುತ್ತಿರುವ ಹಳ್ಳಿಗಳಿಗೆ ಆಹಾರ ಸಾಮಗ್ರಿಗಳನ್ನು ಪೂರೈಸಲು ಹವಾಮಾನ ವೈಪರಿತ್ಯದಲ್ಲೂ ಕಾರ್ಯನಿರ್ವಹಿಸುವ ಹೆಲಿಕಾಪ್ಟರ್ಗಳನ್ನು ಬಳಕೆಮಾಡುವುದೊಂದೆ ಇದೀಗ ಉಳಿದಿರುವ ಆಯ್ಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>