ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬುಧವಾರ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
‘ಕಾಶ್ಮೀರ ಕಣಿವೆಯಲ್ಲಿ ಶಾಂತಿ ಪುನರ್ ಸ್ಥಾಪಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ರಾಜನಾಥ ಸಿಂಗ್ ಅವರಿಗೆ ಮೆಹಬೂಬಾ ವಿವ
ರಣೆ ನೀಡಿದರು’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
‘ಪಾಕಿಸ್ತಾನದ ಗಡಿಯಲ್ಲಿ ಉಗ್ರರು ಒಳನುಸುಳಲು ಮಾಡುತ್ತಿರುವ ಪ್ರಯತ್ನ, ಪ್ರತಿನಿತ್ಯ ನಡೆಯುತ್ತಿರುವ ಗುಂಡಿನ ದಾಳಿ ಬಗ್ಗೆಯೂ ಚರ್ಚೆ ನಡೆಯಿತು’ ಎಂದು ಅವರು ವಿವರಿಸಿದ್ದಾರೆ.