ಮಹಿಳೆಯ ತಂದೆ ಪರ ವಾದ ಮಂಡಿಸಿದ ವಕೀಲ ಕೆ.ಎಂ.ಅಶೋಕನ್, ’ಬಹಿರಂಗ ವಿಚಾರಣೆಯನ್ನು ಬದಲಾವಣೆ ಮಾಡದಿದ್ದರೆ ಯಾವುದೇ ರೀತಿ ಪ್ರಯೋಜನವಿಲ್ಲ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ನ್ಯಾಯಾಲಯದಲ್ಲಿ ಬಹಿರಂಗ ವಿಚಾರಣೆ ಸಲ್ಲದು. ಕೆಲವು ಸಂಘಟನೆಗಳಿಂದ ತಂದೆ ಮತ್ತು ಮಗಳ ಸುರಕ್ಷತೆಯೂ ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.