<p><strong>ನವದೆಹಲಿ (ಪಿಟಿಐ): </strong>ರಾಜ್ಯಸಭೆಯ ಆರು ಸ್ಥಾನಗಳಿಗೆ ಜೂನ್ 27ರಂದು ನಡೆಯುವ ಚುನಾವಣೆಯ ಕಣ ರಂಗೇರಿದ್ದು, ಕನಿಮೋಳಿ ಅವರನ್ನು ಕಣಕ್ಕಿಳಿಸಿರುವ ಡಿಎಂಕೆ ತನ್ನ ಹಳೆಯ ಮಿತ್ರ ಪಕ್ಷವಾದ ಕಾಂಗ್ರೆಸ್ನ ಬೆಂಬಲ ಕೋರಿದೆ.<br /> <br /> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ ಡಿಎಂಕೆ ಹಿರಿಯ ಮುಖಂಡ ಟಿ.ಆರ್.ಬಾಲು ಅವರು ಪಕ್ಷದ ಮುಖ್ಯಸ್ಥ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಅವರನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.<br /> <br /> ಶ್ರೀಲಂಕಾ ತಮಿಳರ ಮೇಲಿನ ದೌರ್ಜನ್ಯ ವಿಷಯದಲ್ಲಿ ಕೆಲ ತಿಂಗಳ ಹಿಂದೆ ಯುಪಿಎಗೆ ನೀಡಿದ ಬೆಂಬಲವನ್ನು ಡಿಎಂಕೆ ಹಿಂದಕ್ಕೆ ಪಡೆದಿತ್ತು. ಆ ನಂತರದಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮುಖಂಡರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.</p>.<p>ಆರು ಸ್ಥಾನಗಳಿಗಾಗಿ ನಟ ವಿಜಯಕಾಂತ ನೇತೃತ್ವದ ಡಿಎಂಡಿಕೆ ಹಾಗೂ ಡಿಎಂಕೆ ಮಧ್ಯೆ ಭಾರಿ ತುರುಸಿನ ಸ್ಪರ್ಧೆ ಏರ್ಪಟಿದ್ದು, ಎರಡು ಪಕ್ಷಗಳು ಕಾಂಗ್ರೆಸ್ನ ಬೆಂಬಲ ಕೋರಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಸಹಾಯಹಸ್ತ ಚಾಚುತ್ತದೆ ಎನ್ನುವುದು ಕುತೂಹಲದ ಪ್ರಶ್ನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ರಾಜ್ಯಸಭೆಯ ಆರು ಸ್ಥಾನಗಳಿಗೆ ಜೂನ್ 27ರಂದು ನಡೆಯುವ ಚುನಾವಣೆಯ ಕಣ ರಂಗೇರಿದ್ದು, ಕನಿಮೋಳಿ ಅವರನ್ನು ಕಣಕ್ಕಿಳಿಸಿರುವ ಡಿಎಂಕೆ ತನ್ನ ಹಳೆಯ ಮಿತ್ರ ಪಕ್ಷವಾದ ಕಾಂಗ್ರೆಸ್ನ ಬೆಂಬಲ ಕೋರಿದೆ.<br /> <br /> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ ಡಿಎಂಕೆ ಹಿರಿಯ ಮುಖಂಡ ಟಿ.ಆರ್.ಬಾಲು ಅವರು ಪಕ್ಷದ ಮುಖ್ಯಸ್ಥ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಅವರನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.<br /> <br /> ಶ್ರೀಲಂಕಾ ತಮಿಳರ ಮೇಲಿನ ದೌರ್ಜನ್ಯ ವಿಷಯದಲ್ಲಿ ಕೆಲ ತಿಂಗಳ ಹಿಂದೆ ಯುಪಿಎಗೆ ನೀಡಿದ ಬೆಂಬಲವನ್ನು ಡಿಎಂಕೆ ಹಿಂದಕ್ಕೆ ಪಡೆದಿತ್ತು. ಆ ನಂತರದಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮುಖಂಡರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.</p>.<p>ಆರು ಸ್ಥಾನಗಳಿಗಾಗಿ ನಟ ವಿಜಯಕಾಂತ ನೇತೃತ್ವದ ಡಿಎಂಡಿಕೆ ಹಾಗೂ ಡಿಎಂಕೆ ಮಧ್ಯೆ ಭಾರಿ ತುರುಸಿನ ಸ್ಪರ್ಧೆ ಏರ್ಪಟಿದ್ದು, ಎರಡು ಪಕ್ಷಗಳು ಕಾಂಗ್ರೆಸ್ನ ಬೆಂಬಲ ಕೋರಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಸಹಾಯಹಸ್ತ ಚಾಚುತ್ತದೆ ಎನ್ನುವುದು ಕುತೂಹಲದ ಪ್ರಶ್ನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>