<p>ನವದೆಹಲಿ: ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಇದುವರೆಗೆ ಬೀದಿಗಳಲ್ಲಿ ಪ್ರತಿಭಟನೆಗಿಳಿದಿದ್ದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ತಂಡ ಚುನಾವಣೆಯಲ್ಲಿ ಸ್ಪರ್ಧಿಸುವ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡಿತು.<br /> <br /> ಜಂತರ್ ಮಂತರ್ನಲ್ಲಿ ಶುಕ್ರವಾರ ಸಂಜೆ ನಡೆದ ಬಹಿರಂಗ ಸಭೆಯಲ್ಲಿ 2014ರ ಸಾರ್ವತ್ರಿಕ ಚುನಾವಣೆಯಲ್ಲಿ `ಜನರ ಅಭ್ಯರ್ಥಿ~ಗಳನ್ನು ಕಣಕ್ಕಿಳಿಸುವ ಘೋಷಣೆ ಮಾಡಿತು.<br /> <br /> ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ಇನ್ನೂ ಗುಟ್ಟು ಬಿಡದ ಅಣ್ಣಾ ತಂಡ, ರಾಜಕೀಯ ಶಕ್ತಿ ಹುಟ್ಟುಹಾಕುವ ಮೂಲಕ ಪರ್ಯಾಯ ರಾಜಕಾರಣ ಮಾಡುವುದಾಗಿ ಪ್ರಕಟಿಸಿತು. <br /> <br /> ಜನ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಅವರೇ ಚುನಾವಣೆ ಹಣ ಖರ್ಚು ಮಾಡಲಿದ್ದಾರೆ ಎಂದು ಪ್ರಕಟಿಸಿತು.<br /> <br /> ನಾವು ಈ ಸರ್ಕಾರ ಕಿತ್ತೊಗೆಯುತ್ತೇವೆ. ದೀರ್ಘ ಕಾಲದಿಂದ ಈ ಸರ್ಕಾರದ ವಿರುದ್ಧ ಹೋರಾಡುತ್ತಾ ಬಂದಿದ್ದೇವೆ. ನಮ್ಮದು ರಾಜಕೀಯ ಪಕ್ಷವಲ್ಲ; ರಾಜಕೀಯ ಚಳವಳಿ ಎಂದು ಅಣ್ಣಾ ತಂಡ ಹೇಳಿದೆ.<br /> <br /> `ಅಧಿಕಾರ ಹಿಡಿಯುವುದು ನಮ್ಮ ಉದ್ದೇಶವಲ್ಲ. ರಾಜಕೀಯ ವ್ಯವಸ್ಥೆ ಬದಲಾವಣೆ ಮುಖ್ಯ ಗುರಿ. ಪ್ರಜಾಸತ್ತಾತ್ಮಕ ವಿಧಾನ- ಅಧಿಕಾರ ವಿಕೇಂದ್ರಿಕರಣದಿಂದ ಆಡಳಿತ ವ್ಯವಸ್ಥೆಯನ್ನು ಪಾರದರ್ಶಕ ಹಾಗೂ ಹೊಣೆಗಾರಿಕೆಯಿಂದ ವರ್ತಿಸುವಂತೆ ಮಾಡುವುದು ಪರ್ಯಾಯ ರಾಜಕಾರಣದ ಹಿಂದಿನ ಸಂಕಲ್ಪ~ ಎಂದು ಅಣ್ಣಾ ತಂಡ ಹೇಳಿಕೊಂಡಿದೆ. <br /> <br /> ಒಂಬತ್ತು ದಿನಗಳಿಂದ ಜಂತರ್- ಮಂತರ್ನಲ್ಲಿ ನಡೆಸಿದ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವ ಮೊದಲು ತಮ್ಮ ಮುಂದಿನ ರಾಜಕೀಯ ನಡೆ ಏನೆಂಬುದನ್ನು ಚಳವಳಿಗಾರರು ಸ್ಪಷ್ಟಪಡಿಸಿದ್ದಾರೆ.<br /> <br /> ಅಣ್ಣಾ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ವಿ.ಕೆ ಸಿಂಗ್, ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವ ಆಡಳಿತ ಕೊನೆಯಾಗುವ ಕಾಲ ಹತ್ತಿರ ಬಂದಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಸಾರ್ವಜನಿಕ ಸಭೆಯ ಬಳಿಕ ಅಣ್ಣಾ ಅವರಿಗೆ ಹಣ್ಣಿನ ರಸ ಕುಡಿಸುವ ಮೂಲಕ ಒಂಬತ್ತು ದಿನಗಳ ಹೋರಾಟವನ್ನು ಅಂತ್ಯಗೊಳಿಸಿದರು.<br /> <br /> <strong>ತಂಡದಲ್ಲಿ ಒಡಕು<br /> </strong>ರಾಜಕೀಯ ಪಕ್ಷ ಸ್ಥಾಪನೆ ಕುರಿತು ಅಣ್ಣಾ ತಂಡದಲ್ಲೇ ಒಡಕು ಕಾಣಿಸಿಕೊಂಡಿದೆ. ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಸೇರಿದಂತೆ ಕೆಲವರು ಅಪಸ್ವರ ತೆಗೆದಿದ್ದಾರೆ.