<p><strong>ಹೈದರಾಬಾದ್ (ಪಿಟಿಐ):</strong> ಗಾಲಿ ಜನಾರ್ದನ ರೆಡ್ಡಿ `ಜಾಮೀನಿಗಾಗಿ ಲಂಚ~ ಪ್ರಕರಣದಲ್ಲಿ ಆಂಧ್ರ ಪ್ರದೇಶದ ಸಚಿವರೊಬ್ಬರು ಕೂಡ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ಇಕ್ಕಟ್ಟಿಗೆ ಸಿಲುಕಿದೆ.<br /> </p>.<table align="right" border="2" cellpadding="2" cellspacing="2" width="300"> <tbody> <tr> <td bgcolor="#003333" style="text-align: center"><span style="color: #ffffff"><strong>ರಾಜಕೀಯ ಬಿಡುವೆ: ಏರಾಸು ಸವಾಲು</strong></span></td> </tr> <tr> <td bgcolor="#f2f0f0"><span style="font-size: small">ಈ ಮಧ್ಯೆ, ಏರಾಸು ಅವರು ತಮ್ಮ ಮೇಲಿನ ಆರೋಪಗಳನ್ನು ಬಲವಾಗಿ ವಿರೋಧಿಸಿದ್ದು, ಆರೋಪ ಸಾಬೀತಾದರೆ ಶಾಶ್ವತವಾಗಿ ರಾಜಕೀಯ ತೊರೆಯುವುದಾಗಿ ಹೇಳಿದ್ದಾರೆ.<br /> <br /> ಕರ್ನೂಲ್ನ ಏರಾಸು, ಶನಿವಾರ ಬೆಳಿಗ್ಗೆ ಹೈದರಾಬಾದ್ಗೆ ಧಾವಿಸಿ, ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರಿಗೆ ಈ ಬಗ್ಗೆ `ಸ್ಪಷ್ಟನೆ~ ನೀಡಿದ್ದಾರೆ. ಅಲ್ಲದೇ ವಿಸ್ತೃತ ತನಿಖೆಗೆ ಆಗ್ರಹಿಸಿದ್ದಾರೆ.<br /> <br /> `ನಾನು ನಿರಪರಾಧಿ. ಈ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಜನಾರ್ದನ ರೆಡ್ಡಿ ನನ್ನ ಸಂಬಂಧಿ ಇರಬಹುದು. ಆದರೆ ಇದರಲ್ಲಿ ನನ್ನ ಪಾತ್ರವೇನೂ ಇಲ್ಲ. ಕೇಂದ್ರ ಸಚಿವರಾಗಿದ್ದ ನನ್ನ ತಂದೆಯ ಕಾಲದಿಂದಲೂ ನಮ್ಮ ಕುಟುಂಬವು ಕಳಂಕ ರಹಿತ ರಾಜಕೀಯ ಇತಿಹಾಸ ಹೊಂದಿದೆ~ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಚಂಚಲಗುಡ ಜೈಲಿನಲ್ಲಿ ನಾನು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿಲ್ಲ. ಜೈಲಿನಲ್ಲಿ ಕೆಲವೊಂದು ಸುಧಾರಣಾ ಕಾರ್ಯಕ್ರಮಗಳನ್ನು ಆರಂಭಿಸಲು ಅಲ್ಲಿಗೆ ಭೇಟಿ ನೀಡಿದ್ದೆ. ಆದರೆ ರೆಡ್ಡಿ ಅವರನ್ನು ಭೇಟಿಯಾಗಿಲ್ಲ. ಒಂದು ವೇಳೆ ನಾನು ಅವರನ್ನು ಭೇಟಿಯಾಗಿದ್ದಿದ್ದರೆ, ರಾಜಾರೋಷವಾಗಿ ಅಲ್ಲಿಗೆ ಯಾಕೆ ಹೋಗುತ್ತೇನೆ?~ ಎಂದು ಅವರು ಪ್ರಶ್ನಿಸಿದರು.</span></td> </tr> </tbody> </table>.<p> ಕಾನೂನು ಸಚಿವ ಏರಾಸು ಪ್ರತಾಪ್ ರೆಡ್ಡಿ ಅವರು ಇಡೀ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಹಾಗೂ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಪಟ್ಟಾಭಿ ರಾಮರಾವ್ ಅವರ ನಡುವೆ ಸಂಧಾನಕಾರರಲ್ಲಿ ಒಬ್ಬರಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಲಾಗಿದೆ.