ಲಖನೌ(ಐಎಎನ್ಎಸ್): ಕೋಮುಗಲಭೆಯಿಂದ ನಲುಗಿದ್ದ ಮಜಾಫರ್ನಗರ ಮತ್ತು ಸುತ್ತಮುತ್ತಲ ಪ್ರದೇಶ ಶಾಂತವಾಗಿದ್ದು, ಶನಿವಾರ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆ ವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಬಿಗುವಿನ ವಾತಾವರಣದಿಂದ ಕೂಡಿರುವ ಗ್ರಾಮೀಣ ಭಾಗಗದ ಕೆಲವೆಡೆ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಶುಕ್ರವಾರ ಕೂಡ 12 ತಾಸುಗಳ ಕಾಲ ಕರ್ಫ್ಯೂ ಸಡಿಲಿಸಲಾಗಿತ್ತು.
40 ಸಾವಿರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರಿಗೆ ಮುಜಾಫರ್ನಗರ ಮತ್ತು ಶಾಮ್ಲಿ ಜಿಲ್ಲೆಗಳಲ್ಲಿ ತೆರೆದಿರುವ 30 ಪರಿಹಾರ ಶಿಬಿರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.