<p><strong>ನವದೆಹಲಿ, (ಪಿಟಿಐ): </strong> ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ಮಾಹಿತಿ ಹಕ್ಕು ಕಾಯಿದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸರ್ಕಾರ ಆಸಕ್ತಿ ಹೊಂದಿದೆ, ಆದರೆ ಕೆಲವು ಸಂಗತಿಗಳಲ್ಲಿ ಪಾರದರ್ಶಕತೆ ಮತ್ತು ವಿಮರ್ಶೆ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಕೇಂದ್ರ ಮಾಹಿತಿ ಹಕ್ಕು ಆಯುಕ್ತರ ಎರಡು ದಿನಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ~ಮಾಹಿತಿ ಹಕ್ಕು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು, ಜೊತೆಗೆ ಪಾರದರ್ಶಕತೆ ಇರಬೇಕು. ಅಲ್ಲದೇ ಉತ್ತರದಾಯಿತ್ವವನ್ನೂ ಹೊಂದಿರಬೇಕು~ ಎಂದು ಅವರು ಹೇಳಿದರು.</p>.<p>~ಪಾರದರ್ಶಕವಾದ ಈ ಕಾನೂನು ಸರ್ಕಾರದ ಕಾರ್ಯವಿಧಾನಕ್ಕೆ ಅಡ್ಡಿಯಾಗಬಾರದು, ಜೊತೆಗೆ ಪ್ರಾಮಾಣಿಕ ಅಧಿಕಾರಿಗಳ ಉತ್ಸಾಹವನ್ನು ಕುಂದಿಸುವಂತಾಗಬಾರದು~ ಎಂದು ಅವರು ತಮ್ಮ ಆತಂಕ ವ್ಯಕ್ತಪಡಿಸಿದರು.</p>.<p>~ಮಾಹಿತಿ ಬಹಿರಂಗ ಮತ್ತು ನಿಗದಿತ ಸಂಪನ್ಮೂಲ ಮತ್ತು ಸಮಯದ ಅಭಾವ ಎದುರಿಸುತ್ತಿರುವ ಸರ್ಕಾರಿ ಉದ್ಯೋಗಿಗಳ ನಡುವೆ ಸಮತೋಲನ ಸಾಧಿಸುವುದು ತುರ್ತು ಅಗತ್ಯವಾಗಿದೆ~ ಎಂದು ಅವರು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ): </strong> ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ಮಾಹಿತಿ ಹಕ್ಕು ಕಾಯಿದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸರ್ಕಾರ ಆಸಕ್ತಿ ಹೊಂದಿದೆ, ಆದರೆ ಕೆಲವು ಸಂಗತಿಗಳಲ್ಲಿ ಪಾರದರ್ಶಕತೆ ಮತ್ತು ವಿಮರ್ಶೆ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಕೇಂದ್ರ ಮಾಹಿತಿ ಹಕ್ಕು ಆಯುಕ್ತರ ಎರಡು ದಿನಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ~ಮಾಹಿತಿ ಹಕ್ಕು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು, ಜೊತೆಗೆ ಪಾರದರ್ಶಕತೆ ಇರಬೇಕು. ಅಲ್ಲದೇ ಉತ್ತರದಾಯಿತ್ವವನ್ನೂ ಹೊಂದಿರಬೇಕು~ ಎಂದು ಅವರು ಹೇಳಿದರು.</p>.<p>~ಪಾರದರ್ಶಕವಾದ ಈ ಕಾನೂನು ಸರ್ಕಾರದ ಕಾರ್ಯವಿಧಾನಕ್ಕೆ ಅಡ್ಡಿಯಾಗಬಾರದು, ಜೊತೆಗೆ ಪ್ರಾಮಾಣಿಕ ಅಧಿಕಾರಿಗಳ ಉತ್ಸಾಹವನ್ನು ಕುಂದಿಸುವಂತಾಗಬಾರದು~ ಎಂದು ಅವರು ತಮ್ಮ ಆತಂಕ ವ್ಯಕ್ತಪಡಿಸಿದರು.</p>.<p>~ಮಾಹಿತಿ ಬಹಿರಂಗ ಮತ್ತು ನಿಗದಿತ ಸಂಪನ್ಮೂಲ ಮತ್ತು ಸಮಯದ ಅಭಾವ ಎದುರಿಸುತ್ತಿರುವ ಸರ್ಕಾರಿ ಉದ್ಯೋಗಿಗಳ ನಡುವೆ ಸಮತೋಲನ ಸಾಧಿಸುವುದು ತುರ್ತು ಅಗತ್ಯವಾಗಿದೆ~ ಎಂದು ಅವರು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>