<p><strong>ಲಖನೌ (ಪಿಟಿಐ):</strong> ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಓರ್ವ ಯುವತಿ ಹಾಗೂ ಆಕೆಯ ಹೆತ್ತವರನ್ನು ಅಪಹರಿಸಿ ತನ್ನ ವಶದಲ್ಲಿರಿಸಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದ ಸಮಾಜವಾದಿ ಪಕ್ಷದ ಮಾಜಿ ಶಾಸಕರೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ 50 ಲಕ್ಷ ರೂ ದಂಡ ವಿಧಿಸಿದೆ.<br /> <br /> ಇಷ್ಟೇ ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ಕಿಶೋರ್ ಸಾಮ್ರಾಟ್ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ಉಮಾನಾಥ ಸಿಂಗ್ ಮತ್ತು ಸತೀಶ್ಚಂದ್ರ ಅವರನ್ನೊಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.<br /> ರಾಹುಲ್ ಗಾಂಧಿ ವಶದಲ್ಲಿರಿಸಿದ್ದಾರೆನ್ನಲಾದ ಯುವತಿ ಸುಕನ್ಯಾಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತಲ್ಲದೆ ವಿಚಾರಣೆಯ ವೇಳೆ ಆಕೆ ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಳು. <br /> <br /> ಸುಕನ್ಯಾಳನ್ನು ಅಪಹರಿಸಲಾಗಿದೆ ಎಂದು ವರದಿ ಪ್ರಕಟಿಸಿದ ವೆಬ್ಸೈಟ್ ವಿರುದ್ಧ ತನಿಖೆ ನಡೆಸಲೂ ನ್ಯಾಯಾಲಯ ಇದೇ ವೇಳೆ ಆದೇಶ ನೀಡಿದೆ.<br /> <br /> ಸುಕನ್ಯಾಳ ಸಂಬಂಧಿ ಎಂದು ಹೇಳಿಕೊಂಡು ಗಜೇಂದ್ರ ಪಾಲ್ ಎಂಬುವವರು ಕೂಡ ರಾಹುಲ್ ಗಾಂಧಿ ವಿರುದ್ಧ ಇದೇ ಆರೋಪ ಹೊರಿಸಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಯುವತಿ ಹಾಗೂ ಆಕೆಯ ಹೆತ್ತವರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ):</strong> ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಓರ್ವ ಯುವತಿ ಹಾಗೂ ಆಕೆಯ ಹೆತ್ತವರನ್ನು ಅಪಹರಿಸಿ ತನ್ನ ವಶದಲ್ಲಿರಿಸಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದ ಸಮಾಜವಾದಿ ಪಕ್ಷದ ಮಾಜಿ ಶಾಸಕರೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ 50 ಲಕ್ಷ ರೂ ದಂಡ ವಿಧಿಸಿದೆ.<br /> <br /> ಇಷ್ಟೇ ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ಕಿಶೋರ್ ಸಾಮ್ರಾಟ್ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ಉಮಾನಾಥ ಸಿಂಗ್ ಮತ್ತು ಸತೀಶ್ಚಂದ್ರ ಅವರನ್ನೊಳಗೊಂಡ ವಿಭಾಗೀಯ ಪೀಠ ಆದೇಶಿಸಿದೆ.<br /> ರಾಹುಲ್ ಗಾಂಧಿ ವಶದಲ್ಲಿರಿಸಿದ್ದಾರೆನ್ನಲಾದ ಯುವತಿ ಸುಕನ್ಯಾಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತಲ್ಲದೆ ವಿಚಾರಣೆಯ ವೇಳೆ ಆಕೆ ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಳು. <br /> <br /> ಸುಕನ್ಯಾಳನ್ನು ಅಪಹರಿಸಲಾಗಿದೆ ಎಂದು ವರದಿ ಪ್ರಕಟಿಸಿದ ವೆಬ್ಸೈಟ್ ವಿರುದ್ಧ ತನಿಖೆ ನಡೆಸಲೂ ನ್ಯಾಯಾಲಯ ಇದೇ ವೇಳೆ ಆದೇಶ ನೀಡಿದೆ.<br /> <br /> ಸುಕನ್ಯಾಳ ಸಂಬಂಧಿ ಎಂದು ಹೇಳಿಕೊಂಡು ಗಜೇಂದ್ರ ಪಾಲ್ ಎಂಬುವವರು ಕೂಡ ರಾಹುಲ್ ಗಾಂಧಿ ವಿರುದ್ಧ ಇದೇ ಆರೋಪ ಹೊರಿಸಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಯುವತಿ ಹಾಗೂ ಆಕೆಯ ಹೆತ್ತವರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>