<p><strong>ನವದೆಹಲಿ (ಪಿಟಿಐ):</strong> ಖ್ಯಾತ ವಿಜ್ಞಾನಿ, ಕರ್ನಾಟಕದ ಪ್ರೊ.ಸಿ.ಎನ್.ಆರ್ ರಾವ್ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರದಾನ ಮಾಡಿದರು.<br /> <br /> ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಕೇವಲ ಆರು ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ಪ್ರಣವ್ ಮುಖರ್ಜಿ ಅವರು ಈ ಇಬ್ಬರು ಖ್ಯಾತನಾಮರಿಗೆ ‘ಭಾರತ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಿದರು.<br /> <br /> ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಕಳೆದ ನವೆಂಬರ್ 16ರಂದು ನಿವೃತ್ತರಾಗಿದ್ದ 40 ವರ್ಷದ ಸಚಿನ್ ತೆಂಡೂಲ್ಕರ್ ಅವರು ಈ ಗೌರವಕ್ಕೆ ಪಾತ್ರರಾಗಿರುವ ಏಕೈಕ ಕ್ರೀಡಾಪಟುವಾಗಿದ್ದಾರೆ.</p>.<table align="right" border="1" cellpadding="1" cellspacing="1" style="width: 250px;"><tbody><tr><td></td> </tr> <tr> <td> <span style="font-size:10px;">ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ‘ಭಾರತ ರತ್ನ’ ಪ್ರದಾನ ಸಮಾರಂಭದಲ್ಲಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪತ್ನಿ ಅಂಜಲಿ ಹಾಗೂ ಮಗಳು ಸಾರಾ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ</span></td> </tr> </tbody> </table>.<p>ಕಪ್ಪು ಬಣ್ಣದ ಸೂಟ್ ಧರಿಸಿದ್ದ ರಾಜ್ಯಸಭಾ ಸದಸ್ಯರೂ ಆಗಿರುವ ತೆಂಡೂಲ್ಕರ್, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇತರ ಗಣ್ಯರ ಬಳಿಗೆ ತೆರಳಿ ಕುಶಲೋಪರಿ ವಿಚಾರಿಸಿದರು.<br /> <br /> ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಕೇಂದ್ರ ಸಚಿವರು, ಸಚಿನ್ ಪತ್ನಿ ಅಂಜಲಿ ಪುತ್ರಿ ಸಾರಾ ಸೇರಿದಂತೆ ಹಲವರು ಸಮಾರಂಭದಲ್ಲಿ ಹಾಜರಿದ್ದರು.</p>.<p>ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೊ.ರಾವ್, ‘ಇದು ಶ್ರೇಷ್ಠ ಗೌರವ. ಎಲ್ಲಕ್ಕಿಂತಲೂ ಮಿಗಿಲಾಗಿದ್ದು. ಭಾರತ ನನ್ನನ್ನು ಗೌರವಿಸಿರುವುದನ್ನು ಯಾವುದಕ್ಕೂ ಹೋಲಿಸಲಾಗದು’ ಎಂದು ಹೇಳಿದರು.</p>.<p><br /> ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಸಚಿನ್ ತೆಂಡೂಲ್ಕರ್, ‘ಭಾರತದ ಪರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸುತ್ತೇನೆ. ನಾನು ಕ್ರಿಕೆಟ್ನಲ್ಲಿ ಬ್ಯಾಟಿಂಗ್ ನಿಲ್ಲಿಸಿದ್ದರೂ, ದೇಶದ ಪರ ಕೆಲಸ ಮಾಡಿ ಜನರ ಮೊಗದಲ್ಲಿ ನಗುಮೂಡಿಸಲು ಯತ್ನಿಸುತ್ತೇನೆ’ ಎಂದಷ್ಟೇ ಹೇಳಿದರು.<br /> ಪ್ರಯಾಸಪಟ್ಟ ಸಿಬ್ಬಂದಿ: ಸಮಾರಂಭದಲ್ಲಿ ಸೇರಿದ್ದ ಜನರನ್ನು ನಿಯಂತ್ರಿಸಲು ರಾಷ್ಟ್ರಪತಿ ಭವನದ ಸಿಬ್ಬಂದಿ ಪ್ರಯಾಸ ಪಟ್ಟರು.<br /> <br /> ಸೇರಿದವರಲ್ಲಿ ಹೆಚ್ಚಿನವರು ಸಚಿನ್ ಅವರಿಗೆ ಅಭಿನಂದನೆ ಸಲ್ಲಿಸಲು ಮತ್ತು ಗೃಹ ಸಚಿವಾಲಯ ಹಂಚಿದ್ದ ಕಿರುಹೊತ್ತಗೆಯಲ್ಲಿ ಹಸ್ತಾಕ್ಷರ ಪಡೆಯಲು ಬಯಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಖ್ಯಾತ ವಿಜ್ಞಾನಿ, ಕರ್ನಾಟಕದ ಪ್ರೊ.