<p><strong>ನವದೆಹಲಿ: </strong>ಇತ್ತೀಚೆಗೆ ಸಂಭವಿಸುತ್ತಿರುವ ರೈಲು ದುರಂತಗಳ ಹಿಂದೆ ಭಯೋತ್ಪಾದಕರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದೆ.</p>.<p>ಜಗದಾಲ್ಪುರ– ಭುವನೇಶ್ವರ ಹಿರಾಖಂಡ ಎಕ್ಸ್ಪ್ರೆಸ್ ರೈಲು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಎನ್ಐಎ ತಂಡಕ್ಕೆ ಘಟನೆಯ ಹಿಂದೆ ಭಯೋತ್ಪಾದಕರು ಇಲ್ಲವೇ ನಕ್ಸಲರ ಕೈವಾಡವಿರುವ ಬಗ್ಗೆ ಅನುಮಾನ ಮೂಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಡಗಾಂವ್–ದಾದರ್ ರೈಲು ಮಾರ್ಗದ ಹಳಿಗಳ ಮೇಲೆ ಇದೇ ಮಂಗಳವಾರ ದೊಡ್ಡ ಕಬ್ಬಿಣದ ಕಂಬ ಬಿದ್ದಿದ್ದನ್ನು ಜನಶತಾಬ್ದಿ ರೈಲಿನ ಲೋಕೊ ಪೈಲಟ್ ಗಮನಿಸಿ ರೈಲು ನಿಲ್ಲಿಸಿದ್ದರಿಂದ ಭಾರೀ ದುರಂತ ತಪ್ಪಿದೆ. ಈ ರೈಲಿನಲ್ಲಿ 650 ಮಂದಿ ಪ್ರಯಾಣಿಸುತ್ತಿದ್ದರು.</p>.<p>ಬಿಹಾರದ ಸೋನೆಪುರದಲ್ಲಿ ಸಂಭವಿಸಬಹುದಾಗಿದ್ದ ರೈಲು ದುರಂತವೊಂದು ರೈಲ್ವೆ ಹಳಿ ತಪಾಸಣೆ ನಡೆಸುವ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ತಪ್ಪಿತ್ತು. <br /> <br /> ಸೋನೆಪುರ ರೈಲ್ವೆ ವಿಭಾಗದ ಸತ್ಜಗತ್ ಮತ್ತು ದಾಲ್ಸಿಂಗ್ಸರಯ್ ನಡುವಿನ ಹಳಿಯ ಮೇಲೆ ದುಷ್ಕರ್ಮಿಗಳು ಇರಿಸಿದ್ದ ಕಲ್ಲಿನ ಚಪ್ಪಡಿಗಳನ್ನು ತೆರವುಗೊಳಿಸಿದ ರೈಲ್ವೆ ಸಿಬ್ಬಂದಿ ಸಂಭಾವ್ಯ ದುರಂತವನ್ನು ತಪ್ಪಿಸಿದ್ದರು.</p>.<p>ಹಳಿಗಳ ಮೇಲೆ ಕಬ್ಬಿಣದ ಕಂಬ ಹಾಗೂ ಕಲ್ಲು ಚಪ್ಪಡಿಗಳನ್ನು ಎಳೆಯುತ್ತಿರುವುದು ಭಯೋತ್ಪಾದಕ ಕೃತ್ಯವಿರಬಹುದು ಎಂದು ಎನ್ಐಎ ಶಂಕೆ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇತ್ತೀಚೆಗೆ ಸಂಭವಿಸುತ್ತಿರುವ ರೈಲು ದುರಂತಗಳ ಹಿಂದೆ ಭಯೋತ್ಪಾದಕರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದೆ.</p>.<p>ಜಗದಾಲ್ಪುರ– ಭುವನೇಶ್ವರ ಹಿರಾಖಂಡ ಎಕ್ಸ್ಪ್ರೆಸ್ ರೈಲು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಎನ್ಐಎ ತಂಡಕ್ಕೆ ಘಟನೆಯ ಹಿಂದೆ ಭಯೋತ್ಪಾದಕರು ಇಲ್ಲವೇ ನಕ್ಸಲರ ಕೈವಾಡವಿರುವ ಬಗ್ಗೆ ಅನುಮಾನ ಮೂಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಡಗಾಂವ್–ದಾದರ್ ರೈಲು ಮಾರ್ಗದ ಹಳಿಗಳ ಮೇಲೆ ಇದೇ ಮಂಗಳವಾರ ದೊಡ್ಡ ಕಬ್ಬಿಣದ ಕಂಬ ಬಿದ್ದಿದ್ದನ್ನು ಜನಶತಾಬ್ದಿ ರೈಲಿನ ಲೋಕೊ ಪೈಲಟ್ ಗಮನಿಸಿ ರೈಲು ನಿಲ್ಲಿಸಿದ್ದರಿಂದ ಭಾರೀ ದುರಂತ ತಪ್ಪಿದೆ. ಈ ರೈಲಿನಲ್ಲಿ 650 ಮಂದಿ ಪ್ರಯಾಣಿಸುತ್ತಿದ್ದರು.</p>.<p>ಬಿಹಾರದ ಸೋನೆಪುರದಲ್ಲಿ ಸಂಭವಿಸಬಹುದಾಗಿದ್ದ ರೈಲು ದುರಂತವೊಂದು ರೈಲ್ವೆ ಹಳಿ ತಪಾಸಣೆ ನಡೆಸುವ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ತಪ್ಪಿತ್ತು. <br /> <br /> ಸೋನೆಪುರ ರೈಲ್ವೆ ವಿಭಾಗದ ಸತ್ಜಗತ್ ಮತ್ತು ದಾಲ್ಸಿಂಗ್ಸರಯ್ ನಡುವಿನ ಹಳಿಯ ಮೇಲೆ ದುಷ್ಕರ್ಮಿಗಳು ಇರಿಸಿದ್ದ ಕಲ್ಲಿನ ಚಪ್ಪಡಿಗಳನ್ನು ತೆರವುಗೊಳಿಸಿದ ರೈಲ್ವೆ ಸಿಬ್ಬಂದಿ ಸಂಭಾವ್ಯ ದುರಂತವನ್ನು ತಪ್ಪಿಸಿದ್ದರು.</p>.<p>ಹಳಿಗಳ ಮೇಲೆ ಕಬ್ಬಿಣದ ಕಂಬ ಹಾಗೂ ಕಲ್ಲು ಚಪ್ಪಡಿಗಳನ್ನು ಎಳೆಯುತ್ತಿರುವುದು ಭಯೋತ್ಪಾದಕ ಕೃತ್ಯವಿರಬಹುದು ಎಂದು ಎನ್ಐಎ ಶಂಕೆ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>