<p><strong>ಜೈಪುರ:</strong> ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಯುವ ನಾಯಕ ಸಚಿನ್ ಪೈಲಟ್ ತೀವ್ರ ಪೈಪೋಟಿಯ ಮಧ್ಯೆಯೂ 67 ವರ್ಷದ ಅಶೋಕ್ ಗೆಹ್ಲೋಟ್ ಮೂರನೇ ಬಾರಿ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಗಾಂಧಿ–ನೆಹರೂ ಕುಟುಂಬದ ನಿಷ್ಠಾವಂತ ಎಂದು ಗುರುತಿಸಿಕೊಂಡಿರುವ ಗೆಹ್ಲೋಟ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಹಿಂದೆಯೂ ಸುಲಭದ ತುತ್ತಾಗಿರಲಿಲ್ಲ. ಪ್ರತಿ ಬಾರಿಯೂ ಒಂದಿಲ್ಲ, ಒಂದು ಸವಾಲನ್ನು ಎದುರಿಸಿದ್ದಾರೆ.</p>.<p>ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರ ರಚಿಸಲು ಮುಂದಾದಾಗಲೇ ಅಶೋಕ್ ಗೆಹ್ಲೋಟ್ ಜತೆ ಸಚಿನ್ ಪೈಲಟ್ ಹೆಸರೂ ಕೇಳಿ ಬಂದಿತ್ತು.</p>.<p>ಕಾಂಗ್ರೆಸ್ ಸ್ವತಂತ್ರವಾಗಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಗೊತ್ತಾದ ತಕ್ಷಣ ಗೆಹ್ಲೋಟ್ ಅವರು ಪಕ್ಷೇತರರು, ಬಂಡಾಯ ಅಭ್ಯರ್ಥಿಗಳ ಸಂಪರ್ಕದಲ್ಲಿದ್ದರು.</p>.<p>ಆದರೆ, ಮಾಲಿ ಜನಾಂಗಕ್ಕೆ ಸೆರಿದ ಗೆಹ್ಲೋಟ್ ಮುಖ್ಯಮಂತ್ರಿಯಾಗಲು ರಾಜಸ್ಥಾನದ ಪ್ರಬಲ ಜಾಟ್ ಸಮುದಾಯದ ನಾಯಕರು ಬಹಿರಂಗವಾಗಿ ಅಡ್ಡಗಾಲು ಹಾಕಿದರು. ಜತೆಗೆ ಈ ಬಾರಿ ಸಚಿನ್ ಪೈಲಟ್ ಅವರಿಗೆ ಅವಕಾಶ ನೀಡುವಂತೆ ಗುಜ್ಜರ್ ಸಮುದಾಯದವರು ಕೂಡ ರಸ್ತೆಗಿಳಿದಿದ್ದರು.</p>.<p>1998ರಲ್ಲಿ ಮೊದಲ ಬಾರಿಗೆ ಗೆಹ್ಲೋಟ್ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ನಂತರ 2008ರಲ್ಲಿ ಎರಡನೇ ಬಾರಿಗೆ ಆ ಮತ್ತೊಮ್ಮೆ ಅವರನ್ನು ಅದೃಷ್ಟ ಹುಡುಕಿಕೊಂಡು ಬಂದಿತ್ತು. ಈಗ 2018ರಲ್ಲಿ ಮೂರನೇ ಬಾರಿ ಮುಖ್ಯಮಂತ್ರಿ ಹುದ್ದೆ ಏರುತ್ತಿದ್ದಾರೆ.</p>.<p>ವಿಜ್ಞಾನ ಮತ್ತು ಕಾನೂನು ಪದವೀಧರರಾದ ಗೆಹ್ಲೋಟ್ ಆರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p class="Subhead"><strong>ಜಾದೂಗಾರ</strong></p>.<p class="Subhead">ಗೆಹ್ಲೋಟ್ ಜಾದೂಗಾರರರ ಕುಟುಂಬದಿಂದ ಬಂದವರು. ಬಾಲ್ಯದಲ್ಲಿ ತಂದೆ ಲಚಮನ್ ಸಿಂಗ್ ಜತೆ ಊರೂರು ತಿರುಗಿ ಜಾದೂ ಪ್ರದರ್ಶನ ನೀಡುತ್ತಿದ್ದರು. ಇದರಿಂದಾಗಿಯೇ ರಾಜಕೀಯ ವಿರೋಧಿಗಳು ಅವರನ್ನು‘ಗಿಲ್ಲಿ ಬಿಲ್ಲಿ’ ಎಂದು ಛೇಡಿಸುತ್ತಾರೆ.</p>.<p>ಪೂರ್ವ ಬಂಗಾಳ ನಿರಾಶ್ರಿತರ ನೆರವಿಗೆ ನಿಂತಿದ್ದ ಗೆಹ್ಲೋಟ್ ಕೆಲಸ ಮೆಚ್ಚಿಕೊಂಡಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗೆಹ್ಲೋಟ್ ಅವರನ್ನು ರಾಜಕೀಯಕ್ಕೆ ಕರೆತಂದಿದ್ದರು. 