<p><strong>ನವದೆಹಲಿ (ಪಿಟಿಐ): </strong>‘ಒಂದೇ ಶ್ರೇಣಿ ಒಂದೇ ಪಿಂಚಣಿ’ (ಒಆರ್ಒಪಿ) ಜಾರಿಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ದೇಶದಾದ್ಯಂತ ಮಾಜಿ ಯೋಧರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಮಾಜಿ ಯೋಧರು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.<br /> <br /> ‘ಒಂದೇ ರ್್ಯಾಂಕ್ ಒಂದೇ ಪಿಂಚಣಿ’ ಜಾರಿ ಸಂಬಂಧ ಸರ್ಕಾರದೊಂದಿಗೆ ನಡೆದ ಎಲ್ಲ ರೀತಿಯ ಮಾತುಕತೆಗಳು ಮುರಿದುಬಿದ್ದ ನಂತರ ಮಾಜಿ ಯೋಧರು ಪ್ರತಿಭಟನೆಯ ದಾರಿ ಹಿಡಿದಿದ್ದಾರೆ. ಸರ್ಕಾರ ಸಹ ಜಾರಿಗೆ ಈವರೆಗೆ ಸಮಯ ನಿಗದಿ ಮಾಡಿಲ್ಲ.<br /> ಒಆರ್ಒಪಿ ಜಾರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದರೂ ಈವರೆಗೆ ಜಾರಿ<br /> ಯಾಗಿಲ್ಲ ಎಂದು ಭಾರತೀಯ ಮಾಜಿ ಯೋಧರ ಚಳವಳಿಯ ಮಾಧ್ಯಮ ಸಲಹೆಗಾರ ಅನಿಲ್ ಕೌಲ್ ಹೇಳಿದ್ದಾರೆ.<br /> <br /> ‘ನಾವು ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಆದರೆ ಬಹುಕಾಲದಿಂದ ಜಾರಿಯಾಗದೇ ಉಳಿದಿ ರುವ ಪಿಂಚಣಿಗಾಗಿ ಪ್ರತಿಭಟನೆ ನಡೆಸುತ್ತಿ ದ್ದೇವೆ ಎಂದು ತಿಳಿಸಿದ ಪ್ರತಿಭಟನಾ ಕಾರರು, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಲು ಕಾಲಾವಕಾಶ ಕೋರಿರುವುದಾಗಿ ಹೇಳಿದರು.<br /> <br /> ದೆಹಲಿಯಲ್ಲಿ ನಡೆಯುತ್ತಿರುವ ಮಾಜಿ ಯೋಧರ ಪ್ರತಿಭಟನೆಗೆ ದೆಹಲಿ ವಿಶ್ವ ವಿದ್ಯಾಲಯ ಮತ್ತು ಜವಾಹರ<br /> ಲಾಲ್ ನೆಹರು ವಿವಿಯ ವಿದ್ಯಾರ್ಥಿಗಳೂ ಕೈ ಜೋಡಿಸಿದರು. ಜಂತರ್ ಮಂತರ್ ನಲ್ಲಿ ರೈತರೂ ಭಾಗವಹಿಸಿದ್ದರು.<br /> <br /> ಒಆರ್ಒಪಿ ಜಾರಿ ಸಂಬಂಧ ಸರ್ಕಾರ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಈಗಾಗಲೇ ಹೇಳಿದ್ದಾರೆ. ಈ ನಡುವೆ ಆರ್ಎಸ್ಎಸ್ ಜತೆ ಆಪ್ತವಾಗಿ ರುವ ಕೆಲವು ಮಾಜಿ ಯೋಧರು, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದು, ಜಾರಿಗೆ ಒತ್ತಾಯಿಸಿದ್ದಾರೆ. 25 ಲಕ್ಷ ಮಾಜಿ ಯೋಧರ ನಂಬಿಕೆಯನ್ನು ಹುಸಿಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>‘ಒಂದೇ ಶ್ರೇಣಿ ಒಂದೇ ಪಿಂಚಣಿ’ (ಒಆರ್ಒಪಿ) ಜಾರಿಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ದೇಶದಾದ್ಯಂತ ಮಾಜಿ ಯೋಧರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಮಾಜಿ ಯೋಧರು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.<br /> <br /> ‘ಒಂದೇ ರ್್ಯಾಂಕ್ ಒಂದೇ ಪಿಂಚಣಿ’ ಜಾರಿ ಸಂಬಂಧ ಸರ್ಕಾರದೊಂದಿಗೆ ನಡೆದ ಎಲ್ಲ ರೀತಿಯ ಮಾತುಕತೆಗಳು ಮುರಿದುಬಿದ್ದ ನಂತರ ಮಾಜಿ ಯೋಧರು ಪ್ರತಿಭಟನೆಯ ದಾರಿ ಹಿಡಿದಿದ್ದಾರೆ. ಸರ್ಕಾರ ಸಹ ಜಾರಿಗೆ ಈವರೆಗೆ ಸಮಯ ನಿಗದಿ ಮಾಡಿಲ್ಲ.<br /> ಒಆರ್ಒಪಿ ಜಾರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದರೂ ಈವರೆಗೆ ಜಾರಿ<br /> ಯಾಗಿಲ್ಲ ಎಂದು ಭಾರತೀಯ ಮಾಜಿ ಯೋಧರ ಚಳವಳಿಯ ಮಾಧ್ಯಮ ಸಲಹೆಗಾರ ಅನಿಲ್ ಕೌಲ್ ಹೇಳಿದ್ದಾರೆ.<br /> <br /> ‘ನಾವು ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ. ಆದರೆ ಬಹುಕಾಲದಿಂದ ಜಾರಿಯಾಗದೇ ಉಳಿದಿ ರುವ ಪಿಂಚಣಿಗಾಗಿ ಪ್ರತಿಭಟನೆ ನಡೆಸುತ್ತಿ ದ್ದೇವೆ ಎಂದು ತಿಳಿಸಿದ ಪ್ರತಿಭಟನಾ ಕಾರರು, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿ ಮಾಡಲು ಕಾಲಾವಕಾಶ ಕೋರಿರುವುದಾಗಿ ಹೇಳಿದರು.<br /> <br /> ದೆಹಲಿಯಲ್ಲಿ ನಡೆಯುತ್ತಿರುವ ಮಾಜಿ ಯೋಧರ ಪ್ರತಿಭಟನೆಗೆ ದೆಹಲಿ ವಿಶ್ವ ವಿದ್ಯಾಲಯ ಮತ್ತು ಜವಾಹರ<br /> ಲಾಲ್ ನೆಹರು ವಿವಿಯ ವಿದ್ಯಾರ್ಥಿಗಳೂ ಕೈ ಜೋಡಿಸಿದರು. ಜಂತರ್ ಮಂತರ್ ನಲ್ಲಿ ರೈತರೂ ಭಾಗವಹಿಸಿದ್ದರು.<br /> <br /> ಒಆರ್ಒಪಿ ಜಾರಿ ಸಂಬಂಧ ಸರ್ಕಾರ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಈಗಾಗಲೇ ಹೇಳಿದ್ದಾರೆ. ಈ ನಡುವೆ ಆರ್ಎಸ್ಎಸ್ ಜತೆ ಆಪ್ತವಾಗಿ ರುವ ಕೆಲವು ಮಾಜಿ ಯೋಧರು, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದು, ಜಾರಿಗೆ ಒತ್ತಾಯಿಸಿದ್ದಾರೆ. 25 ಲಕ್ಷ ಮಾಜಿ ಯೋಧರ ನಂಬಿಕೆಯನ್ನು ಹುಸಿಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>