<br /> <br /> ರಾಮರಾವ್, ನಿವೃತ್ತ ನ್ಯಾಯಾಧೀಶ ಟಿ.ವಿ.ಚಲಪತಿ ರಾವ್ ಮತ್ತಿತರರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವ ಸಾಧ್ಯತೆ ಇದ್ದು, ಅವರ ಬಂಧನಕ್ಕೆ ತಯಾರಿ ನಡೆಸಲಾಗಿದೆ. ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಸಿಬಿಐ `ನಿರ್ಣಾಯಕ ಪುರಾವೆ~ ಸಂಗ್ರಹಿಸಿ ಹೈಕೋರ್ಟ್ಗೆ ಸಲ್ಲಿಸಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ಮುಂದಿನ ತನಿಖೆ ನಡೆಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> <strong>ಅಸಹ್ಯಕರ: </strong>ಈ ಹಗರಣದಲ್ಲಿ ಸಚಿವರೊಬ್ಬರು ಸಂಧಾನಕಾರರಾಗಿ ಕೆಲಸ ಮಾಡಿರುವುದು ಅಸಹ್ಯಕರವಾಗಿದೆ ಎಂದು ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿದ್ದಾರೆ.<br /> <br /> `ಈ ಸಚಿವರು ಒಂದೋ ರಾಜೀನಾಮೆ ನೀಡಬೇಕು, ಇಲ್ಲವೇ ಸಂಪುಟದಿಂದ ಅವರನ್ನು ಕೈಬಿಡಬೇಕು~ ಎಂದು ಪಕ್ಷದ ವಕ್ತಾರ ವರ್ಲ ರಾಮಯ್ಯ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಗಾಲಿ ಜನಾರ್ದನ ರೆಡ್ಡಿ `ಜಾಮೀನಿಗಾಗಿ ಲಂಚ~ ಪ್ರಕರಣದಲ್ಲಿ ಆಂಧ್ರ ಪ್ರದೇಶದ ಸಚಿವರೊಬ್ಬರು ಕೂಡ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ಇಕ್ಕಟ್ಟಿಗೆ ಸಿಲುಕಿದೆ.<br /> </p>.<table align="right" border="2" cellpadding="2" cellspacing="2" width="300"> <tbody> <tr> <td bgcolor="#003333" style="text-align: center"><span style="color: #ffffff"><strong>ರಾಜಕೀಯ ಬಿಡುವೆ: ಏರಾಸು ಸವಾಲು</strong></span></td> </tr> <tr> <td bgcolor="#f2f0f0"><span style="font-size: small">ಈ ಮಧ್ಯೆ, ಏರಾಸು ಅವರು ತಮ್ಮ ಮೇಲಿನ ಆರೋಪಗಳನ್ನು ಬಲವಾಗಿ ವಿರೋಧಿಸಿದ್ದು, ಆರೋಪ ಸಾಬೀತಾದರೆ ಶಾಶ್ವತವಾಗಿ ರಾಜಕೀಯ ತೊರೆಯುವುದಾಗಿ ಹೇಳಿದ್ದಾರೆ.<br /> <br /> ಕರ್ನೂಲ್ನ ಏರಾಸು, ಶನಿವಾರ ಬೆಳಿಗ್ಗೆ ಹೈದರಾಬಾದ್ಗೆ ಧಾವಿಸಿ, ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರಿಗೆ ಈ ಬಗ್ಗೆ `ಸ್ಪಷ್ಟನೆ~ ನೀಡಿದ್ದಾರೆ. ಅಲ್ಲದೇ ವಿಸ್ತೃತ ತನಿಖೆಗೆ ಆಗ್ರಹಿಸಿದ್ದಾರೆ.