<p><strong>ಇಂಪಾಲ್ (ಪಿಟಿಐ): </strong>ರಾಜಕೀಯ ಪ್ರವೇಶಿಸುವ ತಮ್ಮ ನಿರ್ಧಾರ ಬದಲಿಸುವುದಿಲ್ಲ ಎಂದು ಮಣಿಪುರದ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಹೇಳಿದ್ದಾರೆ.</p>.<p>ಮಣಿಪುರದಲ್ಲಿ ಜಾರಿಯಲ್ಲಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಐ) ರದ್ದುಮಾಡಬೇಕು ಎಂದು ಆಗ್ರಹಿಸಿ ನಡೆಸುತ್ತಿದ್ದ 16 ವರ್ಷಗಳ ಉಪವಾಸ ಸತ್ಯಾಗ್ರಹವನ್ನು ಇತ್ತೀಚೆಗೆ ಅವರು ಅಂತ್ಯಗೊಳಿಸಿದ್ದಾರೆ.</p>.<p>ಶರ್ಮಿಳಾ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರ ಈ ನಡೆಯನ್ನು ಅವರ ಕೆಲ ಬೆಂಬಲಿಗರು ವಿರೋಧಿಸುತ್ತಿದ್ದಾರೆ.</p>.<p>ಆದರೆ, ತಮ್ಮ ಮುಂದಿನ ನಡೆಯ ಬಗ್ಗೆ ಅಪಾರ ಭರವಸೆ ಹೊಂದಿರುವ ಶರ್ಮಿಳಾ ‘ಹೊಸ ಆರಂಭ’ದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಹೇಳಿದ್ದಾರೆ.</p>.<p>‘ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದೇನೆ. ನಾನು ಮುಖ್ಯಮಂತ್ರಿಯಾದರೆ ಎಎಫ್ಎಸ್ಪಿಐ ಕಾಯ್ದೆ ರದ್ದುಗೊಳಿಸಲು ಸಾಧ್ಯ’ ಎಂದು ಅವರು ತಿಳಿಸಿದ್ದಾರೆ.</p>.<p>‘ಒಂದು ವೇಳೆ ಜನ ನನ್ನನ್ನು ಬೆಂಬಲಿಸದಿದ್ದರೆ ನಾನು ನನ್ನದೇ ದಾರಿಯಲ್ಲಿ ಸಾಗುತ್ತೇನೆ’ ಎಂದಿದ್ದಾರೆ ಶರ್ಮಿಳಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಪಾಲ್ (ಪಿಟಿಐ): </strong>ರಾಜಕೀಯ ಪ್ರವೇಶಿಸುವ ತಮ್ಮ ನಿರ್ಧಾರ ಬದಲಿಸುವುದಿಲ್ಲ ಎಂದು ಮಣಿಪುರದ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಹೇಳಿದ್ದಾರೆ.</p>.<p>ಮಣಿಪುರದಲ್ಲಿ ಜಾರಿಯಲ್ಲಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಐ) ರದ್ದುಮಾಡಬೇಕು ಎಂದು ಆಗ್ರಹಿಸಿ ನಡೆಸುತ್ತಿದ್ದ 16 ವರ್ಷಗಳ ಉಪವಾಸ ಸತ್ಯಾಗ್ರಹವನ್ನು ಇತ್ತೀಚೆಗೆ ಅವರು ಅಂತ್ಯಗೊಳಿಸಿದ್ದಾರೆ.</p>.<p>ಶರ್ಮಿಳಾ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರ ಈ ನಡೆಯನ್ನು ಅವರ ಕೆಲ ಬೆಂಬಲಿಗರು ವಿರೋಧಿಸುತ್ತಿದ್ದಾರೆ.</p>.<p>ಆದರೆ, ತಮ್ಮ ಮುಂದಿನ ನಡೆಯ ಬಗ್ಗೆ ಅಪಾರ ಭರವಸೆ ಹೊಂದಿರುವ ಶರ್ಮಿಳಾ ‘ಹೊಸ ಆರಂಭ’ದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಹೇಳಿದ್ದಾರೆ.</p>.<p>‘ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದೇನೆ. ನಾನು ಮುಖ್ಯಮಂತ್ರಿಯಾದರೆ ಎಎಫ್ಎಸ್ಪಿಐ ಕಾಯ್ದೆ ರದ್ದುಗೊಳಿಸಲು ಸಾಧ್ಯ’ ಎಂದು ಅವರು ತಿಳಿಸಿದ್ದಾರೆ.</p>.<p>‘ಒಂದು ವೇಳೆ ಜನ ನನ್ನನ್ನು ಬೆಂಬಲಿಸದಿದ್ದರೆ ನಾನು ನನ್ನದೇ ದಾರಿಯಲ್ಲಿ ಸಾಗುತ್ತೇನೆ’ ಎಂದಿದ್ದಾರೆ ಶರ್ಮಿಳಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>