<p><strong>ನವದೆಹಲಿ (ಐಎಎನ್ಎಸ್):</strong> ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಸೋಮವಾರ ಶ್ರೀಲಂಕಾಕ್ಕೆ ಪ್ರಯಾಣ ಬೆಳಸಲಿದ್ದಾರೆ. ಮೂರು ದಿನಗಳ ಈ ಭೇಟಿಯಲ್ಲಿ ಅವರು ದ್ವೀಪ ರಾಷ್ಟ್ರದೊಂದಿಗೆ ಸ್ನೇಹಬಾಂಧವ್ಯ ಮತ್ತು ಖಾಸಗೀಕರಣ ಪ್ರಕ್ರಿಯೆಗೆ ಒತ್ತು ನೀಡಲಿದ್ದಾರೆ.</p>.<p>ಈ ಸಂದರ್ಭದಲ್ಲಿ ಶ್ರೀಲಂಕಾದ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಮತ್ತು ವಿದೇಶಾಂಗ ಸಚಿವ ಜಿ.ಎಲ್. ಪೆರಿಸ್ ಅವರೊಡನೆ ವಿಸ್ತೃತ ವಿಷಯಗಳ ಕುರಿತು ಕೃಷ್ಣ ಮಾತುಕತೆ ನಡೆಸಲಿದ್ದಾರೆ. <br /> <br /> ದ್ವೀಪರಾಷ್ಟ್ರದಲ್ಲಿನ ಬಿಕ್ಕಟ್ಟು ಮತ್ತು ಅಸ್ಥಿರತೆಗೆ ಮೂಲ ಕಾರಣವಾಗಿರುವ ದಶಕಗಳಷ್ಟು ಹಳೆಯದಾದ ಜನಾಂಗೀಯ ತಮಿಳು ಸಮಸ್ಯೆಗೆ ಅಂತಿಮವಾಗಿ ತುರ್ತು ರಾಜಕೀಯ ಪರಿಹಾರವನ್ನು ಹುಡುಕುವ ಅವಶ್ಯಕತೆಯನ್ನು ಸಚಿವರು ಪುನರುಚ್ಚರಿಸಲಿದ್ದಾರೆ.</p>.<p>ಲಂಕಾದಲ್ಲಿ ರಾಷ್ಟ್ರೀಯ ಸಾಮರಸ್ಯ ಮತ್ತು ರಾಜಕೀಯ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯತೆಗಳ ಬಗ್ಗೆ ಕೃಷ್ಣ ಅಲ್ಲಿನ ನಾಯಕರಿಗೆ ಮನವರಿಕೆ ಮಾಡಿಕೊಡುವ ನಿರೀಕ್ಷೆಯಿದೆ.<br /> <br /> ಸಚಿವರು ತಮಿಳು ರಾಷ್ಟ್ರೀಯ ಮೈತ್ರಿಕೂಟ (ಟಿಎನ್ಎ)ದ ಪ್ರತಿನಿಧಿಗಳನ್ನು ಸಹ ಭೇಟಿಯಾಗಿ, ತಮಿಳು ಪ್ರಾಬಲ್ಯವಿರುವ ಪ್ರಾಂತ್ಯಗಳಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಲಂಕಾ ನಾಯಕರೊಡನೆ ನಡೆಸುವ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. <br /> <br /> ತಮಿಳು ಪ್ರಾಂತ್ಯಗಳಲ್ಲಿ ಭೂ ಮತ್ತು ಪೊಲೀಸ್ ಅಧಿಕಾರಗಳನ್ನು ತಮಗೆ ವರ್ಗಾಯಿಸುವಂತೆ ಟಿಎನ್ಎ ಕೇಳುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ರಾಜಪಕ್ಸೆ, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಆಹ್ವಾನ ನೀಡಿದ್ದಾರೆ.<br /> <br /> ಯುದ್ಧದಿಂದ ನಿರ್ಗತಿಕರಾಗಿರುವ ನಾಗರಿಕರಿಗೆ ಪುನರ್ವಸತಿ ಕಲ್ಪಿಸಲು ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಾಣವಾಗುತ್ತಿರುವ ಸುಮಾರು 50 ಸಾವಿರ ಮನೆಗಳ ಪ್ರಗತಿಯನ್ನು ಕೂಡಾ ಕೃಷ್ಣ ಪರಿಶೀಲಿಸಲಿದ್ದಾರೆ. <br /> <br /> ಭಾರತದ ರಿಯಾಯಿತಿ ಸಹಾಯಧನದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿರುವ ಗಾಲೆಯ ದಕ್ಷಿಣ ರೈಲ್ವೆ ಯೋಜನೆಯನ್ನು ಸಹ ಸಚಿವರು ಉದ್ಘಾಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಸೋಮವಾರ ಶ್ರೀಲಂಕಾಕ್ಕೆ ಪ್ರಯಾಣ ಬೆಳಸಲಿದ್ದಾರೆ. ಮೂರು ದಿನಗಳ ಈ ಭೇಟಿಯಲ್ಲಿ ಅವರು ದ್ವೀಪ ರಾಷ್ಟ್ರದೊಂದಿಗೆ ಸ್ನೇಹಬಾಂಧವ್ಯ ಮತ್ತು ಖಾಸಗೀಕರಣ ಪ್ರಕ್ರಿಯೆಗೆ ಒತ್ತು ನೀಡಲಿದ್ದಾರೆ.