<br /> <br /> <strong>ಸವಾಲು ಸ್ವೀಕಾರ</strong><br /> ಕಾಂಗ್ರೆಸ್ ಒಳಗೊಂಡಂತೆ ಕೆಲವು ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸವಾಲು ಹಾಕಿದವು. ಈ ಸವಾಲನ್ನು ನಾವು ಸ್ವೀಕಾರ ಮಾಡಿದ್ದೇವೆ -ಅಣ್ಣಾ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಇದುವರೆಗೆ ಬೀದಿಗಳಲ್ಲಿ ಪ್ರತಿಭಟನೆಗಿಳಿದಿದ್ದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ತಂಡ ಚುನಾವಣೆಯಲ್ಲಿ ಸ್ಪರ್ಧಿಸುವ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡಿತು.<br /> <br /> ಜಂತರ್ ಮಂತರ್ನಲ್ಲಿ ಶುಕ್ರವಾರ ಸಂಜೆ ನಡೆದ ಬಹಿರಂಗ ಸಭೆಯಲ್ಲಿ 2014ರ ಸಾರ್ವತ್ರಿಕ ಚುನಾವಣೆಯಲ್ಲಿ `ಜನರ ಅಭ್ಯರ್ಥಿ~ಗಳನ್ನು ಕಣಕ್ಕಿಳಿಸುವ ಘೋಷಣೆ ಮಾಡಿತು.<br /> <br /> ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ಇನ್ನೂ ಗುಟ್ಟು ಬಿಡದ ಅಣ್ಣಾ ತಂಡ, ರಾಜಕೀಯ ಶಕ್ತಿ ಹುಟ್ಟುಹಾಕುವ ಮೂಲಕ ಪರ್ಯಾಯ ರಾಜಕಾರಣ ಮಾಡುವುದಾಗಿ ಪ್ರಕಟಿಸಿತು. <br /> <br /> ಜನ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಅವರೇ ಚುನಾವಣೆ ಹಣ ಖರ್ಚು ಮಾಡಲಿದ್ದಾರೆ ಎಂದು ಪ್ರಕಟಿಸಿತು.<br /> <br /> ನಾವು ಈ ಸರ್ಕಾರ ಕಿತ್ತೊಗೆಯುತ್ತೇವೆ. ದೀರ್ಘ ಕಾಲದಿಂದ ಈ ಸರ್ಕಾರದ ವಿರುದ್ಧ ಹೋರಾಡುತ್ತಾ ಬಂದಿದ್ದೇವೆ. ನಮ್ಮದು ರಾಜಕೀಯ ಪಕ್ಷವಲ್ಲ; ರಾಜಕೀಯ ಚಳವಳಿ ಎಂದು ಅಣ್ಣಾ ತಂಡ ಹೇಳಿದೆ.<br /> <br /> `ಅಧಿಕಾರ ಹಿಡಿಯುವುದು ನಮ್ಮ ಉದ್ದೇಶವಲ್ಲ. ರಾಜಕೀಯ ವ್ಯವಸ್ಥೆ ಬದಲಾವಣೆ ಮುಖ್ಯ ಗುರಿ. ಪ್ರಜಾಸತ್ತಾತ್ಮಕ ವಿಧಾನ- ಅಧಿಕಾರ ವಿಕೇಂದ್ರಿಕರಣದಿಂದ ಆಡಳಿತ ವ್ಯವಸ್ಥೆಯನ್ನು ಪಾರದರ್ಶಕ ಹಾಗೂ ಹೊಣೆಗಾರಿಕೆಯಿಂದ ವರ್ತಿಸುವಂತೆ ಮಾಡುವುದು ಪರ್ಯಾಯ ರಾಜಕಾರಣದ ಹಿಂದಿನ ಸಂಕಲ್ಪ~ ಎಂದು ಅಣ್ಣಾ ತಂಡ ಹೇಳಿಕೊಂಡಿದೆ. <br /> <br /> ಒಂಬತ್ತು ದಿನಗಳಿಂದ ಜಂತರ್- ಮಂತರ್ನಲ್ಲಿ ನಡೆಸಿದ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವ ಮೊದಲು ತಮ್ಮ ಮುಂದಿನ ರಾಜಕೀಯ ನಡೆ ಏನೆಂಬುದನ್ನು ಚಳವಳಿಗಾರರು ಸ್ಪಷ್ಟಪಡಿಸಿದ್ದಾರೆ.<br /> <br /> ಅಣ್ಣಾ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ವಿ.ಕೆ ಸಿಂಗ್, ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವ ಆಡಳಿತ ಕೊನೆಯಾಗುವ ಕಾಲ ಹತ್ತಿರ ಬಂದಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಸಾರ್ವಜನಿಕ ಸಭೆಯ ಬಳಿಕ ಅಣ್ಣಾ ಅವರಿಗೆ ಹಣ್ಣಿನ ರಸ ಕುಡಿಸುವ ಮೂಲಕ ಒಂಬತ್ತು ದಿನಗಳ ಹೋರಾಟವನ್ನು ಅಂತ್ಯಗೊಳಿಸಿದರು.<br /> <br /> <strong>ತಂಡದಲ್ಲಿ ಒಡಕು<br /> </strong>ರಾಜಕೀಯ ಪಕ್ಷ ಸ್ಥಾಪನೆ ಕುರಿತು ಅಣ್ಣಾ ತಂಡದಲ್ಲೇ ಒಡಕು ಕಾಣಿಸಿಕೊಂಡಿದೆ. ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಸೇರಿದಂತೆ ಕೆಲವರು ಅಪಸ್ವರ ತೆಗೆದಿದ್ದಾರೆ.<br /> <br /> <strong>ಸವಾಲು ಸ್ವೀಕಾರ</strong><br /> ಕಾಂಗ್ರೆಸ್ ಒಳಗೊಂಡಂತೆ ಕೆಲವು ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸವಾಲು ಹಾಕಿದವು. ಈ ಸವಾಲನ್ನು ನಾವು ಸ್ವೀಕಾರ ಮಾಡಿದ್ದೇವೆ -ಅಣ್ಣಾ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>