<p><strong>ನವದೆಹಲಿ: </strong>ಐದು ರಾಜ್ಯಗಳ ವಿಧಾನ ಸಭೆ ಚುನಾವಣೆಗಳ ಮತ ಎಣಿಕೆಯು ಮಾರ್ಚ್ 4ಕ್ಕೆ ಬದಲು ಮಾರ್ಚ್ 6ರಂದು ನಡೆಯಲಿದೆ.<br /> <br /> ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯನ್ನು ಫೆ. 4ಕ್ಕೆ ಬದಲು ಮಾರ್ಚ್ 3ಕ್ಕೆ ಮುಂದೂಡಿರುವ ಕಾರಣ ಈ ಮಾರ್ಪಾಡು ಮಾಡಲಾಗಿದೆ. `ಐದು ರಾಜ್ಯಗಳ -ಮಣಿಪುರ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಉತ್ತರ ಪ್ರದೇಶ- ವಿಧಾನಸಭೆ ಚುನಾವಣೆಯ ಮತ ಎಣಿಕೆಯನ್ನು ಮಾರ್ಚ್ 6ರಂದು ನಡೆಸಲು ನಿರ್ಧರಿಸಲಾಗಿದೆ~ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ. ಪ್ರವಾದಿ ಮಹಮದ್ ಅವರ ಜನ್ಮ ದಿನಾಚರಣೆ ಫೆ. 4ರಂದು ನಡೆಯಲಿರುವ ಕಾರಣ ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯನ್ನು ಮುಂದೂಡಲಾಗಿದೆ.<br /> <br /> <strong>ಮುಸ್ಲಿಮರಿಗೆ ಶೇ9 ರಷ್ಟು ಮೀಸಲಾತಿ ಕಾಂಗ್ರೆಸ್ ಭರವಸೆ<br /> ಫರೂಖಾಬಾದ್ (ಪಿಟಿಐ):</strong> ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಕ್ಷವು ಹಿಂದುಳಿದ ಮುಸ್ಲಿಮರಿಗೆ ಶೇ 9ರಷ್ಟು ಒಳಮೀಸಲಾತಿ ನೀಡಲಿದೆ ಎಂದು ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಭರವಸೆ ನೀಡಿದ್ದಾರೆ.<br /> <br /> ಫರೂಖಾಬಾದ್ನಲ್ಲಿ ಭಾನುವಾರ ನಡೆದ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದ್ದಾರೆ. ಈ ವಿಧಾನಸಭಾ ಕ್ಷೇತ್ರದಿಂದ ಖುರ್ಷಿದ್ ಪತ್ನಿ ಲೂಸಿ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿದ್ದಾರೆ.<br /> <br /> ರಾಜ್ಯದ ಮತದಾರರು ಪಕ್ಷವನ್ನು ಗೆಲ್ಲಿಸಿದ್ದೇ ಆದರೆ ಈಗಾಗಲೇ ಇರುವ ಇತರ ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಿಂದುಳಿತ ಮುಸ್ಲಿಮರಿಗೆ ಶೇ 9 ರಷ್ಟು ಒಳ ಮೀಸಲಾತಿ ನೀಡಲಾಗುವುದು. ಇದರಿಂದಾಗಿ ಮನ್ಸೂರಿ, ಖುರೇಶಿ ಸೇರಿದಂತೆ ಎಂಟಕ್ಕೂ ಅಧಿಕ ಜಾತಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.<br /> <br /> <strong>ಪಂಜಾಬ್: ಸ್ಪರ್ಧೆಯಲ್ಲಿ ಹಿರಿಯಜೀವಿಗಳದ್ದೇ ಕಾರುಬಾರು<br /> ಚಂಡೀಗಡ: </strong>ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹಿರಿ ಜೀವಗಳದ್ದೇ ಕಾರುಬಾರು. ಎಪ್ಪತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.<br /> <br /> ಆಡಳಿತಾರೂಢ ಅಕಾಲಿದಳ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ನಿಂದಲೇ 35ಕ್ಕೂ ಅಧಿಕ ಹಿರಿಯ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಲಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ 84 ವರ್ಷದ ಪ್ರಕಾಶ್ ಸಿಂಗ್ ಬಾದಲ್ ಚುನಾವಣಾ ಕಣದಲ್ಲಿರುವ ಅತಿ ಹಿರಿಯರು.<br /> <br /> ಪಾಟಿಯಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ರಾಜ್ಯ ಅಧ್ಯಕ್ಷ ಅಮರೀಂದರ್ ಸಿಂಗ್ ಈ ಬಾರಿ ಎಪ್ಪತ್ತರ ಹರೆಯದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.