<p><strong>ನವದೆಹಲಿ (ಐಎಎನ್ಎಸ್): </strong>ಲೋಕಸಭಾ ಚುನಾವಣೆ ದಿನಗಣನೆಯ ಹಿನ್ನೆಲೆಯಲ್ಲಿ ರಾಜಕೀಯ ಅಖಾಡವು ದಿನೇ ದಿನೇ ರಂಗೇರುತ್ತಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಮಂಗಳವಾರ ಯುಪಿಎ ಮತ್ತು ಎನ್ಡಿಎ ಮೈತ್ರಿಕೂಟಕ್ಕೆ ಸೇರದ ಒಟ್ಟು 11 ಪಕ್ಷಗಳ ಮುಖಂಡರು ರಾಜಧಾನಿಯಲ್ಲಿ ಸಭೆ ಸೇರಿದ್ದರು. 'ತೃತೀಯ ರಂಗ'ವೆಂಬ ಏಕತೆಯ ಮಂತ್ರ ಜಪಿಸಿದ ಈ ನಾಯಕರೆಲ್ಲರೂ ಕೇಂದ್ರದಲ್ಲಿ ಪ್ರಮುಖವಾದ ಎರಡು ಮೈತ್ರಿಕೂಟಗಳಿಂದ ಅಧಿಕಾರ ಕಸಿಯುವ ಶಪಥ ಮಾಡಿದರು.<br /> <br /> ಸಮಾಜವಾದಿ, ಸಂಯುಕ್ತ ಜನತಾದಳ (ಜೆಡಿಯು), ಜಾತ್ಯಾತೀತ ಜನತಾದಳ (ಜೆಡಿಎಸ್) ಮತ್ತು ನಾಲ್ಕು ಎಡಪಕ್ಷಗಳು ಸೇರಿದಂತೆ ಒಟ್ಟು 11 ಪಕ್ಷಗಳ ಮುಖಂಡರು ಸೇರಿ ನಡೆಸಿದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕೆಂಬ ನಿರ್ಧಾರ ತೆಗೆದುಕೊಂಡರು.</p>.<p>ಸಭೆಯಲ್ಲಿ ಅಸೋಮ್ ಗಣ ಪರಿಷದ್ ಮತ್ತು ಬಿಜು ಜನತಾದಳದ ಮುಖಂಡರು ಭಾಗವಹಿಸಿರಲಿಲ್ಲ. ಆದರೆ ಆ ಪಕ್ಷಗಳು ಮುಖಂಡರು ತಮ್ಮ ಗೈರು ಕುರಿತಂತೆ ತಮಗೆ ಮೊದಲೇ ಮಾಹಿತಿ ನೀಡಿದ್ದರು ಎಂದು ಸಿಪಿಎಂ ಮುಖಂಡ ಪ್ರಕಾಶ್ ಕಾರಟ್ ಸುದ್ಧಿಗಾರರಿಗೆ ತಿಳಿಸಿದರು.<br /> <br /> ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಕಾರಟ್ ಅವರು ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ನಾವೆಲ್ಲರೂ ಪರಸ್ಪರ ಸಹಕಾರದಿಂದ ಜತೆಗೂಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ 11 ಪಕ್ಷಗಳ ಮುಖಂಡರ ಸಭೆ ನಡೆಸಲು ನಿರ್ಧರಿಸಿದ್ದೆವು' ಎಂದು ತಿಳಿಸಿದರು.<br /> <br /> ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ `ದುರಾಡಳಿತ'ದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಬೆಲೆ ಏರಿಕೆ, ರೈತರ ಸಂಕಷ್ಟ ಮತ್ತು ಅಸಮಾನತೆ ಹೆಚ್ಚಿದೆ. ನಮಗೆ ಕೇಂದ್ರದಲ್ಲಿ ಯುಪಿಎ ಮತ್ತು ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವುದು ಬೇಡ. ಅವುಗಳನ್ನು ಸೋಲಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕಾರಟ್ ಹೇಳಿದರು.<br /> <br /> ಬಿಜೆಪಿಯ ನೀತಿಗಳು ಕೂಡ ಕಾಂಗ್ರೆಸ್ಗಿಂತ ಭಿನ್ನವಾಗಿಲ್ಲ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೂಡ ಭ್ರಷ್ಟಾಚಾರ ಮಿತಿಮೀರಿದೆ. ಕಾಂಗ್ರೆಸ್ನಂತೆಯೇ ಇದು ಕೂಡ ಅತ್ಯಂತ ಕೆಟ್ಟ ಮೈತ್ರಿಕೂಟವಾಗಿದೆ ಎಂದು ಎನ್ಡಿಎ ವಿರುದ್ಧ ಪ್ರಕಾಶ್ ಗುಡುಗಿದರು.</p>.<p>ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಸಿಪಿಐ ಮುಖಂಡ ಎ.ಬಿ.ಬರ್ಧನ್, ಜೆಡಿಯು ಮುಖಂಡ ಶರದ್ ಯಾದವ್, ಜೆಡಿಎಸ್ ಮುಖಂಡ ಎಚ್.ಡಿ.