ಸಿ.ಎನ್.ಆರ್ ರಾವ್ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರದಾನ ಮಾಡಿದರು.<br /> <br /> ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಕೇವಲ ಆರು ನಿಮಿಷಗಳ ಕಾಲ ನಡೆದ ಸಮಾರಂಭದಲ್ಲಿ ಪ್ರಣವ್ ಮುಖರ್ಜಿ ಅವರು ಈ ಇಬ್ಬರು ಖ್ಯಾತನಾಮರಿಗೆ ‘ಭಾರತ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಿದರು.<br /> <br /> ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಕಳೆದ ನವೆಂಬರ್ 16ರಂದು ನಿವೃತ್ತರಾಗಿದ್ದ 40 ವರ್ಷದ ಸಚಿನ್ ತೆಂಡೂಲ್ಕರ್ ಅವರು ಈ ಗೌರವಕ್ಕೆ ಪಾತ್ರರಾಗಿರುವ ಏಕೈಕ ಕ್ರೀಡಾಪಟುವಾಗಿದ್ದಾರೆ.</p>.<table align="right" border="1" cellpadding="1" cellspacing="1" style="width: 250px;"><tbody><tr><td></td> </tr> <tr> <td> <span style="font-size:10px;">ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ‘ಭಾರತ ರತ್ನ’ ಪ್ರದಾನ ಸಮಾರಂಭದಲ್ಲಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪತ್ನಿ ಅಂಜಲಿ ಹಾಗೂ ಮಗಳು ಸಾರಾ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ</span></td> </tr> </tbody> </table>.<p>ಕಪ್ಪು ಬಣ್ಣದ ಸೂಟ್ ಧರಿಸಿದ್ದ ರಾಜ್ಯಸಭಾ ಸದಸ್ಯರೂ ಆಗಿರುವ ತೆಂಡೂಲ್ಕರ್, ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇತರ ಗಣ್ಯರ ಬಳಿಗೆ ತೆರಳಿ ಕುಶಲೋಪರಿ ವಿಚಾರಿಸಿದರು.<br /> <br /> ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಕೇಂದ್ರ ಸಚಿವರು, ಸಚಿನ್ ಪತ್ನಿ ಅಂಜಲಿ ಪುತ್ರಿ ಸಾರಾ ಸೇರಿದಂತೆ ಹಲವರು ಸಮಾರಂಭದಲ್ಲಿ ಹಾಜರಿದ್ದರು.</p>.<p>ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೊ.ರಾವ್, ‘ಇದು ಶ್ರೇಷ್ಠ ಗೌರವ. ಎಲ್ಲಕ್ಕಿಂತಲೂ ಮಿಗಿಲಾಗಿದ್ದು. ಭಾರತ ನನ್ನನ್ನು ಗೌರವಿಸಿರುವುದನ್ನು ಯಾವುದಕ್ಕೂ ಹೋಲಿಸಲಾಗದು’ ಎಂದು ಹೇಳಿದರು.</p>.<p><br /> ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಸಚಿನ್ ತೆಂಡೂಲ್ಕರ್, ‘ಭಾರತದ ಪರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸುತ್ತೇನೆ. ನಾನು ಕ್ರಿಕೆಟ್ನಲ್ಲಿ ಬ್ಯಾಟಿಂಗ್ ನಿಲ್ಲಿಸಿದ್ದರೂ, ದೇಶದ ಪರ ಕೆಲಸ ಮಾಡಿ ಜನರ ಮೊಗದಲ್ಲಿ ನಗುಮೂಡಿಸಲು ಯತ್ನಿಸುತ್ತೇನೆ’ ಎಂದಷ್ಟೇ ಹೇಳಿದರು.<br /> ಪ್ರಯಾಸಪಟ್ಟ ಸಿಬ್ಬಂದಿ: ಸಮಾರಂಭದಲ್ಲಿ ಸೇರಿದ್ದ ಜನರನ್ನು ನಿಯಂತ್ರಿಸಲು ರಾಷ್ಟ್ರಪತಿ ಭವನದ ಸಿಬ್ಬಂದಿ ಪ್ರಯಾಸ ಪಟ್ಟರು.<br /> <br /> ಸೇರಿದವರಲ್ಲಿ ಹೆಚ್ಚಿನವರು ಸಚಿನ್ ಅವರಿಗೆ ಅಭಿನಂದನೆ ಸಲ್ಲಿಸಲು ಮತ್ತು ಗೃಹ ಸಚಿವಾಲಯ ಹಂಚಿದ್ದ ಕಿರುಹೊತ್ತಗೆಯಲ್ಲಿ ಹಸ್ತಾಕ್ಷರ ಪಡೆಯಲು ಬಯಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>