<br /> ಕಾಂಗ್ರೆಸ್ ಪಕ್ಷವೊಂದರಿಂದಲೇ 10ಕ್ಕೂ ಅಧಿಕ ಎಪ್ಪತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಐದು ರಾಜ್ಯಗಳ ವಿಧಾನ ಸಭೆ ಚುನಾವಣೆಗಳ ಮತ ಎಣಿಕೆಯು ಮಾರ್ಚ್ 4ಕ್ಕೆ ಬದಲು ಮಾರ್ಚ್ 6ರಂದು ನಡೆಯಲಿದೆ.<br /> <br /> ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯನ್ನು ಫೆ. 4ಕ್ಕೆ ಬದಲು ಮಾರ್ಚ್ 3ಕ್ಕೆ ಮುಂದೂಡಿರುವ ಕಾರಣ ಈ ಮಾರ್ಪಾಡು ಮಾಡಲಾಗಿದೆ. `ಐದು ರಾಜ್ಯಗಳ -ಮಣಿಪುರ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಉತ್ತರ ಪ್ರದೇಶ- ವಿಧಾನಸಭೆ ಚುನಾವಣೆಯ ಮತ ಎಣಿಕೆಯನ್ನು ಮಾರ್ಚ್ 6ರಂದು ನಡೆಸಲು ನಿರ್ಧರಿಸಲಾಗಿದೆ~ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ. ಪ್ರವಾದಿ ಮಹಮದ್ ಅವರ ಜನ್ಮ ದಿನಾಚರಣೆ ಫೆ. 4ರಂದು ನಡೆಯಲಿರುವ ಕಾರಣ ಉತ್ತರಪ್ರದೇಶದ ಮೊದಲ ಹಂತದ ಚುನಾವಣೆಯನ್ನು ಮುಂದೂಡಲಾಗಿದೆ.<br /> <br /> <strong>ಮುಸ್ಲಿಮರಿಗೆ ಶೇ9 ರಷ್ಟು ಮೀಸಲಾತಿ ಕಾಂಗ್ರೆಸ್ ಭರವಸೆ<br /> ಫರೂಖಾಬಾದ್ (ಪಿಟಿಐ):</strong> ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಕ್ಷವು ಹಿಂದುಳಿದ ಮುಸ್ಲಿಮರಿಗೆ ಶೇ 9ರಷ್ಟು ಒಳಮೀಸಲಾತಿ ನೀಡಲಿದೆ ಎಂದು ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಭರವಸೆ ನೀಡಿದ್ದಾರೆ.<br /> <br /> ಫರೂಖಾಬಾದ್ನಲ್ಲಿ ಭಾನುವಾರ ನಡೆದ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದ್ದಾರೆ. ಈ ವಿಧಾನಸಭಾ ಕ್ಷೇತ್ರದಿಂದ ಖುರ್ಷಿದ್ ಪತ್ನಿ ಲೂಸಿ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿದ್ದಾರೆ.<br /> <br /> ರಾಜ್ಯದ ಮತದಾರರು ಪಕ್ಷವನ್ನು ಗೆಲ್ಲಿಸಿದ್ದೇ ಆದರೆ ಈಗಾಗಲೇ ಇರುವ ಇತರ ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಿಂದುಳಿತ ಮುಸ್ಲಿಮರಿಗೆ ಶೇ 9 ರಷ್ಟು ಒಳ ಮೀಸಲಾತಿ ನೀಡಲಾಗುವುದು. ಇದರಿಂದಾಗಿ ಮನ್ಸೂರಿ, ಖುರೇಶಿ ಸೇರಿದಂತೆ ಎಂಟಕ್ಕೂ ಅಧಿಕ ಜಾತಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.<br /> <br /> <strong>ಪಂಜಾಬ್: ಸ್ಪರ್ಧೆಯಲ್ಲಿ ಹಿರಿಯಜೀವಿಗಳದ್ದೇ ಕಾರುಬಾರು<br /> ಚಂಡೀಗಡ: </strong>ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹಿರಿ ಜೀವಗಳದ್ದೇ ಕಾರುಬಾರು. ಎಪ್ಪತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.<br /> <br /> ಆಡಳಿತಾರೂಢ ಅಕಾಲಿದಳ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ನಿಂದಲೇ 35ಕ್ಕೂ ಅಧಿಕ ಹಿರಿಯ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಲಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ 84 ವರ್ಷದ ಪ್ರಕಾಶ್ ಸಿಂಗ್ ಬಾದಲ್ ಚುನಾವಣಾ ಕಣದಲ್ಲಿರುವ ಅತಿ ಹಿರಿಯರು.<br /> <br /> ಪಾಟಿಯಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ರಾಜ್ಯ ಅಧ್ಯಕ್ಷ ಅಮರೀಂದರ್ ಸಿಂಗ್ ಈ ಬಾರಿ ಎಪ್ಪತ್ತರ ಹರೆಯದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.<br /> ಕಾಂಗ್ರೆಸ್ ಪಕ್ಷವೊಂದರಿಂದಲೇ 10ಕ್ಕೂ ಅಧಿಕ ಎಪ್ಪತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>