1974ರಲ್ಲಿ ಎನ್ಎಸ್ಯುಐಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು.</p>.<p>ಯುವ ಕಾಂಗ್ರೆಸ್ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟ ಗೆಹ್ಲೋಟ್ ಸರಳ ಜೀವಿ. ಸೀದಾ, ಸಾದಾ ವ್ಯಕ್ತಿತ್ವದಿಂದಾಗಿ ಅವರನ್ನು ‘ರಾಜಸ್ಥಾನದ ಗಾಂಧಿ’ ಎಂದು ಕರೆಯಲಾಗುತ್ತದೆ.</p>.<p>ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ಜತೆ ಮುಕ್ತವಾಗಿ ಬೆರೆಯುವ ಗುಣ ಅವರಿಗೆ ವರದಾನವಾಗಿದೆ. ನಾಲ್ಕು ಬಾರಿ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ, ಹಲವು ಬಾರಿ ಲೋಕಸಭೆ ಮತ್ತು ವಿಧಾನಸಭೆ ಸದಸ್ಯರಾಗಿ ರಾಜಕಾರಣದಲ್ಲಿ ಅಪಾರ ಅನುಭವ ಗಳಿಸಿದ್ದಾರೆ.</p>.<p>ಸದ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಗೆಹ್ಲೋಟ್ ಪಕ್ಷದ ಸಂಕಷ್ಟ ಸಂದರ್ಭದಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.</p>.<p>ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿಯಾಗಿದ್ದ ಅವರು ರೂಪಿಸಿದ್ದ ತಂತ್ರಗಾರಿಕೆಯಿಂದಾಗಿ ಬಿಜೆಪಿ ಗೆಲ್ಲಲು ಏದುಸಿರು ಬಿಡುವಂತಾಗಿತ್ತು.ಕರ್ನಾಟಕದಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಗುಲಾಂ ನಬಿ ಆಜಾದ್ ಜತೆ ಗೆಹ್ಲೋಟ್ ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಯುವ ನಾಯಕ ಸಚಿನ್ ಪೈಲಟ್ ತೀವ್ರ ಪೈಪೋಟಿಯ ಮಧ್ಯೆಯೂ 67 ವರ್ಷದ ಅಶೋಕ್ ಗೆಹ್ಲೋಟ್ ಮೂರನೇ ಬಾರಿ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಗಾಂಧಿ–ನೆಹರೂ ಕುಟುಂಬದ ನಿಷ್ಠಾವಂತ ಎಂದು ಗುರುತಿಸಿಕೊಂಡಿರುವ ಗೆಹ್ಲೋಟ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಹಿಂದೆಯೂ ಸುಲಭದ ತುತ್ತಾಗಿರಲಿಲ್ಲ. ಪ್ರತಿ ಬಾರಿಯೂ ಒಂದಿಲ್ಲ, ಒಂದು ಸವಾಲನ್ನು ಎದುರಿಸಿದ್ದಾರೆ.</p>.<p>ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರ ರಚಿಸಲು ಮುಂದಾದಾಗಲೇ ಅಶೋಕ್ ಗೆಹ್ಲೋಟ್ ಜತೆ ಸಚಿನ್ ಪೈಲಟ್ ಹೆಸರೂ ಕೇಳಿ ಬಂದಿತ್ತು.</p>.<p>ಕಾಂಗ್ರೆಸ್ ಸ್ವತಂತ್ರವಾಗಿ ಸರ್ಕಾರ ರಚಿಸುವುದು ಅಸಾಧ್ಯ ಎಂದು ಗೊತ್ತಾದ ತಕ್ಷಣ ಗೆಹ್ಲೋಟ್ ಅವರು ಪಕ್ಷೇತರರು, ಬಂಡಾಯ ಅಭ್ಯರ್ಥಿಗಳ ಸಂಪರ್ಕದಲ್ಲಿದ್ದರು.</p>.<p>ಆದರೆ, ಮಾಲಿ ಜನಾಂಗಕ್ಕೆ ಸೆರಿದ ಗೆಹ್ಲೋಟ್ ಮುಖ್ಯಮಂತ್ರಿಯಾಗಲು ರಾಜಸ್ಥಾನದ ಪ್ರಬಲ ಜಾಟ್ ಸಮುದಾಯದ ನಾಯಕರು ಬಹಿರಂಗವಾಗಿ ಅಡ್ಡಗಾಲು ಹಾಕಿದರು. ಜತೆಗೆ ಈ ಬಾರಿ ಸಚಿನ್ ಪೈಲಟ್ ಅವರಿಗೆ ಅವಕಾಶ ನೀಡುವಂತೆ ಗುಜ್ಜರ್ ಸಮುದಾಯದವರು ಕೂಡ ರಸ್ತೆಗಿಳಿದಿದ್ದರು.