<p><strong>ರಾಯಗಡ/ಮಹಾರಾಷ್ಟ್ರ:</strong>ಗೃಹ ಪ್ರವೇಶ ಸಮಾರಂಭಲ್ಲಿ ವಿಷಾಹಾರ ಸೇವನೆಯಿಂದ 3 ಮಕ್ಕಳು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮುಂಬೈನ ಖಾಲಾಪುರ್ ಬಳಿಯ ಮಹಾದ್ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಖಾಲಾಪುರ್ ಮುಂಬೈನಿಂದ 170ಕಿ.ಮೀ ದೂರದಲ್ಲಿದೆ.</p>.<p>ಮೃತರನ್ನು ಪ್ರಗತಿ ಶಿಂಧೆ(12), ರಿಷಿಕೇಶ್ ಶಿಂಧೆ (12), ಕಲ್ಯಾಣಿ ಶಿಂಘೋಟೆ (7) ಎಂದು ಗುರುತಿಸಲಾಗಿದೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ.</p>.<p>ಆಹಾರದಲ್ಲಿ ರಾಸಾಯನಿಕ ಕೀಟನಾಶಕ ಸೇರಿರುವುದೇ ಜನರು ಅಸ್ವಸ್ಥಗೊಳ್ಳಲು ಕಾರಣ ಎಂದು ವೈದ್ಯರು, ಪೊಲೀಸರು ತಿಳಿಸಿದ್ದಾರೆ.</p>.<p><strong>ನಡೆದದ್ದೇನು?</strong></p>.<p>ಸುಭಾಷ್ ಮಾನೆ ಎಂಬುವರು ಮಹಾದ್ ಗ್ರಾಮದಲ್ಲಿ ಗೃಹ ಪ್ರವೇಶ ಸಮಾರಂಭ ಏರ್ಪಡಿಸಿದ್ದರು. ಜೊತೆಗೆ ವಾಸ್ತು ಶಾಂತಿ ಪೂಜೆಯೂ ಇತ್ತು.</p>.<p>ಗೃಹ ಪ್ರವೇಶದಲ್ಲಿ ಒಟ್ಟು 500 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ನಂತರ ಮಕ್ಕಳು ಹೊಟ್ಟೆ ನೋವು ಎಂದು ನರಳಾಡಿದರು. ಬಳಿಕ ದೊಡ್ಡವರಿಗೂ ಹೊಟ್ಟೆನೋವು, ವಾಂತಿ ಆರಂಭವಾಯಿತು. ಅಸ್ವಸ್ಥಗೊಂಡ 200 ಮಂದಿಯನ್ನು ಕೊಪೋಲಿಯಲ್ಲಿರುವ ಪಾರ್ವತಿ ಆಸ್ಪತ್ರೆಗೆ ದಾಖಲಿಸಲಾಯಿತು ರೋಗಿಯ ಸಂಬಂಧಿಕರೊಬ್ಬರು ತಿಳಿಸಿದರು.</p>.<p>ಈ ಬಗ್ಗೆ ರಾಯಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ರಾಯಗಡ ಪೊಲೀಸ್ ವಕ್ತಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಗಡ/ಮಹಾರಾಷ್ಟ್ರ:</strong>ಗೃಹ ಪ್ರವೇಶ ಸಮಾರಂಭಲ್ಲಿ ವಿಷಾಹಾರ ಸೇವನೆಯಿಂದ 3 ಮಕ್ಕಳು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮುಂಬೈನ ಖಾಲಾಪುರ್ ಬಳಿಯ ಮಹಾದ್ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಖಾಲಾಪುರ್ ಮುಂಬೈನಿಂದ 170ಕಿ.ಮೀ ದೂರದಲ್ಲಿದೆ.</p>.<p>ಮೃತರನ್ನು ಪ್ರಗತಿ ಶಿಂಧೆ(12), ರಿಷಿಕೇಶ್ ಶಿಂಧೆ (12), ಕಲ್ಯಾಣಿ ಶಿಂಘೋಟೆ (7) ಎಂದು ಗುರುತಿಸಲಾಗಿದೆ. ಕೆಲವರ ಪರಿಸ್ಥಿತಿ ಗಂಭೀರವಾಗಿದೆ.</p>.<p>ಆಹಾರದಲ್ಲಿ ರಾಸಾಯನಿಕ ಕೀಟನಾಶಕ ಸೇರಿರುವುದೇ ಜನರು ಅಸ್ವಸ್ಥಗೊಳ್ಳಲು ಕಾರಣ ಎಂದು ವೈದ್ಯರು, ಪೊಲೀಸರು ತಿಳಿಸಿದ್ದಾರೆ.</p>.<p><strong>ನಡೆದದ್ದೇನು?</strong></p>.<p>ಸುಭಾಷ್ ಮಾನೆ ಎಂಬುವರು ಮಹಾದ್ ಗ್ರಾಮದಲ್ಲಿ ಗೃಹ ಪ್ರವೇಶ ಸಮಾರಂಭ ಏರ್ಪಡಿಸಿದ್ದರು. ಜೊತೆಗೆ ವಾಸ್ತು ಶಾಂತಿ ಪೂಜೆಯೂ ಇತ್ತು.</p>.<p>ಗೃಹ ಪ್ರವೇಶದಲ್ಲಿ ಒಟ್ಟು 500 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ನಂತರ ಮಕ್ಕಳು ಹೊಟ್ಟೆ ನೋವು ಎಂದು ನರಳಾಡಿದರು. ಬಳಿಕ ದೊಡ್ಡವರಿಗೂ ಹೊಟ್ಟೆನೋವು, ವಾಂತಿ ಆರಂಭವಾಯಿತು. ಅಸ್ವಸ್ಥಗೊಂಡ 200 ಮಂದಿಯನ್ನು ಕೊಪೋಲಿಯಲ್ಲಿರುವ ಪಾರ್ವತಿ ಆಸ್ಪತ್ರೆಗೆ ದಾಖಲಿಸಲಾಯಿತು ರೋಗಿಯ ಸಂಬಂಧಿಕರೊಬ್ಬರು ತಿಳಿಸಿದರು.</p>.<p>ಈ ಬಗ್ಗೆ ರಾಯಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ರಾಯಗಡ ಪೊಲೀಸ್ ವಕ್ತಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>