ದೇವೆಗೌಡ ಸೇರಿದಂತೆ ಎಡಪಕ್ಷಗಳ ಹಲವು ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಲೋಕಸಭಾ ಚುನಾವಣೆ ದಿನಗಣನೆಯ ಹಿನ್ನೆಲೆಯಲ್ಲಿ ರಾಜಕೀಯ ಅಖಾಡವು ದಿನೇ ದಿನೇ ರಂಗೇರುತ್ತಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಮಂಗಳವಾರ ಯುಪಿಎ ಮತ್ತು ಎನ್ಡಿಎ ಮೈತ್ರಿಕೂಟಕ್ಕೆ ಸೇರದ ಒಟ್ಟು 11 ಪಕ್ಷಗಳ ಮುಖಂಡರು ರಾಜಧಾನಿಯಲ್ಲಿ ಸಭೆ ಸೇರಿದ್ದರು. 'ತೃತೀಯ ರಂಗ'ವೆಂಬ ಏಕತೆಯ ಮಂತ್ರ ಜಪಿಸಿದ ಈ ನಾಯಕರೆಲ್ಲರೂ ಕೇಂದ್ರದಲ್ಲಿ ಪ್ರಮುಖವಾದ ಎರಡು ಮೈತ್ರಿಕೂಟಗಳಿಂದ ಅಧಿಕಾರ ಕಸಿಯುವ ಶಪಥ ಮಾಡಿದರು.<br /> <br /> ಸಮಾಜವಾದಿ, ಸಂಯುಕ್ತ ಜನತಾದಳ (ಜೆಡಿಯು), ಜಾತ್ಯಾತೀತ ಜನತಾದಳ (ಜೆಡಿಎಸ್) ಮತ್ತು ನಾಲ್ಕು ಎಡಪಕ್ಷಗಳು ಸೇರಿದಂತೆ ಒಟ್ಟು 11 ಪಕ್ಷಗಳ ಮುಖಂಡರು ಸೇರಿ ನಡೆಸಿದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕೆಂಬ ನಿರ್ಧಾರ ತೆಗೆದುಕೊಂಡರು.</p>.<p>ಸಭೆಯಲ್ಲಿ ಅಸೋಮ್ ಗಣ ಪರಿಷದ್ ಮತ್ತು ಬಿಜು ಜನತಾದಳದ ಮುಖಂಡರು ಭಾಗವಹಿಸಿರಲಿಲ್ಲ. ಆದರೆ ಆ ಪಕ್ಷಗಳು ಮುಖಂಡರು ತಮ್ಮ ಗೈರು ಕುರಿತಂತೆ ತಮಗೆ ಮೊದಲೇ ಮಾಹಿತಿ ನೀಡಿದ್ದರು ಎಂದು ಸಿಪಿಎಂ ಮುಖಂಡ ಪ್ರಕಾಶ್ ಕಾರಟ್ ಸುದ್ಧಿಗಾರರಿಗೆ ತಿಳಿಸಿದರು.<br /> <br /> ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಕಾರಟ್ ಅವರು ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ನಾವೆಲ್ಲರೂ ಪರಸ್ಪರ ಸಹಕಾರದಿಂದ ಜತೆಗೂಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ 11 ಪಕ್ಷಗಳ ಮುಖಂಡರ ಸಭೆ ನಡೆಸಲು ನಿರ್ಧರಿಸಿದ್ದೆವು' ಎಂದು ತಿಳಿಸಿದರು.<br /> <br /> ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ `ದುರಾಡಳಿತ'ದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಬೆಲೆ ಏರಿಕೆ, ರೈತರ ಸಂಕಷ್ಟ ಮತ್ತು ಅಸಮಾನತೆ ಹೆಚ್ಚಿದೆ. ನಮಗೆ ಕೇಂದ್ರದಲ್ಲಿ ಯುಪಿಎ ಮತ್ತು ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವುದು ಬೇಡ. ಅವುಗಳನ್ನು ಸೋಲಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕಾರಟ್ ಹೇಳಿದರು.<br /> <br /> ಬಿಜೆಪಿಯ ನೀತಿಗಳು ಕೂಡ ಕಾಂಗ್ರೆಸ್ಗಿಂತ ಭಿನ್ನವಾಗಿಲ್ಲ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೂಡ ಭ್ರಷ್ಟಾಚಾರ ಮಿತಿಮೀರಿದೆ. ಕಾಂಗ್ರೆಸ್ನಂತೆಯೇ ಇದು ಕೂಡ ಅತ್ಯಂತ ಕೆಟ್ಟ ಮೈತ್ರಿಕೂಟವಾಗಿದೆ ಎಂದು ಎನ್ಡಿಎ ವಿರುದ್ಧ ಪ್ರಕಾಶ್ ಗುಡುಗಿದರು.</p>.<p>ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಸಿಪಿಐ ಮುಖಂಡ ಎ.ಬಿ.ಬರ್ಧನ್, ಜೆಡಿಯು ಮುಖಂಡ ಶರದ್ ಯಾದವ್, ಜೆಡಿಎಸ್ ಮುಖಂಡ ಎಚ್.ಡಿ.ದೇವೆಗೌಡ ಸೇರಿದಂತೆ ಎಡಪಕ್ಷಗಳ ಹಲವು ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>