<p>ಬೆಂಗಳೂರು: ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.<br /> <br /> ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಘಟ್ಟಪ್ರದೇಶಗಳಲ್ಲಿ ದಿನವೊಂದಕ್ಕೆ 13ರಿಂದ 24 ಸೆಂ.ಮೀ ಪ್ರಮಾಣದಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಹವಾಮಾನ ಇಲಾಖೆಯ ನಿರ್ದೇಶಕ ಬಿ.ಪುಟ್ಟಣ್ಣ, `ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೂ ಸುಳಿಗಾಳಿ ಸುತ್ತುವುದರಿಂದ ಮಾರುತಗಳು ಚಲಿಸಿದ ದಿಕ್ಕಿನಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ' ಎಂದು ಮಾಹಿತಿ ನೀಡಿದರು.<br /> <br /> `ಮಾರುತಗಳು ಪಶ್ಚಿಮ ದಿಕ್ಕಿನಿಂದ ಸುಮಾರು 45 ರಿಂದ 55 ಕಿ.ಮೀ ವೇಗದಲ್ಲಿ ಚಲಿಸುವುದರಿಂದ ಸಮುದ್ರದ ಅಲೆಗಳ ಏರಿಳಿತ ಹೆಚ್ಚಾಗಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುತ್ತದೆ' ಎಂದು ತಿಳಿಸಿದರು. `ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ವ್ಯಾಪಕ ಮಳೆಯಾಗಿರುವ ಕರಾವಳಿಯಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಇರುವುದರಿಂದ ಸಾರ್ವಜನಿಕರು ಇಲಾಖೆಯ ಮುನ್ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು' ಎಂದು ಮನವಿ ಮಾಡಿದರು.<br /> <br /> `ವಾಯುಭಾರ ಕುಸಿತ ಪರಿಣಾಮದಿಂದ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲೂ ಕೂಡ ವ್ಯಾಪಕವಾದ ಮಳೆಯಾಗಲಿದೆ. ಬೆಂಗಳೂರಿನಲ್ಲಿ 1ರಿಂದ 4 ಸೆಂ.ಮೀ ಸಾಧಾರಣ ಮಳೆಯಾಗಲಿದೆ' ಎಂದು ಹೇಳಿದರು.<br /> <br /> <strong>ವಾಯುಭಾರ ಕುಸಿತ</strong><br /> ಚೆನ್ನೈ (ಪಿಟಿಐ): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ. ಕೇರಳದಲ್ಲಿ ನೈಋತ್ಯ ಮಾರುತಗಳು ಬಿರುಸಾಗಿರುವುದರಿಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಲಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕಚೇರಿ ಗುರುವಾರ ಮುನ್ಸೂಚನೆ ನೀಡಿದೆ.<br /> <br /> `ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಮುಂದಿನ 48 ತಾಸುಗಳಲ್ಲಿ ಭಾರಿ ಮಳೆಯಾಗಲಿದೆ' ಎಂದು ಪ್ರಾದೇಶಿಕ ಹವಾಮಾನ ಕಚೇರಿಯ ನಿರ್ದೇಶಕ ಎಸ್.ಆರ್. ರಮಣನ್ ತಿಳಿಸಿದ್ದಾರೆ. ಆಂಧ್ರದ ತೆಲಂಗಾಣ, ನೀಲಗಿರಿ ಶ್ರೇಣಿ, ಲಕ್ಷದ್ವೀಪ, ದಕ್ಷಿಣ ಕರ್ನಾಟಕದ ಪಶ್ಚಿಮಘಟ್ಟಗಳ ಪ್ರದೇಶಗಳಲ್ಲೂ ಮಳೆ ಬಿರುಸುಗೊಳ್ಳಲಿದೆ ಎಂದು ಮುನ್ಸೂಚನೆ ತಿಳಿಸಿದೆ.<br /> <br /> ಹವಾಮಾನ ಇಲಾಖೆಯ ಅಂಕಿಅಂಶದಂತೆ ದಕ್ಷಿಣ ಭಾರತದಲ್ಲಿ ಈ ಸಾರಿ ಮುಂಗಾರು ಉತ್ತಮವಾಗಿಯೇ ಸುರಿದಿದೆ. ಆಂಧ್ರ ಕೊಯಿಡಾ ಮತ್ತು ಕೇರಳದ ವೈಕೊಂಗಳಲ್ಲಿ 10 ಸೆಂ.ಮೀ. ಮತ್ತು ಕರ್ನಾಟಕದ ಕ್ಯಾಸಲ್ರಾಕ್, ತಮಿಳುನಾಡಿನ ಚಿನ್ನಕಳರ್ನಲ್ಲಿ ಆರು ಸೆಂ.ಮೀ. ಮಳೆ ಬಿದ್ದಿದೆ. ಈ ಮಧ್ಯೆ, ಚೆನ್ನೈ ನಗರದಲ್ಲಿ ಬುಧವಾರ ಇಡೀ ರಾತ್ರಿ ಮಳೆ ಸುರಿದ್ದಿದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮುಂದಿನ 24 ತಾಸುಗಳ ಕಾಲ ಚೆನ್ನೈನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.