<p><strong>ಚೆನ್ನೈ (ಪಿಟಿಐ): </strong>ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವವ ಮೂವರು ಆರೋಪಿಗಳು ತಮಗೆ ನೀಡಿದ ಶಿಕ್ಷೆಯನ್ನು ಕಡಿತಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಮದ್ರಾಸ್ ಹೈಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ.</p>.<p>ಶುಕ್ರವಾರ ಮೂವರು ರಾಜೀವ್ ಹಂತಕರ ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಎಂಡಿಎಂಕೆ ಧುರೀಣ ವೈಕೋ ಅವರು, ಚೆನ್ನೈನಿಂದ ಹೊರಗಡೆ ಬೇರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕೆಂದು ಮನವಿಯು ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ಇತ್ಯರ್ಥವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.</p>.<p>ಈ ವಿಷಯವನ್ನು ಗಣನೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಸಿ.ನಾಗಪ್ಪನ್ ಮತ್ತು ಎಂ. ಸತ್ಯನಾರಾಯಣನ್ ಅವರ ಪೀಠ, ರಾಜೀವ ಗಾಂಧಿ ಹಂತಕರ ಅರ್ಜಿ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು.</p>.<p>ಇದೇ ನ್ಯಾಯಾಲಯವು, ರಾಜೀವ್ ಗಾಂಧಿ ಹಂತಕರಾದ ಮುರುಗನ್, ಸಂಥನ್ ಮತ್ತು ಪೆರಾರಿವಲನ್ ಅವರು ತಮಗೆ ವಿಧಿಸಿರುವ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತ ಅರ್ಜಿ ಸಲ್ಲಿಸಿದಾಗ, ಅವರಿಗೆ ವಿಧಿಸಿದ ಗಲ್ಲು ಶಿಕ್ಷೆಗೆ ಆ 30 ರಂದು ಎಂಟು ವಾರಗಳ ತಡೆಯಾಜ್ಞೆ ನೀಡಿತ್ತು.</p>.<p>ರಾಷ್ಟಪತಿ ಪ್ರತಿಭಾ ಪಾಟೀಲ್ ಅವರು, ಕ್ಷಮಾದಾನದ ಅರ್ಜಿಯನ್ನು ತಳ್ಳಿಹಾಕಿದ ನಂತರ ಸೆಪ್ಟೆಂಬರ್ 9 ರಂದು ಗಲ್ಲಿಗೇರಬೇಕಾಗಿದ್ದ ಈ ಮೂವರು ಆರೋಪಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೆಮ್ಮದಿ ತಂದಿತ್ತು. </p>.<p> ಕಳೆದ 1991ರ ಮೇ 21ರಂದು ಶ್ರೀಪರಂಬೂರಿನಲ್ಲಿ ನಡೆದ ರ್ಯಾಲಿಯೊಂದರಲ್ಲಿ ಭಾಗವಹಿಸಿದ್ದ ರಾಜೀವ್ ಗಾಂಧಿ ಅವರನ್ನು ಎಲ್ ಟಿಟಿ ಇ ಸಂಘಟನೆಗೆ ಸೇರಿದ್ದ ಆತ್ಮಹತ್ಯಾ ಬಾಂಬರ್ ತನ್ನನ್ನೇ ತಾನು ಸ್ಫೋಟಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳಾಗಿದ್ದಾರೆ. ಅವರು ವೆಲ್ಲೋರ್ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವವ ಮೂವರು ಆರೋಪಿಗಳು ತಮಗೆ ನೀಡಿದ ಶಿಕ್ಷೆಯನ್ನು ಕಡಿತಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಮದ್ರಾಸ್ ಹೈಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ.</p>.<p>ಶುಕ್ರವಾರ ಮೂವರು ರಾಜೀವ್ ಹಂತಕರ ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಎಂಡಿಎಂಕೆ ಧುರೀಣ ವೈಕೋ ಅವರು, ಚೆನ್ನೈನಿಂದ ಹೊರಗಡೆ ಬೇರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕೆಂದು ಮನವಿಯು ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ಇತ್ಯರ್ಥವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.</p>.<p>ಈ ವಿಷಯವನ್ನು ಗಣನೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಸಿ.ನಾಗಪ್ಪನ್ ಮತ್ತು ಎಂ. ಸತ್ಯನಾರಾಯಣನ್ ಅವರ ಪೀಠ, ರಾಜೀವ ಗಾಂಧಿ ಹಂತಕರ ಅರ್ಜಿ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು.</p>.<p>ಇದೇ ನ್ಯಾಯಾಲಯವು, ರಾಜೀವ್ ಗಾಂಧಿ ಹಂತಕರಾದ ಮುರುಗನ್, ಸಂಥನ್ ಮತ್ತು ಪೆರಾರಿವಲನ್ ಅವರು ತಮಗೆ ವಿಧಿಸಿರುವ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸುವಂತ ಅರ್ಜಿ ಸಲ್ಲಿಸಿದಾಗ, ಅವರಿಗೆ ವಿಧಿಸಿದ ಗಲ್ಲು ಶಿಕ್ಷೆಗೆ ಆ 30 ರಂದು ಎಂಟು ವಾರಗಳ ತಡೆಯಾಜ್ಞೆ ನೀಡಿತ್ತು.</p>.<p>ರಾಷ್ಟಪತಿ ಪ್ರತಿಭಾ ಪಾಟೀಲ್ ಅವರು, ಕ್ಷಮಾದಾನದ ಅರ್ಜಿಯನ್ನು ತಳ್ಳಿಹಾಕಿದ ನಂತರ ಸೆಪ್ಟೆಂಬರ್ 9 ರಂದು ಗಲ್ಲಿಗೇರಬೇಕಾಗಿದ್ದ ಈ ಮೂವರು ಆರೋಪಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೆಮ್ಮದಿ ತಂದಿತ್ತು. </p>.<p> ಕಳೆದ 1991ರ ಮೇ 21ರಂದು ಶ್ರೀಪರಂಬೂರಿನಲ್ಲಿ ನಡೆದ ರ್ಯಾಲಿಯೊಂದರಲ್ಲಿ ಭಾಗವಹಿಸಿದ್ದ ರಾಜೀವ್ ಗಾಂಧಿ ಅವರನ್ನು ಎಲ್ ಟಿಟಿ ಇ ಸಂಘಟನೆಗೆ ಸೇರಿದ್ದ ಆತ್ಮಹತ್ಯಾ ಬಾಂಬರ್ ತನ್ನನ್ನೇ ತಾನು ಸ್ಫೋಟಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳಾಗಿದ್ದಾರೆ. ಅವರು ವೆಲ್ಲೋರ್ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>