<p><strong>ನೈನಿತಾಲ್ (ಪಿಟಿಐ): </strong>ಪಾಸ್ಪೋರ್ಟ್ಗಾಗಿ ನಕಲಿ ಶೈಕ್ಷಣಿಕ ದಾಖಲೆ ನೀಡಿ ಬಂಧನಕ್ಕೊಳಗಾಗಿದ್ದ ಬಾಬಾ ರಾಮ್ದೇವ್ ಆಪ್ತ ಬಾಲಕೃಷ್ಣ ಅವರಿಗೆ ಉತ್ತರಾಖಂಡ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.<br /> <br /> ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾಧೀಶ ತರುಣ್ ಅಗರ್ವಾಲ್ ಅವರು ಬಾಲಕೃಷ್ಣ ಅವರಿಗೆ ಜಾಮೀನು ನೀಡಿದ್ದಾರೆ. ಜೊತೆಗೆ ರೂ 10 ಲಕ್ಷ ಮೌಲ್ಯದ ಇಬ್ಬರ ಖಾತರಿಯನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಆದೇಶಿಸಿದೆ.<br /> <br /> ಕೋರ್ಟ್ಗೆ ಹಾಜರಾಗುವಲ್ಲಿ ವಿಫಲರಾದ ಅವರ ವಿರುದ್ಧ ಸಿಬಿಐ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಜುಲೈ 10ರಂದು ಬಾಲಕೃಷ್ಣ ವಿರುದ್ಧ ನ್ಯಾಯಾಲಯದಲ್ಲಿ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. <br /> <br /> ಹರಿದ್ವಾರದಲ್ಲಿ ಬಂಧನಕ್ಕೆ ಒಳಗಾಗುವ ಮುನ್ನ ಜುಲೈ 20ರಂದು ಜಾಮೀನಿಗಾಗಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿ ತಿರಸ್ಕರಿಸಿ, 9 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಬಾಲಕೃಷ್ಣ, ಡೆಹ್ರಾಡೂನ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲೂ ಅರ್ಜಿ ವಜಾಗೊಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೈನಿತಾಲ್ (ಪಿಟಿಐ): </strong>ಪಾಸ್ಪೋರ್ಟ್ಗಾಗಿ ನಕಲಿ ಶೈಕ್ಷಣಿಕ ದಾಖಲೆ ನೀಡಿ ಬಂಧನಕ್ಕೊಳಗಾಗಿದ್ದ ಬಾಬಾ ರಾಮ್ದೇವ್ ಆಪ್ತ ಬಾಲಕೃಷ್ಣ ಅವರಿಗೆ ಉತ್ತರಾಖಂಡ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.<br /> <br /> ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾಧೀಶ ತರುಣ್ ಅಗರ್ವಾಲ್ ಅವರು ಬಾಲಕೃಷ್ಣ ಅವರಿಗೆ ಜಾಮೀನು ನೀಡಿದ್ದಾರೆ. ಜೊತೆಗೆ ರೂ 10 ಲಕ್ಷ ಮೌಲ್ಯದ ಇಬ್ಬರ ಖಾತರಿಯನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಆದೇಶಿಸಿದೆ.<br /> <br /> ಕೋರ್ಟ್ಗೆ ಹಾಜರಾಗುವಲ್ಲಿ ವಿಫಲರಾದ ಅವರ ವಿರುದ್ಧ ಸಿಬಿಐ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಜುಲೈ 10ರಂದು ಬಾಲಕೃಷ್ಣ ವಿರುದ್ಧ ನ್ಯಾಯಾಲಯದಲ್ಲಿ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. <br /> <br /> ಹರಿದ್ವಾರದಲ್ಲಿ ಬಂಧನಕ್ಕೆ ಒಳಗಾಗುವ ಮುನ್ನ ಜುಲೈ 20ರಂದು ಜಾಮೀನಿಗಾಗಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿ ತಿರಸ್ಕರಿಸಿ, 9 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಬಾಲಕೃಷ್ಣ, ಡೆಹ್ರಾಡೂನ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲೂ ಅರ್ಜಿ ವಜಾಗೊಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>