<br /> <br /> ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಘಟ್ಟಪ್ರದೇಶಗಳಲ್ಲಿ ದಿನವೊಂದಕ್ಕೆ 13ರಿಂದ 24 ಸೆಂ.ಮೀ ಪ್ರಮಾಣದಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಹವಾಮಾನ ಇಲಾಖೆಯ ನಿರ್ದೇಶಕ ಬಿ.ಪುಟ್ಟಣ್ಣ, `ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೂ ಸುಳಿಗಾಳಿ ಸುತ್ತುವುದರಿಂದ ಮಾರುತಗಳು ಚಲಿಸಿದ ದಿಕ್ಕಿನಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ' ಎಂದು ಮಾಹಿತಿ ನೀಡಿದರು.<br /> <br /> `ಮಾರುತಗಳು ಪಶ್ಚಿಮ ದಿಕ್ಕಿನಿಂದ ಸುಮಾರು 45 ರಿಂದ 55 ಕಿ.ಮೀ ವೇಗದಲ್ಲಿ ಚಲಿಸುವುದರಿಂದ ಸಮುದ್ರದ ಅಲೆಗಳ ಏರಿಳಿತ ಹೆಚ್ಚಾಗಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುತ್ತದೆ' ಎಂದು ತಿಳಿಸಿದರು. `ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ವ್ಯಾಪಕ ಮಳೆಯಾಗಿರುವ ಕರಾವಳಿಯಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಇರುವುದರಿಂದ ಸಾರ್ವಜನಿಕರು ಇಲಾಖೆಯ ಮುನ್ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು' ಎಂದು ಮನವಿ ಮಾಡಿದರು.<br /> <br /> `ವಾಯುಭಾರ ಕುಸಿತ ಪರಿಣಾಮದಿಂದ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲೂ ಕೂಡ ವ್ಯಾಪಕವಾದ ಮಳೆಯಾಗಲಿದೆ. ಬೆಂಗಳೂರಿನಲ್ಲಿ 1ರಿಂದ 4 ಸೆಂ.ಮೀ ಸಾಧಾರಣ ಮಳೆಯಾಗಲಿದೆ' ಎಂದು ಹೇಳಿದರು.<br /> <br /> <strong>ವಾಯುಭಾರ ಕುಸಿತ</strong><br /> ಚೆನ್ನೈ (ಪಿಟಿಐ): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ. ಕೇರಳದಲ್ಲಿ ನೈಋತ್ಯ ಮಾರುತಗಳು ಬಿರುಸಾಗಿರುವುದರಿಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಲಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕಚೇರಿ ಗುರುವಾರ ಮುನ್ಸೂಚನೆ ನೀಡಿದೆ.<br /> <br /> `ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಮುಂದಿನ 48 ತಾಸುಗಳಲ್ಲಿ ಭಾರಿ ಮಳೆಯಾಗಲಿದೆ' ಎಂದು ಪ್ರಾದೇಶಿಕ ಹವಾಮಾನ ಕಚೇರಿಯ ನಿರ್ದೇಶಕ ಎಸ್.ಆರ್. ರಮಣನ್ ತಿಳಿಸಿದ್ದಾರೆ. ಆಂಧ್ರದ ತೆಲಂಗಾಣ, ನೀಲಗಿರಿ ಶ್ರೇಣಿ, ಲಕ್ಷದ್ವೀಪ, ದಕ್ಷಿಣ ಕರ್ನಾಟಕದ ಪಶ್ಚಿಮಘಟ್ಟಗಳ ಪ್ರದೇಶಗಳಲ್ಲೂ ಮಳೆ ಬಿರುಸುಗೊಳ್ಳಲಿದೆ ಎಂದು ಮುನ್ಸೂಚನೆ ತಿಳಿಸಿದೆ.<br /> <br /> ಹವಾಮಾನ ಇಲಾಖೆಯ ಅಂಕಿಅಂಶದಂತೆ ದಕ್ಷಿಣ ಭಾರತದಲ್ಲಿ ಈ ಸಾರಿ ಮುಂಗಾರು ಉತ್ತಮವಾಗಿಯೇ ಸುರಿದಿದೆ. ಆಂಧ್ರ ಕೊಯಿಡಾ ಮತ್ತು ಕೇರಳದ ವೈಕೊಂಗಳಲ್ಲಿ 10 ಸೆಂ.ಮೀ. ಮತ್ತು ಕರ್ನಾಟಕದ ಕ್ಯಾಸಲ್ರಾಕ್, ತಮಿಳುನಾಡಿನ ಚಿನ್ನಕಳರ್ನಲ್ಲಿ ಆರು ಸೆಂ.ಮೀ. ಮಳೆ ಬಿದ್ದಿದೆ. ಈ ಮಧ್ಯೆ, ಚೆನ್ನೈ ನಗರದಲ್ಲಿ ಬುಧವಾರ ಇಡೀ ರಾತ್ರಿ ಮಳೆ ಸುರಿದ್ದಿದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮುಂದಿನ 24 ತಾಸುಗಳ ಕಾಲ ಚೆನ್ನೈನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>