<p><strong>ದಾತಿಯಾ (ಮಧ್ಯ ಪ್ರದೇಶ) (ಪಿಟಿಐ):</strong> ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ರತನ್ಗಡದಲ್ಲಿ ಭಾನುವಾರ ನವರಾತ್ರಿ ಉತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 115ಕ್ಕೆ ಏರಿದೆ. </p>.<p>ಗಾಯಾಳುಗಳ ಸಂಖ್ಯೆ ನೂರನ್ನು ಮೀರಿದೆ.<br /> <br /> ಘಟನಾ ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಹೆಣಗಳ ರಾಶಿ, ರಕ್ತದ ಕಲೆಗಳಿಂದಾಗಿ ಉತ್ಸವ ಸ್ಥಳ ಸ್ಮಶಾನ ಸದೃಶ್ಯವಾಗಿ ಪರಿಣಮಿಸಿತ್ತು.<br /> <br /> ಭಾನುವಾರ ಉತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಸಿಂಧ್ ನದಿಯ ಸೇತುವೆ ದಾಟುತ್ತಿದ್ದ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ‘ಸೇತುವೆ ಕುಸಿಯುತ್ತಿದೆ’ ಎಂಬ ಗಾಳಿ ಸುದ್ದಿ ಹರಡಿದರು. ಹಠಾತ್ ಸುದ್ದಿಯಿಂದ ಭಯಭೀತರಾದ ಸಾವಿರಾರು ಜನರು ಕಂಗಾಲಾಗಿ ದಿಕ್ಕಾಪಾಲಾಗಿ ಓಡತೊಡಗಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.<br /> <br /> ಈವರೆಗೆ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 115 ಕ್ಕೆ ಏರಿದ್ದು, ಆ ಪೈಕಿ 31 ಮಹಿಳೆಯರು ಮತ್ತು 17 ಮಕ್ಕಳು ಸೇರಿದ್ದಾರೆ.<br /> ಭೋಪಾಲ್ನಿಂದ 320 ಕಿ.ಮೀ ದೂರದಲ್ಲಿರುವ ರತನ್ಗಡದಲ್ಲಿ ಪ್ರತಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ದುರ್ಗಾದೇವಿಯ ಪೂಜೆಗೆ ನೆರೆಯ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಸೇರುತ್ತಾರೆ.<br /> <br /> ಉತ್ತರ ಪ್ರದೇಶದ ಝಾನ್ಸಿಯಿಂದ ಕೆಲವೇ ಕಿ.ಮೀ ದೂರದಲ್ಲಿರುವ ಕಾರಣ ಇಲ್ಲಿಗೆ ಆಗಮಿಸುವವರಲ್ಲಿ ಉತ್ತರ ಪ್ರದೇಶದ ಭಕ್ತರ ಸಂಖ್ಯೆ ಹೆಚ್ಚು. ಹೀಗಾಗಿ ದುರಂತದಲ್ಲಿ ಮೃತಪಟ್ಟವರ ಪೈಕಿ ಈ ರಾಜ್ಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಷ್ಟೊಂದು ಜನರು ಸೇರುವ ನಿರೀಕ್ಷೆ ಇದ್ದರೂ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸದಿರುವುದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.<br /> <br /> ರೊಚ್ಚಿಗೆದ್ದ ಜನರು ಘಟನೆ ಖಂಡಿಸಿ ಪ್ರತಿ ಭಟನೆ ನಡೆಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾತಿಯಾ (ಮಧ್ಯ ಪ್ರದೇಶ) (ಪಿಟಿಐ):</strong> ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ರತನ್ಗಡದಲ್ಲಿ ಭಾನುವಾರ ನವರಾತ್ರಿ ಉತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 115ಕ್ಕೆ ಏರಿದೆ. </p>.<p>ಗಾಯಾಳುಗಳ ಸಂಖ್ಯೆ ನೂರನ್ನು ಮೀರಿದೆ.<br /> <br /> ಘಟನಾ ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಹೆಣಗಳ ರಾಶಿ, ರಕ್ತದ ಕಲೆಗಳಿಂದಾಗಿ ಉತ್ಸವ ಸ್ಥಳ ಸ್ಮಶಾನ ಸದೃಶ್ಯವಾಗಿ ಪರಿಣಮಿಸಿತ್ತು.<br /> <br /> ಭಾನುವಾರ ಉತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಸಿಂಧ್ ನದಿಯ ಸೇತುವೆ ದಾಟುತ್ತಿದ್ದ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ‘ಸೇತುವೆ ಕುಸಿಯುತ್ತಿದೆ’ ಎಂಬ ಗಾಳಿ ಸುದ್ದಿ ಹರಡಿದರು. ಹಠಾತ್ ಸುದ್ದಿಯಿಂದ ಭಯಭೀತರಾದ ಸಾವಿರಾರು ಜನರು ಕಂಗಾಲಾಗಿ ದಿಕ್ಕಾಪಾಲಾಗಿ ಓಡತೊಡಗಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.<br /> <br /> ಈವರೆಗೆ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 115 ಕ್ಕೆ ಏರಿದ್ದು, ಆ ಪೈಕಿ 31 ಮಹಿಳೆಯರು ಮತ್ತು 17 ಮಕ್ಕಳು ಸೇರಿದ್ದಾರೆ.<br /> ಭೋಪಾಲ್ನಿಂದ 320 ಕಿ.ಮೀ ದೂರದಲ್ಲಿರುವ ರತನ್ಗಡದಲ್ಲಿ ಪ್ರತಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ದುರ್ಗಾದೇವಿಯ ಪೂಜೆಗೆ ನೆರೆಯ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಸೇರುತ್ತಾರೆ.<br /> <br /> ಉತ್ತರ ಪ್ರದೇಶದ ಝಾನ್ಸಿಯಿಂದ ಕೆಲವೇ ಕಿ.ಮೀ ದೂರದಲ್ಲಿರುವ ಕಾರಣ ಇಲ್ಲಿಗೆ ಆಗಮಿಸುವವರಲ್ಲಿ ಉತ್ತರ ಪ್ರದೇಶದ ಭಕ್ತರ ಸಂಖ್ಯೆ ಹೆಚ್ಚು. ಹೀಗಾಗಿ ದುರಂತದಲ್ಲಿ ಮೃತಪಟ್ಟವರ ಪೈಕಿ ಈ ರಾಜ್ಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಷ್ಟೊಂದು ಜನರು ಸೇರುವ ನಿರೀಕ್ಷೆ ಇದ್ದರೂ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸದಿರುವುದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.<br /> <br /> ರೊಚ್ಚಿಗೆದ್ದ ಜನರು ಘಟನೆ ಖಂಡಿಸಿ ಪ್ರತಿ ಭಟನೆ ನಡೆಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>