</p>.<p>1998ರಲ್ಲಿ ಮೊದಲ ಬಾರಿಗೆ ಗೆಹ್ಲೋಟ್ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ನಂತರ 2008ರಲ್ಲಿ ಎರಡನೇ ಬಾರಿಗೆ ಆ ಮತ್ತೊಮ್ಮೆ ಅವರನ್ನು ಅದೃಷ್ಟ ಹುಡುಕಿಕೊಂಡು ಬಂದಿತ್ತು. ಈಗ 2018ರಲ್ಲಿ ಮೂರನೇ ಬಾರಿ ಮುಖ್ಯಮಂತ್ರಿ ಹುದ್ದೆ ಏರುತ್ತಿದ್ದಾರೆ.</p>.<p>ವಿಜ್ಞಾನ ಮತ್ತು ಕಾನೂನು ಪದವೀಧರರಾದ ಗೆಹ್ಲೋಟ್ ಆರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p class="Subhead"><strong>ಜಾದೂಗಾರ</strong></p>.<p class="Subhead">ಗೆಹ್ಲೋಟ್ ಜಾದೂಗಾರರರ ಕುಟುಂಬದಿಂದ ಬಂದವರು. ಬಾಲ್ಯದಲ್ಲಿ ತಂದೆ ಲಚಮನ್ ಸಿಂಗ್ ಜತೆ ಊರೂರು ತಿರುಗಿ ಜಾದೂ ಪ್ರದರ್ಶನ ನೀಡುತ್ತಿದ್ದರು. ಇದರಿಂದಾಗಿಯೇ ರಾಜಕೀಯ ವಿರೋಧಿಗಳು ಅವರನ್ನು‘ಗಿಲ್ಲಿ ಬಿಲ್ಲಿ’ ಎಂದು ಛೇಡಿಸುತ್ತಾರೆ.</p>.<p>ಪೂರ್ವ ಬಂಗಾಳ ನಿರಾಶ್ರಿತರ ನೆರವಿಗೆ ನಿಂತಿದ್ದ ಗೆಹ್ಲೋಟ್ ಕೆಲಸ ಮೆಚ್ಚಿಕೊಂಡಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗೆಹ್ಲೋಟ್ ಅವರನ್ನು ರಾಜಕೀಯಕ್ಕೆ ಕರೆತಂದಿದ್ದರು. 1974ರಲ್ಲಿ ಎನ್ಎಸ್ಯುಐಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು.</p>.<p>ಯುವ ಕಾಂಗ್ರೆಸ್ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟ ಗೆಹ್ಲೋಟ್ ಸರಳ ಜೀವಿ. ಸೀದಾ, ಸಾದಾ ವ್ಯಕ್ತಿತ್ವದಿಂದಾಗಿ ಅವರನ್ನು ‘ರಾಜಸ್ಥಾನದ ಗಾಂಧಿ’ ಎಂದು ಕರೆಯಲಾಗುತ್ತದೆ.</p>.<p>ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ಜತೆ ಮುಕ್ತವಾಗಿ ಬೆರೆಯುವ ಗುಣ ಅವರಿಗೆ ವರದಾನವಾಗಿದೆ. ನಾಲ್ಕು ಬಾರಿ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ, ಹಲವು ಬಾರಿ ಲೋಕಸಭೆ ಮತ್ತು ವಿಧಾನಸಭೆ ಸದಸ್ಯರಾಗಿ ರಾಜಕಾರಣದಲ್ಲಿ ಅಪಾರ ಅನುಭವ ಗಳಿಸಿದ್ದಾರೆ.</p>.<p>ಸದ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಗೆಹ್ಲೋಟ್ ಪಕ್ಷದ ಸಂಕಷ್ಟ ಸಂದರ್ಭದಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.</p>.<p>ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿಯಾಗಿದ್ದ ಅವರು ರೂಪಿಸಿದ್ದ ತಂತ್ರಗಾರಿಕೆಯಿಂದಾಗಿ ಬಿಜೆಪಿ ಗೆಲ್ಲಲು ಏದುಸಿರು ಬಿಡುವಂತಾಗಿತ್ತು.ಕರ್ನಾಟಕದಲ್ಲಿ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಗುಲಾಂ ನಬಿ ಆಜಾದ್ ಜತೆ ಗೆಹ್ಲೋಟ್ ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>