ಸತ್ಪಾಲ್, ಕುಸ್ತಿಪಟು ಸುಶೀಲ್ಕುಮಾರ್, ಅಶೋಕ್ ಸೇಟ್, ಎನ್. ಗೋಪಾಲಸ್ವಾಮಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದವರಲ್ಲಿ ಚಲನಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಗೀತ ರಚನೆಗಾರ ಪ್ರಸೂನ್ ಜೋಶಿ, ವೈದ್ಯರಾದ ಡಾ. ರಣದೀಪ್ ಗುಲೇರಿಯಾ, ವ್ಯಂಗ್ಯಚಿತ್ರಕಾರ ಪ್ರಾಣ್ ಕುಮಾರ್ ಶರ್ಮ (ಮರಣೋತ್ತರ), ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು, ಹಾಕಿ ಕ್ಯಾಪ್ಟನ್ ಸರ್ದಾರ್ ಸಿಂಗ್ ಮತ್ತು ಪರ್ವತಾರೋಹಿ ಅರುಣಿಮಾ ಸಿನ್ಹಾ ಸೇರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಗೃಹ ಸಚಿವ ರಾಜನಾಥ ಸಿಂಗ್ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಸಂಪುಟದ ಹಿರಿಯ ಸಹೋದ್ಯೋಗಿಗಳು ಸಮಾರಂಭದಲ್ಲಿ ಹಾಜರಿದ್ದರು.
ಕಳೆದ ವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ‘ಭಾರತರತ್ನ’ ಗೌರವವನ್ನು ಅವರ ಸ್ವಗೃಹದಲ್ಲಿ ರಾಷ್ಟ್ರಪತಿಗಳು ಪ್ರದಾನ ಮಾಡಿದ್ದರು.