<br /> <br /> `ನಾನು ನಿರಪರಾಧಿ. ಈ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಜನಾರ್ದನ ರೆಡ್ಡಿ ನನ್ನ ಸಂಬಂಧಿ ಇರಬಹುದು. ಆದರೆ ಇದರಲ್ಲಿ ನನ್ನ ಪಾತ್ರವೇನೂ ಇಲ್ಲ. ಕೇಂದ್ರ ಸಚಿವರಾಗಿದ್ದ ನನ್ನ ತಂದೆಯ ಕಾಲದಿಂದಲೂ ನಮ್ಮ ಕುಟುಂಬವು ಕಳಂಕ ರಹಿತ ರಾಜಕೀಯ ಇತಿಹಾಸ ಹೊಂದಿದೆ~ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> `ಚಂಚಲಗುಡ ಜೈಲಿನಲ್ಲಿ ನಾನು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿಲ್ಲ. ಜೈಲಿನಲ್ಲಿ ಕೆಲವೊಂದು ಸುಧಾರಣಾ ಕಾರ್ಯಕ್ರಮಗಳನ್ನು ಆರಂಭಿಸಲು ಅಲ್ಲಿಗೆ ಭೇಟಿ ನೀಡಿದ್ದೆ. ಆದರೆ ರೆಡ್ಡಿ ಅವರನ್ನು ಭೇಟಿಯಾಗಿಲ್ಲ. ಒಂದು ವೇಳೆ ನಾನು ಅವರನ್ನು ಭೇಟಿಯಾಗಿದ್ದಿದ್ದರೆ, ರಾಜಾರೋಷವಾಗಿ ಅಲ್ಲಿಗೆ ಯಾಕೆ ಹೋಗುತ್ತೇನೆ?~ ಎಂದು ಅವರು ಪ್ರಶ್ನಿಸಿದರು.</span></td> </tr> </tbody> </table>.<p> ಕಾನೂನು ಸಚಿವ ಏರಾಸು ಪ್ರತಾಪ್ ರೆಡ್ಡಿ ಅವರು ಇಡೀ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಹಾಗೂ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಪಟ್ಟಾಭಿ ರಾಮರಾವ್ ಅವರ ನಡುವೆ ಸಂಧಾನಕಾರರಲ್ಲಿ ಒಬ್ಬರಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಲಾಗಿದೆ.<br /> <br /> ರಾಮರಾವ್, ನಿವೃತ್ತ ನ್ಯಾಯಾಧೀಶ ಟಿ.ವಿ.ಚಲಪತಿ ರಾವ್ ಮತ್ತಿತರರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವ ಸಾಧ್ಯತೆ ಇದ್ದು, ಅವರ ಬಂಧನಕ್ಕೆ ತಯಾರಿ ನಡೆಸಲಾಗಿದೆ. ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಸಿಬಿಐ `ನಿರ್ಣಾಯಕ ಪುರಾವೆ~ ಸಂಗ್ರಹಿಸಿ ಹೈಕೋರ್ಟ್ಗೆ ಸಲ್ಲಿಸಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ಮುಂದಿನ ತನಿಖೆ ನಡೆಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> <strong>ಅಸಹ್ಯಕರ: </strong>ಈ ಹಗರಣದಲ್ಲಿ ಸಚಿವರೊಬ್ಬರು ಸಂಧಾನಕಾರರಾಗಿ ಕೆಲಸ ಮಾಡಿರುವುದು ಅಸಹ್ಯಕರವಾಗಿದೆ ಎಂದು ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿದ್ದಾರೆ.<br /> <br /> `ಈ ಸಚಿವರು ಒಂದೋ ರಾಜೀನಾಮೆ ನೀಡಬೇಕು, ಇಲ್ಲವೇ ಸಂಪುಟದಿಂದ ಅವರನ್ನು ಕೈಬಿಡಬೇಕು~ ಎಂದು ಪಕ್ಷದ ವಕ್ತಾರ ವರ್ಲ ರಾಮಯ್ಯ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>