<p>ನವದೆಹಲಿ: ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಅಧ್ಯಯನ ಮಾಡಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಜಯ್ ಜೋಷಿ ಅವರಿಗೆ ಸೂಚನೆ ನೀಡಿದ್ದಾರೆ.<br /> <br /> ಅಧಿಕಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ನಡುವೆ ನಡೆದಿರುವ ಹಣಾಹಣಿ ಪಕ್ಷದ ಹೈಕಮಾಂಡ್ ಅನ್ನು ಇಕ್ಕಟ್ಟಿಗೆ ಸಿಕ್ಕಿಸಿರುವ ಹಿನ್ನೆಲೆಯಲ್ಲಿ ಸಂಜಯ್ ಜೋಷಿ ಅವರಿಗೆ ವರದಿ ಸಲ್ಲಿಸುವಂತೆ ಹೇಳಲಾಗಿದೆ.<br /> <br /> ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಪಕ್ಷದ ವಿವಿಧ ಮುಖಂಡರ ಜೊತೆ ಚರ್ಚಿಸಲು ಜೋಷಿ ಸದ್ಯದಲ್ಲೇ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ದೆಹಲಿಗೆ ಬೇರೆ ಬೇರೆ ತಂಡಗಳಲ್ಲಿ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರು ಇವರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.<br /> <br /> ಮುಖ್ಯಮಂತ್ರಿ ಬದಲಾವಣೆ ಅಗತ್ಯವೇ ? ಪಕ್ಷಕ್ಕೆ ಯಡಿಯೂರಪ್ಪ ಅನಿವಾರ್ಯವೇ ಎಂಬ ಬಗ್ಗೆ ಜೋಷಿ ವರದಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಅಧ್ಯಯನ ಮಾಡಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಜಯ್ ಜೋಷಿ ಅವರಿಗೆ ಸೂಚನೆ ನೀಡಿದ್ದಾರೆ.<br /> <br /> ಅಧಿಕಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ನಡುವೆ ನಡೆದಿರುವ ಹಣಾಹಣಿ ಪಕ್ಷದ ಹೈಕಮಾಂಡ್ ಅನ್ನು ಇಕ್ಕಟ್ಟಿಗೆ ಸಿಕ್ಕಿಸಿರುವ ಹಿನ್ನೆಲೆಯಲ್ಲಿ ಸಂಜಯ್ ಜೋಷಿ ಅವರಿಗೆ ವರದಿ ಸಲ್ಲಿಸುವಂತೆ ಹೇಳಲಾಗಿದೆ.<br /> <br /> ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಪಕ್ಷದ ವಿವಿಧ ಮುಖಂಡರ ಜೊತೆ ಚರ್ಚಿಸಲು ಜೋಷಿ ಸದ್ಯದಲ್ಲೇ ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ದೆಹಲಿಗೆ ಬೇರೆ ಬೇರೆ ತಂಡಗಳಲ್ಲಿ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರು ಇವರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.<br /> <br /> ಮುಖ್ಯಮಂತ್ರಿ ಬದಲಾವಣೆ ಅಗತ್ಯವೇ ? ಪಕ್ಷಕ್ಕೆ ಯಡಿಯೂರಪ್ಪ ಅನಿವಾರ್ಯವೇ ಎಂಬ ಬಗ್ಗೆ ಜೋಷಿ ವರದಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>