</p>.<p>ಈ ಸಂದರ್ಭದಲ್ಲಿ ಶ್ರೀಲಂಕಾದ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಮತ್ತು ವಿದೇಶಾಂಗ ಸಚಿವ ಜಿ.ಎಲ್. ಪೆರಿಸ್ ಅವರೊಡನೆ ವಿಸ್ತೃತ ವಿಷಯಗಳ ಕುರಿತು ಕೃಷ್ಣ ಮಾತುಕತೆ ನಡೆಸಲಿದ್ದಾರೆ. <br /> <br /> ದ್ವೀಪರಾಷ್ಟ್ರದಲ್ಲಿನ ಬಿಕ್ಕಟ್ಟು ಮತ್ತು ಅಸ್ಥಿರತೆಗೆ ಮೂಲ ಕಾರಣವಾಗಿರುವ ದಶಕಗಳಷ್ಟು ಹಳೆಯದಾದ ಜನಾಂಗೀಯ ತಮಿಳು ಸಮಸ್ಯೆಗೆ ಅಂತಿಮವಾಗಿ ತುರ್ತು ರಾಜಕೀಯ ಪರಿಹಾರವನ್ನು ಹುಡುಕುವ ಅವಶ್ಯಕತೆಯನ್ನು ಸಚಿವರು ಪುನರುಚ್ಚರಿಸಲಿದ್ದಾರೆ.</p>.<p>ಲಂಕಾದಲ್ಲಿ ರಾಷ್ಟ್ರೀಯ ಸಾಮರಸ್ಯ ಮತ್ತು ರಾಜಕೀಯ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯತೆಗಳ ಬಗ್ಗೆ ಕೃಷ್ಣ ಅಲ್ಲಿನ ನಾಯಕರಿಗೆ ಮನವರಿಕೆ ಮಾಡಿಕೊಡುವ ನಿರೀಕ್ಷೆಯಿದೆ.<br /> <br /> ಸಚಿವರು ತಮಿಳು ರಾಷ್ಟ್ರೀಯ ಮೈತ್ರಿಕೂಟ (ಟಿಎನ್ಎ)ದ ಪ್ರತಿನಿಧಿಗಳನ್ನು ಸಹ ಭೇಟಿಯಾಗಿ, ತಮಿಳು ಪ್ರಾಬಲ್ಯವಿರುವ ಪ್ರಾಂತ್ಯಗಳಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಲಂಕಾ ನಾಯಕರೊಡನೆ ನಡೆಸುವ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. <br /> <br /> ತಮಿಳು ಪ್ರಾಂತ್ಯಗಳಲ್ಲಿ ಭೂ ಮತ್ತು ಪೊಲೀಸ್ ಅಧಿಕಾರಗಳನ್ನು ತಮಗೆ ವರ್ಗಾಯಿಸುವಂತೆ ಟಿಎನ್ಎ ಕೇಳುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ರಾಜಪಕ್ಸೆ, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಆಹ್ವಾನ ನೀಡಿದ್ದಾರೆ.<br /> <br /> ಯುದ್ಧದಿಂದ ನಿರ್ಗತಿಕರಾಗಿರುವ ನಾಗರಿಕರಿಗೆ ಪುನರ್ವಸತಿ ಕಲ್ಪಿಸಲು ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಾಣವಾಗುತ್ತಿರುವ ಸುಮಾರು 50 ಸಾವಿರ ಮನೆಗಳ ಪ್ರಗತಿಯನ್ನು ಕೂಡಾ ಕೃಷ್ಣ ಪರಿಶೀಲಿಸಲಿದ್ದಾರೆ. <br /> <br /> ಭಾರತದ ರಿಯಾಯಿತಿ ಸಹಾಯಧನದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿರುವ ಗಾಲೆಯ ದಕ್ಷಿಣ ರೈಲ್ವೆ ಯೋಜನೆಯನ್ನು ಸಹ ಸಚಿವರು ಉದ್ಘಾಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>