<p><strong>ಚೆನ್ನೈ (ಪಿಟಿಐ</strong>): ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಮಂದಿ ರಾಜೀವ್ ಗಾಂಧಿ ಹಂತಕರು ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ತೀರ್ಮಾನವನ್ನು ಹಿರಿಯ ನ್ಯಾಯವಾದಿ ರಾಂ ಜೇಠ್ಮಲಾನಿ ಸಮರ್ಥಿಸಿಕೊಂಡಿದ್ದಾರೆ.<br /> <br /> ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಕೋರಿ ಆರೋಪಿಗಳಾದ ಸಾಂತನ್, ಮುರುಗನ್ ಮತ್ತು ಪೆರಾರಿವಲನ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿದ್ದ ಜೇಠ್ಮಲಾನಿ, ‘ಎಲ್ಲಾ ಏಳು ಮಂದಿಯ ಬಿಡುಗಡೆಗೆ ತೆಗೆದುಕೊಂಡ ತೀರ್ಮಾನ ಸರ್ಕಾರದ ಇತಿ ಮಿತಿಯಲ್ಲಿಯೇ ಇದೆ’ ಎಂದು ಹೇಳಿದರು.<br /> <br /> ಆರೋಪಿಗಳ ಪರವಾಗಿ ವಾದ ಮಂಡಿಸಿದಕ್ಕಾಗಿ ಎಂಡಿಎಂಕೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಜೇಠ್ಮಲಾನಿ, ಗಲ್ಲು ಶಿಕ್ಷೆಗೆ ಒಳಗಾಗಿದ್ದ ನಳಿನಿಗೆ ಕ್ಷಮಾಧಾನ ನೀಡಿ, ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದ್ದು, ರಾಜ್ಯದ ರಾಜ್ಯಪಾಲರು ಎಂದರು.<br /> ‘ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅಂಶಗಳ ಆಧಾರದ ಮೇಲೆಯೇ ಜಯಲಲಿತಾ ಅವರು ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಹೇಳಿದರು.<br /> <br /> ಅವರು (ಜಯಲಲಿತಾ) ತಮ್ಮ ನಿರ್ಧಾರಕ್ಕೆ ಅಂಟಿಕೊಂಡು ಎಲ್ಲಾ 7 ಮಂದಿ ಆರೋಪಿಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವ ವಿಶ್ವಾಸವನ್ನು ಜೇಠ್ಮಲಾನಿ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ</strong>): ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಮಂದಿ ರಾಜೀವ್ ಗಾಂಧಿ ಹಂತಕರು ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ತೀರ್ಮಾನವನ್ನು ಹಿರಿಯ ನ್ಯಾಯವಾದಿ ರಾಂ ಜೇಠ್ಮಲಾನಿ ಸಮರ್ಥಿಸಿಕೊಂಡಿದ್ದಾರೆ.<br /> <br /> ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಕೋರಿ ಆರೋಪಿಗಳಾದ ಸಾಂತನ್, ಮುರುಗನ್ ಮತ್ತು ಪೆರಾರಿವಲನ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿದ್ದ ಜೇಠ್ಮಲಾನಿ, ‘ಎಲ್ಲಾ ಏಳು ಮಂದಿಯ ಬಿಡುಗಡೆಗೆ ತೆಗೆದುಕೊಂಡ ತೀರ್ಮಾನ ಸರ್ಕಾರದ ಇತಿ ಮಿತಿಯಲ್ಲಿಯೇ ಇದೆ’ ಎಂದು ಹೇಳಿದರು.<br /> <br /> ಆರೋಪಿಗಳ ಪರವಾಗಿ ವಾದ ಮಂಡಿಸಿದಕ್ಕಾಗಿ ಎಂಡಿಎಂಕೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಜೇಠ್ಮಲಾನಿ, ಗಲ್ಲು ಶಿಕ್ಷೆಗೆ ಒಳಗಾಗಿದ್ದ ನಳಿನಿಗೆ ಕ್ಷಮಾಧಾನ ನೀಡಿ, ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದ್ದು, ರಾಜ್ಯದ ರಾಜ್ಯಪಾಲರು ಎಂದರು.<br /> ‘ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅಂಶಗಳ ಆಧಾರದ ಮೇಲೆಯೇ ಜಯಲಲಿತಾ ಅವರು ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಹೇಳಿದರು.<br /> <br /> ಅವರು (ಜಯಲಲಿತಾ) ತಮ್ಮ ನಿರ್ಧಾರಕ್ಕೆ ಅಂಟಿಕೊಂಡು ಎಲ್ಲಾ 7 ಮಂದಿ ಆರೋಪಿಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವ ವಿಶ್ವಾಸವನ್ನು ಜೇಠ್ಮಲಾನಿ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>