ಇದಕ್ಕೂ ಮುನ್ನ ನವದೆಹಲಿಯಲ್ಲಿ ಮಾತನಾಡಿದ್ದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನದ ನಾಶಕ್ಕೆ ಷಡ್ಯಂತ್ರ ನಡೆಯುತ್ತಿದೆ. ಆ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಕೊಡಲಿಪೆಟ್ಟು ನೀಡುತ್ತಿದ್ದು, ಇದಕ್ಕೆ ಕರ್ನಾಟಕದ ಹಾಲಿ ರಾಜಕೀಯವೇ ಸೂಕ್ತ ಉದಹರಣೆಯಾಗಿದೆ’ ಎಂದು ಕಿಡಿಕಾರಿದ್ದರು.